AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ತೀರಿಸಲು ತಂದೆಯಿಂದಲೇ ಮಗು ಮಾರಾಟ..? ಆರೋಪಿ ಪೊಲೀಸ್​ ವಶಕ್ಕೆ

ಒಂದು ಮಗುವನ್ನು ಹೆರಲು ತಾಯಿ ಪಡುವ ಕಷ್ಟ ಅಷ್ಟಿಷ್ಟಲ್ಲ, ಇಷ್ಟೇಲ್ಲ ಕಷ್ಟುಪಟ್ಟು ಹೆತ್ತ ಮಗುವನ್ನು ತಂದೆಯೇ ಇನ್ನೊಂದು ಮಹಿಳೆಗೆ ಮಾರಾಟ ಮಾಡಿರುವ ಆರೋಪ ಕೋಲಾರ ಜಿಲ್ಲೆಯ ಬಂಗಾರಪೇಟೆ(Bangarapet)ಯಲ್ಲಿ ಕೇಳಿಬಂದಿದೆ. ಈ ಹಿನ್ನಲೆ ಕರಳು ಕುಡಿಯನ್ನು ಹುಡುಕಿ ಕೊಡುವಂತೆ ತಾಯಿ ಬಂಗಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಾಲ ತೀರಿಸಲು ತಂದೆಯಿಂದಲೇ ಮಗು ಮಾರಾಟ..? ಆರೋಪಿ ಪೊಲೀಸ್​ ವಶಕ್ಕೆ
ಮಗುವಿಗಾಗಿ ತಾಯಿಯ ಅಳಲು, ಆರೋಪಿ ತಂದೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:May 14, 2024 | 2:50 PM

Share

ಕೋಲಾರ, ಮೇ.14: ಸಾಲ ತೀರಿಸಲು ತಂದೆಯೇ ಗಂಡು ಮಗುವನ್ನು ಮಾರಾಟ ಮಾಡಿದ ಆರೋಪ ಕೋಲಾರ ಜಿಲ್ಲೆಯ ಬಂಗಾರಪೇಟೆ(Bangarapet)ಯಲ್ಲಿ ಕೇಳಿಬಂದಿದೆ. ಇದೀಗ ಮಗು ಮಾರಾಟ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪೇಟೆ ನಗರ ನಿವಾಸಿಗಳಾದ ಮುನಿರಾಜು ಹಾಗೂ ಪವಿತ್ರ ದಂಪತಿಗಳಿಗೆ 2023ರ ಜೂನ್ 21ರಂದು ಗಂಡು ಮಗು ಜನಿಸಿತ್ತು.

ಬಳಿಕ ಹಣದಾಸೆಗೆ ತಂದೆಯೇ ಕೆರೆಕೋಡಿ ನಿವಾಸಿಯ ವಲ್ಲಿ ಎಂಬ ಮಹಿಳೆಗೆ  ಮಗುವನ್ನು ಮಾರಾಟ ಮಾಡಿರುವ ಆರೋಪದ ಹಿನ್ನಲೆ ಮಗುವಿನ ತಾಯಿ ಪವಿತ್ರಾ ಅವರು ಮಗುವನ್ನ ವಾಪಸ್ ಕೊಡಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ , ಮಹಿಳಾ ಆಯೋಗ ಮತ್ತು ಬಂಗಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ದುಶ್ಚಟಗಳ ದಾಸನಾಗಿರುವ ಭಿಕ್ಷುಕ ತಂದೆಯಿಂದ ಹೆಣ್ಣು ಮಗು ಮಾರಾಟ, ಭಿಕ್ಷುಕ ದಂಪತಿಯನ್ನು ವಶಕ್ಕೆ ಪಡೆದ ಪೊಲೀಸ್

ಹಾಸನದಲ್ಲೂ ನಡೆದಿತ್ತು ಇಂತಹುದೇ ಅಮಾನವೀಯ ಘಟನೆ

ಇನ್ನು ಕಳೆದ ಜನವರಿ 4 ರಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಗ್ರಾಮದಲ್ಲಿ ತಾಯಿಯೊಬ್ಬರು ತನಗೆ ಹುಟ್ಟಿದ ಗಂಡು ಮಗುವನ್ನ ಜನಿಸಿದ ಒಂದೇ ದಿನಕ್ಕೆ ಅದ್ಯಾರದೋ ಒತ್ತಡಕ್ಕೆ ಸಿಲುಕಿ ಮಾರಾಟ ಮಾಡಿದ್ದ ಘಟನೆ ನಡೆದಿತ್ತು. ಜೊತೆಗೆ ಈ ಪ್ರಕರಣದಲ್ಲಿ ತಾಯಿ, ಆಶಾಕಾರ್ಯಕರ್ತೆ ಸೇರಿ ಐವರನ್ನು ಬಂಧಿಸಲಾಗಿತ್ತು. ತಾಯಿಗೆ ಬೆದರಿಕೆ ಹಾಕಿ ಮಗುವನ್ನ ಮಾರಾಟ ಮಾಡಿದ ಬಗ್ಗೆಯೂ ಅನುಮಾನವಿದೆ ಎಂದು ಈ ಘಟನೆ ಕುರಿತು ಸಮಗ್ರ ತನಿಖೆಗೆ ಪೊಲೀಸರು ಮುಂದಾಗಿದ್ದರು.

ಇನ್ನು ಹೊಸಳ್ಳಿಯ ಸುಬ್ರಹ್ಮಣ್ಯ ಎಂಬುವವರ ಕಾಫಿ ತೋಟದ ಲೈನ್ ಮನೆಯಲ್ಲಿ ನೆಲೆಸಿದ್ದ ಮಹಿಳೆ ಗಿರಿಜಾ ಎಂಬುವವರಿಗೆ ನವೆಂಬರ್ 15ರಂದು ಹೆತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಗಂಡು ಮಗು ಜನಿಸಿತ್ತು. ಇದಾದ ಒಂದೇ ದಿನಕ್ಕೆ ಅಂದರೆ ನವೆಂಬರ್ 16ರಂದು ಚಿಕ್ಕಮಗಳೂರು ಮೂಲದ ಮಹಿಳೆಯೊಬ್ಬರಿಗೆ ಮಗುವನ್ನ ಮಾರಾಟ ಮಾಡಲಾಗಿದೆ ಎನ್ನೋ ಬಗ್ಗೆ ಅನುಮಾನ ವ್ಯಕ್ತಪಡಿಸಿ ಹಾಸನದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ದೂರೊಂದು ಬಂದಿತ್ತು. ಈ ಕುರಿತು ಆರೋಪಿಗಳೆಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಗುವನ್ನ ಕಾನೂನು ಬಾಹಿರವಾಗಿ ಹಸ್ತಾಂತರ ಮಾಡಲಾಗಿರುವ ಪ್ರಕರಣ ಬಯಲಾಗಿತ್ತು. ಇದೀಗ ಇಂತಹ ಪ್ರಕರಣ ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Tue, 14 May 24

Follow Us
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ