AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದು ನಡು ರಸ್ತೆಯಲ್ಲಿ ಹುಟ್ಟುಹಬ್ಬ ಆಚರಣೆ; ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ, ಯುವಕರು ಅರೆಸ್ಟ್

ಕೋಲಾರ ನಗರದ ಕುರುಬರ ಪೇಟೆ ಬಳಿಯ ಮದ್ಯ ರಸ್ತೆಯಲ್ಲಿ ಶ್ರೀಕಾಂತ್ ಹಾಗೂ ಅನಿಲ್ ಸ್ನೇಹಿತರು ರಸ್ತೆಯಲ್ಲಿ ಹುಟ್ಟು ಹಬ್ಬ ಆಚರಣೆ ಮಾಡಿದ್ದಾರೆ. ಈ ವೇಳೆ ಆಚರಣೆ ತಡೆಯಲು ಹೋದ ಪೊಲೀಸರ ಮೇಲೆಯೇ ಯುವಕರು ಹಲ್ಲೆಗೆ ಯತ್ನಿಸಿದ್ದು ಕೋಲಾರ ನಗರ ಪೊಲೀಸರು ಯುವಕರನ್ನ ವಶಕ್ಕೆ ಪಡೆದಿದ್ದಾರೆ.

ಕುಡಿದು ನಡು ರಸ್ತೆಯಲ್ಲಿ ಹುಟ್ಟುಹಬ್ಬ ಆಚರಣೆ; ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ, ಯುವಕರು ಅರೆಸ್ಟ್
ಕುಡಿದು ನಡು ರಸ್ತೆಯಲ್ಲಿ ಹುಟ್ಟುಹಬ್ಬ ಆಚರಣೆ; ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ, ಯುವಕರು ಅರೆಸ್ಟ್
TV9 Web
| Edited By: |

Updated on:Mar 15, 2022 | 8:56 PM

Share

ಕೋಲಾರ: ಕುಡಿದ ಮತ್ತಿನಲ್ಲಿ ಮಧ್ಯ ರಸ್ತೆಯಲ್ಲಿ ಯುವಕರು ಹುಟ್ಟುಹಬ್ಬ ಆಚರಿಸಿ ರಂಪಾಟ ನಡೆಸಿರುವ ಘಟನೆ ನಡೆದಿದೆ. ಕೋಲಾರ ನಗರದ ಕುರುಬರ ಪೇಟೆ ಬಳಿಯ ಮದ್ಯ ರಸ್ತೆಯಲ್ಲಿ ಶ್ರೀಕಾಂತ್ ಹಾಗೂ ಅನಿಲ್ ಸ್ನೇಹಿತರು ರಸ್ತೆಯಲ್ಲಿ ಹುಟ್ಟು ಹಬ್ಬ ಆಚರಣೆ ಮಾಡಿದ್ದಾರೆ. ಈ ವೇಳೆ ಆಚರಣೆ ತಡೆಯಲು ಹೋದ ಪೊಲೀಸರ ಮೇಲೆಯೇ ಯುವಕರು ಹಲ್ಲೆಗೆ ಯತ್ನಿಸಿದ್ದು ಕೋಲಾರ ನಗರ ಪೊಲೀಸರು ಯುವಕರನ್ನ ವಶಕ್ಕೆ ಪಡೆದಿದ್ದಾರೆ.

ಕುಡಿದ ಮತ್ತಿನಲ್ಲಿ ರಸ್ತೆ ಬಂದ್ ಮಾಡಿ ನಡು ರಸ್ತೆಯಲ್ಲಿ ಹುಟ್ಟಿದ ಹಬ್ಬ ಆಚರಣೆಗೆ ಮುಂದಾದಾಗ ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ ಆಗ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಆಗ ಜನರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ಕೊಟ್ಟಾಗ ಸ್ಥಳಕ್ಕೆ ಬಂದ ಕೋಲಾರ ನಗರ ಠಾಣೆ ಪೊಲೀಸರು ಇಬ್ಬರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

ಇಂಥಾದೊಂದು ಘಟನೆ ಕೋಲಾರ ನಗರದ ಕುರುಬರಪೇಟೆಯಲ್ಲಿ ನಡೆದಿದೆ, ಬಂಗಾರಪೇಟೆ ಬಾಗೇಪಲ್ಲಿ ಮುಖ್ಯ ರಸ್ತೆಯ ಕುರುಬರಪೇಟೆ ಬಳಿ ಮುಡುದ ಮತ್ತಿನಲ್ಲಿದ್ದ ಯುವಕರ ತಂಡ ಏಕಾಏಕಿ ರಸ್ತೆ ಬಂದ್ ಮಾಡಿ ಶ್ರೀಕಾಂತ್ ಹಾಗೂ ಅನಿಲ್ ಹುಟ್ಟು ಹಬ್ಬ ಆಚರಣೆಗೆ ಮುಂದಾದಾಗ ಸಾರ್ವಜನಿಕರು ಪ್ರಶ್ನೆ ಮಾಡಿದಾಗ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ, ನಂತರ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಬಂದ‌ ಪೊಲೀಸರು ಯುವಕರನ್ನು ವಶಕ್ಕೆ ಪಡೆಯಲು ಹೋದಾಗ ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದಾರೆ, ನಂತರ ಪೊಲೀಸರು ಇಬ್ಬರು ಯುವಕರನ್ನು ವಶಕ್ಕೆ ಪಡೆದು ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.

ಜೆ.ಸಿ.ನಗರ: ಕುಡಿದ ಅಮಲಿನಲ್ಲಿ ಎಟಿಎಂ ಕೇಂದ್ರದಲ್ಲಿ ದರೋಡೆಗೆ ಯತ್ನ ಬೆಂಗಳೂರು: ಕುಡಿದ ಅಮಲಿನಲ್ಲಿ ಖಾಸಗಿ ಬ್ಯಾಂಕಿನ ಎಟಿಎಂ ಕೇಂದ್ರದಲ್ಲಿ ದರೋಡೆಗೆ ಯತ್ನಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಜೆ.ಸಿ. ನಗರ ಪೊಲೀಸರಿಂದ ಕೊಂಡಯ್ಯ (35) ಎಂಬಾತನನ್ನು ಬಂಧಿಸಿದ್ದಾರೆ. ಎಂಆರ್​ಎಸ್​ ಪಾಳ್ಯದ HDFC ಬ್ಯಾಂಕ್​ ಎಟಿಎಂನಲ್ಲಿ ಈ ಕುಕೃತ್ಯ ನಡೆದಿದೆ. ಖಾಸಗಿ ಕಚೇರಿಯಲ್ಲಿ ಹೌಸ್​ಕೀಪಿಂಗ್​ ಕೆಲಸ ಮಾಡುತ್ತಿದ್ದ ಕೊಂಡಯ್ಯ ಕುಡಿದ ಅಮಲಿನಲ್ಲಿ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದ.

ಸಿಸಿ ಕ್ಯಾಮರಾ ಒಡೆದುಹಾಕಿ, ಎಟಿಎಂ ಒಡೆಯಲು ಪ್ರಯತ್ನಿಸಿದ್ದ. ಆ ವೇಳೆ ಎಟಿಎಂ ನಿರ್ವಹಣಾ ಕೇಂದ್ರಕ್ಕೆ ಅಲರ್ಟ್​ ಸಂದೇಶ ಹೋಗಿತ್ತು. ಸದರಿ ನಿರ್ವಹಣಾ ಕೇಂದ್ರದವರು ತಕ್ಷಣ ಜೆ.ಸಿ. ನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬರುವ ವೇಳೆಗೆ ದರೋಡೆಗೆ ಯತ್ನಿಸಿ ಪರಾರಿಯಾಗಿದ್ದ ಕೊಂಡಯ್ಯ. ವಿಫಲ ಯತ್ನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನ ಪೊಲೀಸರು ತಕ್ಷಣ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಚುನಾವಣೆಯಲ್ಲಿ ಭಾರೀ ಮುಖಭಂಗ; ಐದೂ ರಾಜ್ಯಗಳ ಕಾಂಗ್ರೆಸ್​ ಅಧ್ಯಕ್ಷರಿಗೆ ರಾಜೀನಾಮೆ ನೀಡಲು ಸೋನಿಯಾ ಗಾಂಧಿ ಆದೇಶ

ಪುನೀತ್​​ ಬಯೋಗ್ರಫಿ ‘ನೀನೆ ರಾಜಕುಮಾರ’ ರಿಲೀಸ್ ಮಾಡಿದ ಕಿಚ್ಚ ಸುದೀಪ್​ ಹೇಳಿದ್ದೇನು?

Published On - 8:11 pm, Tue, 15 March 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?