AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ RTO ಅಧಿಕಾರಿಗಳ ಭರ್ಜರಿ ಬೇಟೆ; 32 ಖಾಸಗಿ ಬಸ್​ಗಳು ಸೀಜ್

ಕೋಲಾರದಲ್ಲಿ ಅಂತಾರಾಜ್ಯ ಖಾಸಗಿ ಬಸ್‌ಗಳಿಗೆ ಸಾರಿಗೆ ಇಲಾಖೆ ಶಾಕ್ ನೀಡಿದ್ದು, RTO ಅಧಿಕಾರಿಗಳು 32 ಖಾಸಗಿ ಬಸ್‌ಗಳನ್ನು ಜಪ್ತಿ ಮಾಡಿದ್ದಾರೆ. ತೆರಿಗೆ ವಂಚನೆ, ಸುರಕ್ಷತಾ ಸಾಧನಗಳ ಕೊರತೆ, FC ಇಲ್ಲದಿರುವುದು ಹಾಗೂ ತುರ್ತು ನಿರ್ಗಮನ ದ್ವಾರಗಳಿಲ್ಲದಿರುವಿಕೆ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ. ಒಂದು ಕೋಟಿಗೂ ಅಧಿಕ ದಂಡ ವಸೂಲಿ ಮಾಡಲಾಗಿದೆ.

ಕೋಲಾರದಲ್ಲಿ RTO ಅಧಿಕಾರಿಗಳ ಭರ್ಜರಿ ಬೇಟೆ; 32 ಖಾಸಗಿ ಬಸ್​ಗಳು ಸೀಜ್
ಕೋಲಾರದಲ್ಲಿ RTO ಅಧಿಕಾರಿಗಳ ಭರ್ಜರಿ ಬೇಟೆ; 32 ಖಾಸಗಿ ಬಸ್​ಗಳು ಸೀಜ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಭಾವನಾ ಹೆಗಡೆ|

Updated on: Nov 27, 2025 | 8:30 AM

Share

ಕೋಲಾರ, ನವೆಂಬರ್ 27: 20 ಜೀವ ಬಲಿ ಪಡೆದ ಆಂಧ್ರದ ಕರ್ನೂಲು ಬಸ್‌ ದುರಂತದ (Andhra Pradesh bus tragedy) ಬಳಿಕ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಅಂತಾರಾಜ್ಯ ಖಾಸಗಿ ಬಸ್‌ಗಳಿಗೆ ಕೋಲಾರದಲ್ಲಿ RTO ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಆಂಧ್ರ, ತಮಿಳುನಾಡು ಸೇರಿ ವಿವಿಧ ರಾಜ್ಯಗಳಿಗೆ ಸಂಚರಿಸುತ್ತಿದ್ದ ಹಲವು ಖಾಸಗಿ ಟ್ರಾವಲ್ಸ್‌ಗಳ ಬಸ್‌ಗಳನ್ನು ಸೀಜ್ ಮಾಡಿದ್ದಾರೆ.

ಕೋಟಿಗಟ್ಟಲೆ ದಂಡ ವಸೂಲಿ

RTO ಅಧಿಕಾರಿಗಳು ಕೋಲಾರದಲ್ಲಿ ಬುಧವಾರ (ನ.26) ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, 32 ಖಾಸಗಿ ಬಸ್​ಗಳನ್ನು ಜಪ್ತಿ ಮಾಡಿದ್ದಾರೆ. ರಾಜ್ಯದ ತೆರಿಗೆ ಪಾವತಿಸದಿರುವುದು, ಸುರಕ್ಷತಾ ಸಾಧನಗಳ ಕೊರತೆ, ಎಫ್‌ಸಿ ಇಲ್ಲದಿರುವುದು, ತುರ್ತು ನಿರ್ಗಮ ದ್ವಾರಗಳು ಇಲ್ಲದಿರುವುದು ಸೇರಿ ಬಸ್​​ಗಳು ಪರವಾನಿಗೆ ಇರದೆ ನಿಯಮ ಉಲ್ಲಂಘಿಸಿರುವುದು ದಾಳಿ ವೇಳೆ ಕಂಡು ಬಂದವು. 32 ವಿವಿಧ ಕಂಪನಿಗೆ ಸೇರಿದ ಮಲ್ಟಿಎಕ್ಸೆಲ್, ಸ್ಲೀಪರ್‌ ಕೋಚ್, ಐಷಾರಾಮಿ ಎಸಿ ಟ್ರಾವಲ್ಸ್‌ ಬಸ್‌ಗಳನ್ನ ಜಪ್ತಿ ಮಾಡಲಾಗಿದ್ದು, ಜಂಟಿ ಸಾರಿಗೆ ಆಯುಕ್ತರಾದ ಗಾಯತ್ರಿದೇವಿ ನೇತೃತ್ವದಲ್ಲಿ 15 ಅಧಿಕಾರಿಗಳ 4 ತಂಡ ನಿಯಮ ಉಲ್ಲಂಘಿಸಿದವರಿಂದ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ್ದಾರೆ.

ಇದನ್ನೂ ಓದಿ ಕರ್ನೂಲ್ ಬಸ್ ದುರಂತ: ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ಹೇಗೆ? ಅಸಲಿ ಕಾರಣವೇನು?

ಖಾಸಗಿ ಬಸ್‌ಗಳ ಪರಿಶೀಲನೆ ವೇಳೆ ಸಾಕಷ್ಟು ಲೋಪಗಳು ಕಂಡು ಬಂದಿದ್ದು, ಪ್ರಯಾಣಿಕರು ಅಸಮಾಧಾನದಿಂದಲೇ KSRTC ಬಸ್‌ಗಳಿಗೆ ವರ್ಗಾವಣೆಯಾಗಿದ್ದಾರೆ. ಮತ್ತೊಂದೆಡೆ ಅಧಿಕಾರಿಗಳ ದಾಳಿಗೆ ಖಾಸಗಿ ಟ್ರಾವೆಲ್ಸ್‌ ಕಿಡಿಕಾರಿದ್ದು, ದಾಳಿ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ