AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ತಾಲೂಕು ಕಚೇರಿ ವಿರುದ್ಧ ಸಾರ್ವಜನಿಕರಿಂದ ಸರಣಿ ದೂರು: ಲೋಕಾಯುಕ್ತ ದಿಢೀರ್ ದಾಳಿ

ಲಂಚ ಕೊಡದೇ ಯಾವುದೇ ಕೆಲಸ ಆಗುವುದಿಲ್ಲ ಎಂಬ ದೂರು ಹಿನ್ನೆಲೆ ಕೋಲಾರ ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳಿಂದ ತಹಶೀಲ್ದಾರ್ ಹರ್ಷವರ್ಧನ್ ಮತ್ತು ತಾಲೂಕು ಕಚೇರಿ ಎಲ್ಲಾ ಕೊಠಡಿಯಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ. ದಾವಣಗೆರೆಯಲ್ಲಿ ವಿಕಲಚೇತನರಿಂದ ಲಂಚ ಸ್ವೀಕರಿಸುವಾಗ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿರುವಂತಹ ಘಟನ ನಡೆದಿತ್ತು.

ಕೋಲಾರ ತಾಲೂಕು ಕಚೇರಿ ವಿರುದ್ಧ ಸಾರ್ವಜನಿಕರಿಂದ ಸರಣಿ ದೂರು: ಲೋಕಾಯುಕ್ತ ದಿಢೀರ್ ದಾಳಿ
ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Feb 12, 2024 | 4:25 PM

Share

ಕೋಲಾರ, ಫೆಬ್ರವರಿ 12: ಸಾರ್ವಜನಿಕರಿಂದ ತಾಲೂಕು ಕಚೇರಿ ವಿರುದ್ಧ ಸರಣಿ ದೂರು ಬಂದ ಹಿನ್ನಲೆ ಸೋಮವಾರ ಲೋಕಾಯುಕ್ತ (Lokayukta) ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಲೋಕಾಯುಕ್ತ ಮತ್ತು ಕೋಲಾರ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ಲಂಚ ಕೊಡದೇ ಯಾವುದೇ ಕೆಲಸ ಆಗುವುದಿಲ್ಲ ಎಂದು ದೂರು ನೀಡಲಾಗಿದೆ. ಲೋಕಾಯುಕ್ತ ಅಧಿಕಾರಿಗಳಿಂದ ತಹಶೀಲ್ದಾರ್ ಹರ್ಷವರ್ಧನ್ ಮತ್ತು ತಾಲೂಕು ಕಚೇರಿ ಎಲ್ಲಾ ಕೊಠಡಿಯಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ.

ವಿಕಲಚೇತನರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಆಡಳಿತಾಧಿಕಾರಿ 

ದಾವಣಗೆರೆ: ವಿಕಲಚೇತನರಿಂದ ಲಂಚ ಸ್ವೀಕರಿಸುವಾಗ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬಸವನಹಳ್ಳಿ ಗ್ರಾಮದ ನರಸಿಂಹ ಸ್ವಾಮೀ‌ ದೇವಸ್ಥಾನದ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದಿದ್ದಾರೆ. ನ್ಯಾಮತಿಯ ಗ್ರಾಮ ಆಡಳಿತಾಧಿಕಾರಿ ಗಣೇಶ್ ಕೆಜಿ ಲೋಕಾಯುಕ್ತರ ಬಲೆಗೆ ಬಿದ್ದ ಅಧಿಕಾರಿ.

ಇದನ್ನೂ ಓದಿ:  Lokayukta Raids: ಬೆಂಗಳೂರು ಸೇರಿ ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ

ಕುಂಕುವಾ ಗ್ರಾಮದ ವೀರೇಶ್ ಅವರ ಸಹೋದರ ಹರ್ಷ ಎಂಬುವರಿಗೆ ಅಂಗವಿಕ ಪ್ರಮಾಣ ಪತ್ರ ನೀಡಲು ಆರು ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ ಗಣೇಶ್. ಐದು ಸಾವಿರ ರೂಪಾಯಿ‌ ಲಂಚ ಸ್ವೀಕರಿಸುವಾಗ ಲೋಕಾಯಕ್ತರ ಬಲೆಗೆ ಬಿದಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪೂರೆ ನೇತ್ರತ್ವದಲ್ಲಿ ಡಿಎಸ್ಪಿ ಕೆ. ಕಲಾವತಿ, ಇನ್ಸ್ ಪೇಕ್ಟರ್ ಗಳಾದ ಎಚ್ ಎಸ್ ರಾಷ್ಟ್ರಪತಿ, ಮುಧುಮೂದನ್ ದಾಳಿ ಮಾಡಲಾಗಿತ್ತು.

ಸ್ಟೋನ್ ಕ್ರಷರ್ ಮಾಲೀಕನ ಮನೆ ಹಾಗೂ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ

ಉಡುಪಿ: ಕಾರ್ಕಳ ತಾಲೂಕಿನ ನಿಟ್ಟೆ ಮಹಾಗಣಪತಿ ಸ್ಟೋನ್ ಕ್ರಷರ್ ಮಾಲೀಕನ ಮನೆ ಹಾಗೂ ಕಚೇರಿಗೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಎರಡು ಇನೋವಾ ಕಾರಿನಲ್ಲಿ ಬಂದಿದ್ದ 12 ಜನ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದರು. ತೀರ್ಥಹಳ್ಳಿಯ ನ್ಯಾಷನಲ್ ಕನ್ ಸ್ಟ್ರಕ್ಷನ್​ನಲ್ಲಿ ಅಕ್ರಮದ ಅರೋಪದ ಹಿನ್ನಲೆಯಲ್ಲಿ ಇಡಿ ದಾಳಿ ನಡೆದಿತ್ತು.

ಇದನ್ನೂ ಓದಿ: Lokayukta Raid: ಕರ್ನಾಟಕದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ಅಧಿಕಾರಿಗಳು ಶಾಕ್

ನ್ಯಾಷನಲ್ ಕನ್ ಸ್ಟ್ರಕ್ಷನ್​ಗೆ ಗುಂಡ್ಯಡ್ಕದ ದಿನೇಶ್ ಶೆಟ್ಟಿ ಮಾಲೀಕತ್ವದ ಮಹಾಗಣಪತಿ ಕನ್ ಸ್ಟ್ರಕ್ಷನ್ ಮೆಟೀರಿಯಲ್ಸ್ ಪೂರೈಸುತ್ತಿತ್ತು. ಈ ಕಾರಣಕ್ಕಾಗಿ ದಾಳಿ ನಡೆಸಿದ ಅಧಿಕಾರಿಗಳು ಮಾಲೀಕ ಮತ್ತು ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಕ್ರಷ‌ರ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ, ಕ್ರಷ‌ರ್ ಮಾಲೀಕನ ಕಾರ್ಕಳ ಸಮೀಪದ ಸುಧೀಂದ್ರ ರೆಸಿಡೆನ್ಸಿಯಲ್ಲಿರುವ ಪ್ಲಾಟ್ ಮೇಲೂ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿತ್ತು. ಸತತ ನಾಲ್ಕು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ