ಕೋಲಾರ: ಕುಡಿದ ಮತ್ತಿನಲ್ಲಿ ಬಾರ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಎಎಸ್​ಐ ಅಮಾನತು

ಕಳೆದ ಶನಿವಾರ ಬಂಗಾರಪೇಟೆ ವೃತ್ತದಲ್ಲಿರುವ ಬಾರ್​ನ​​ ಸಿಬ್ಬಂದಿ ತನಗೆ ನಮಸ್ಕಾರ ಹೇಳಿಲ್ಲವೆಂದು ಕುಡಿದ ಮತ್ತಿನಲ್ಲಿ ಎಎಸ್​ಐ ನಾರಾಯಣಸ್ವಾಮಿ ಗಲಾಟೆ ಮಾಡಿದ್ದಾರೆ. ಅಲ್ಲದೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಎಎಸ್​​ಐ ಗಲಾಟೆ ಮಾಡಿರುವ ವಿಡಿಯೋ ವೈರಲ್​​ ಆಗಿದೆ.

ಕೋಲಾರ: ಕುಡಿದ ಮತ್ತಿನಲ್ಲಿ ಬಾರ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಎಎಸ್​ಐ ಅಮಾನತು
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on: Nov 17, 2023 | 10:08 AM

ಕೋಲಾರ ನ.17: ಕೋಲಾರ (Kolar) ಗ್ರಾಮಾಂತರ ಪೊಲೀಸ್​ (Police) ಠಾಣೆಯ ಎಎಸ್ಐ ನಾರಾಯಣಸ್ವಾಮಿ ಅವರನ್ನು ಅಮಾನತುಗೊಳಿಸಿ (Suspend) ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ನಾರಾಯಣ ಆದೇಶ ಹೊರಡಿಸಿದ್ದಾರೆ. ಕಳೆದ ಶನಿವಾರ ಬಂಗಾರಪೇಟೆ ವೃತ್ತದಲ್ಲಿರುವ ಬಾರ್​ನ​​ ಸಿಬ್ಬಂದಿ ತನಗೆ ನಮಸ್ಕಾರ ಹೇಳಿಲ್ಲವೆಂದು ಕುಡಿದ ಮತ್ತಿನಲ್ಲಿ ಎಎಸ್​ಐ ನಾರಾಯಣಸ್ವಾಮಿ ಗಲಾಟೆ ಮಾಡಿದ್ದಾರೆ. ಅಲ್ಲದೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಎಎಸ್​​ಐ ಗಲಾಟೆ ಮಾಡಿರುವ ವಿಡಿಯೋ ವೈರಲ್​​ ಆಗಿದೆ.

ಪ್ರಕರಣ ಸಂಬಂಧ ಎಎಸ್​ಐ ನಾರಾಯಣ ಸ್ವಾಮಿ ಬಾರ್​ ಸಿಬ್ಬಂದಿ ವಿರುದ್ಧ ಎಸ್​​ಪಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಾಕ್ಷ್ಯ ಸಮೇತ ಎಎಸ್​ಐ ನಡೆ ವಿರುದ್ಧ ಬಾರ್​ ಅಸೋಷಿಯೇಷನ್​ ಎಸ್​​ಪಿಗೆ ದೂರು ನೀಡಿದೆ. ಹೀಗಾಗಿ ಇಲಾಖೆಗೆ ಅಗೌರವ, ದುರ್ನಡತೆ, ಬೇಜವಾಬ್ದಾರಿ, ಉದಾಸೀನ ತೋರಿದ ನಾರಾಯಣ ಸ್ವಾಮಿಯನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ:  ಕೋಲಾರ ಬಾಲಕನ ಹತ್ಯೆ ಪ್ರಕರಣ: ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ಬಳ್ಳಾರಿ ಆರ್​ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆರ್​ಟಿಒ ಸಿಬ್ಬಂದಿ ಚಂದ್ರಕಾಂತ್ ಗುಡಿಮನಿ, ಏಜೆಂಟ್ ಮೊಹಮ್ಮದ್​ ಕ್ಲಿಯರೆನ್ಸ್​​ ಸರ್ಟಿಫಿಕೆಟ್​​ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪವಿತ್ತು. ಈ ಬಗ್ಗೆ ಖಚಿತ‌ ಮಾಹಿತಿ‌ ದೊರೆತ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್​​​ಪಿ ಶಶಿಧರ್​ ನೇತೃತ್ವದಲ್ಲಿ ದಾಳಿ ನಡೆದಿದೆ. ಇತ್ತೀಚೆಗೆ ‌ಶಾಸಕ ಭರತರೆಡ್ಡಿ ಆರ್​ಟಿಒ ಕಚೇರಿಗೆ ಭೇಟಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!