AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಕೇಸ್​: ಪ್ರಿನ್ಸಿಪಾಲ್ ಸೇರಿ ಇಬ್ಬರ ಬಂಧನ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಯಲವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ ನಡೆದಿತ್ತು. ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಲಾಗಿತ್ತು. ಸದ್ಯ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪರನ್ನು ಮಾಸ್ತಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. 

ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಕೇಸ್​: ಪ್ರಿನ್ಸಿಪಾಲ್ ಸೇರಿ ಇಬ್ಬರ ಬಂಧನ
ಮೊರಾರ್ಜಿ ವಸತಿ ಶಾಲೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Dec 17, 2023 | 8:50 PM

Share

ಕೋಲಾರ, ಡಿಸೆಂಬರ್​​ 17: ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿ ಬಳಿಯ ಶಾಲೆ ಮೊರಾರ್ಜಿ ವಸತಿ ಶಾಲೆ (Morarji Desai Residential School) ಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಿನ್ಸಿಪಾಲ್ ಸೇರಿ ಇಬ್ಬರನ್ನು ಮಾಸ್ತಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಬಂಧಿತರು. ಹಾಸ್ಟೆಲ್ ವಾರ್ಡನ್ ಮಂಜುನಾಥ್ ಮತ್ತು ಅತಿಥಿ ಶಿಕ್ಷಕ ಅಭಿಷೇಕ್‌ ಪರಾರಿ ಆಗಿದ್ದು, ಹುಡುಕಾಟ ನಡೆಸುತ್ತಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ದೂರು ಹಿನ್ನೆಲೆ ಮಲಹೊರುವ ಪದ್ಧತಿ ನಿಯಂತ್ರಣ ಕಾಯ್ದೆ, ಅಟ್ರಾಸಿಟಿ ಕಾಯ್ದೆಯಡಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಮಕ್ಕಳಿಗೆ ಕಿರುಕುಳ 

ಕಳೆದ ಹಲವು ದಿನಗಳಿಂದ ಮಕ್ಕಳಿಗೆ ವಿವಿಧ ರೀತಿಯಲ್ಲಿ ಕಿರುಕುಳ ಕೂಡ ನೀಡಲಾಗುತ್ತಿದೆ ಅಂತಾ ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್, ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರ ವಿರುದ್ಧ ಆರೋಪ ಕೇಳಿಬಂದಿತ್ತು. ಮಕ್ಕಳಿಗೆ ಥಳಿಸುತ್ತಿರೋ, ಶಿಕ್ಷೆ ಕೊಡುತ್ತಿರುವ ವಿಡಿಯೋಗಳು ಕೂಡ ಟಿವಿ9ಗೆ ಲಭ್ಯವಾಗಿದ್ದವು.

ಇದನ್ನೂ ಓದಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಗೆ ಕಿರುಕುಳ: ಬೆತ್ತಲೆ ವಿಡಿಯೋ ಚಿತ್ರೀಕರಣ, ವಿದ್ಯಾರ್ಥಿನಿ ಆರೋಪ

ಈ ವಸತಿ ಶಾಲೆಯಲ್ಲಿ ಮಕ್ಕಳಿಗೆ ಕಿರುಕುಳ ಆರೋಪದ ಜೊತೆಗೆ ಮತ್ತೊಂದು ಗಂಭೀರ ಆರೋಪವೂ ಕೇಳಿಬಂದಿದೆ. ಟಿವಿ9 ಎದುರು ಪೊಷಕರೊಬ್ಬರು ಮತ್ತೊಂದು ಸ್ಟೋಟಕ ಹೇಳಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳು ಬಟ್ಟೆ ಬದಲಿಸುವ ಫೋಟೋ ಕೂಡ ತಗೆಯಲಾಗ್ತಿತ್ತು ಅಂತಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಲಾರ: ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛಗೊಳಿಸಿದ ಪ್ರಕರಣ; ನಾಲ್ವರು ಸಿಬ್ಬಂದಿ ಅಮಾನತು

ಶಾಲೆಯಲ್ಲಿ ಹೆಣ್ಣು ಮಕ್ಕಳ ಬಟ್ಟೆ ಬದಲಿಸುವ ಫೋಟೋ ತೆಗೆದ ವಿಷಯ ಶುದ್ಧ ಸುಳ್ಳು. ಶಾಲೆಯಲ್ಲಿ ಮಾರೇಶ್​, ಚಿತ್ರಕಲಾ ಶಿಕ್ಷಕರು ಮುನಿಯಪ್ಪರಿಂದ ಗುಂಪುಗಾರಿಕೆ ನಡೆದಿದೆ ಅಂತಾ ಪ್ರಾಂಶುಪಾಲೆ ಭಾರತಮ್ಮ ಆರೋಪಿಸಿದ್ದಾರೆ.

ನಾಳೆ ಸಚಿವ ಎ.ನಾರಾಯಣಸ್ವಾಮಿ ಭೇಟಿ

ಪ್ರಕರಣ ಹಿನ್ನೆಲೆ ನಾಳೆ ಬೆಳಿಗ್ಗೆ 9 ಗಂಟೆಗೆ ವಸತಿ ಶಾಲೆಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಭೇಟಿ ನೀಡಲಿದ್ದಾರೆ. ಅಧಿಕಾರಿಗಳು, ಮಕ್ಕಳಿಂದ ಮಾಹಿತಿ ಪಡೆಯಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:49 pm, Sun, 17 December 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ