AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಸರ್ಕಾರಿ ಶಾಲೆಯನ್ನು ಮನೆ ಮಾಡಿಕೊಂಡು 5 ವರ್ಷದಿಂದ ವಾಸವಾಗಿರುವ ಕುಟುಂಬ

ವ್ಯಕ್ತಿಯೋರ್ವ ಕುಟುಂಬ ಸಮೇತವಾಗಿ ಶ್ರೀನಿವಾಸಪುರ ತಾಲೂಕಿನ ಕೋಡಿಹಳ್ಳಿ ಪಂಚಾಯತಿ ವ್ಯಾಪ್ತಿಯ ಗಾಂಧಿನಗರ ಸರ್ಕಾರಿ ಶಾಲೆಯಲ್ಲಿ ಕಳೆದ ಐದು ವರ್ಷಗಳಿಂದ ವಾಸವಾಗಿದ್ದಾನೆ. ಈ ಬಗ್ಗೆ ಗ್ರಾಮಸ್ಥರು ದೂರು ನೀಡಿದರೂ ಶಿಕ್ಷಣ ಇಲಾಖೆ ಅಧಿಕಾರಿಗಳು ಮಾತ್ರ ಕ್ರಮ ಕೈಗೊಂಡಿಲ್ಲ.

ಕೋಲಾರ: ಸರ್ಕಾರಿ ಶಾಲೆಯನ್ನು ಮನೆ ಮಾಡಿಕೊಂಡು 5 ವರ್ಷದಿಂದ ವಾಸವಾಗಿರುವ ಕುಟುಂಬ
ಸರ್ಕಾರಿ ಶಾಲೆಯನ್ನೇ ಮನೆ ಮಾಡಿಕೊಂಡ ಕುಟುಂಬ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ವಿವೇಕ ಬಿರಾದಾರ|

Updated on: Nov 08, 2024 | 10:26 AM

Share

ಕೋಲಾರ, ನವೆಂಬರ್​ 08: ಶ್ರೀನಿವಾಸಪುರ (Srinivaspur) ತಾಲೂಕಿನ ಕೋಡಿಹಳ್ಳಿ ಪಂಚಾಯತಿ ವ್ಯಾಪ್ತಿಯ ಗಾಂಧಿನಗರ ಸರ್ಕಾರಿ ಶಾಲೆಯನ್ನು (Government School) ವ್ಯಕ್ತಿಯೋರ್ವ ಮನೆ ಮಾಡಿಕೊಂಡಿದ್ದಾನೆ. ಗೌನಿಪಲ್ಲಿ ಗ್ರಾಮದ ನಿವಾಸಿ ಕುಮಾರ್ ಕುಟುಂಬ ಸಮೇತ ಶಾಲೆಯಲ್ಲಿ ವಾಸವಾಗಿದ್ದಾನೆ. ಗಾಂಧಿನಗರ ಸರ್ಕಾರಿ ಶಾಲೆ ಐದು ವರ್ಷಗಳ ಹಿಂದೆ ಮುಚ್ಚಿದೆ. ಈ ವಿಚಾರ ತಿಳಿದ ಕುಮಾರ್​, ಕಳೆದ ಐದು ವರ್ಷಗಳಿಂದ ಬಂದ್​ ಆದ ಸರ್ಕಾರಿ ಶಾಲೆಯಲ್ಲೇ ಕುಟುಂಬ ಸಮೇತ ವಾಸವಾಗಿದ್ದಾನೆ. ಶಾಲೆಯ ಅಡುಗೆ ಮನೆ, ಗೋಡೌನ್ ಮತ್ತು ಕೊಠಡಿ ಉಪಯೋಗಿಸುತ್ತಿದ್ದಾನೆ. ಗ್ರಾಮಸ್ಥರು ಹಲವು ಭಾರಿ ದೂರು‌ ನೀಡಿದರೂ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿಲ್ಲ.

ಒಂದೇ ಕೊಠಡಿಯಲ್ಲಿ 3 ತರಗತಿ ಮಕ್ಕಳಿಗೆ ಪಾಠ

ಯಾದಗಿರಿ: ಸುರಪುರ ತಾಲೂಕಿನ ಬೋನಾಳ್‌ ಗ್ರಾಮದಲ್ಲಿನ ಸರ್ಕಾರಿ‌ ಶಾಲೆಯ ಕಟ್ಟಡ ಚಿಕ್ಕದಾಗಿದ್ದು, ಮಕ್ಕಳು ಹೆಚ್ಚಾಗಿದ್ದಾರೆ. 450ಕ್ಕೂ ಅಧಿಕ ಮಕ್ಕಳಿರುವ ಶಾಲೆಯಲ್ಲಿ ಕೇವಲ ನಾಲ್ಕು ಕೋಣೆಗಳು ಮಾತ್ರ ಇವೆ. ಒಂದು ಕೋಣೆಯಲ್ಲಿ ಎರಡರಿಂದ ಮೂರು ತರಗತಿಯ ಮಕ್ಕಳನ್ನು ಕೂರಿಸಿ ಪಾಠ ಮಾಡಲಾಗುತ್ತಿದೆ. ಹೆಚ್ಚುವರಿ ಕೋಣೆಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಆಗಿದೆ. ಆದರೆ ಗ್ರಾಮದಲ್ಲಿ ಸರ್ಕಾರಿ ಜಾಗ ಇಲ್ಲ.

ಸರ್ಕಾರಿ ಜಾಗ ಒತ್ತುವರಿ ತೆರವು

ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ ಸರ್ಕಾರಿ ಜಾಗವನ್ನು ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ತೆರವು ಮಾಡಿಸಿದ್ದಾರೆ. ಯಾದಗಿರಿ ನಗರದಲ್ಲಿರುವ ಪೂರ್ಣಿಕಮಲ್ ಶ್ರೇಣಿಕರಾಜ್ ದೋಖಾ ಜೈನ್ ಖಾಸಗಿ ಆಂಗ್ಲ ಮಾಧ್ಯಮ ಶಾಲೆ ಸರ್ಕಾರಿ ಉದ್ಯಾನವನ ಒತ್ತುವರಿ ಮಾಡಿಕೊಂಡಿದೆ. ಒತ್ತುವರಿ ಮಾಡಿದ ಜಾಗದಲ್ಲಿ ಶಾಲೆ ಆಟದ ಮೈದಾನ ನಿರ್ಮಾಣ ಮಾಡಿದೆ. ಅಕ್ರಮ ಒತ್ತುವರಿ ತೆರವಿಗೆ ಮುಂದಾಗುತ್ತಿದ್ದ ಅಧಿಕಾರಿಗಳು ರಾಜಕೀಯ ನಾಯಕರ ಪ್ರಭಾವದಿಂದ ಹಿಂದೆ ಸರೆದಿದ್ದರು.

ಆದರೆ, ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಒತ್ತುವರಿ ತೆರವು ಮಾಡಿಸಿದ್ದಾರೆ. ಬಳಿಕ, ಅದೇ ಸ್ಥಳದಲ್ಲಿ ಕಾಂಪೌಂಡ್ ನಿರ್ಮಿಸಿದ್ದಾರೆ. ಇನ್ನು, ಶಾಲೆಯಲ್ಲಿ ಶೌಚಾಲಯ ಹಾಗೂ ಕುಡಿಯಲು ನೀರು ಇರದಿದ್ದಕ್ಕೆ ಶಿಕ್ಷಣ ಇಲಾಖೆ ಶಾಲೆಗೆ ನೋಟೀಸ್ ನೀಡಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ