AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಿಂದ ಹೊರಟು ನಾಪತ್ತೆಯಾಗಿದ್ದ ಟೊಮೆಟೊ ಲಾರಿ ಗುಜರಾತ್​ನಲ್ಲಿ ಪತ್ತೆ

ಕೋಲಾರದಿಂದ ಹೊರಟು ನಾಪತ್ತೆಯಾಗಿದ್ದ ಟೊಮೆಟೊ ಹೊತ್ತ ಲಾರಿ ಗುಜರಾತ್​ನ ಅಹಮದಾಬಾದ್​ನಲ್ಲಿ ಪತ್ತೆಯಾಗಿದೆ.

ಕೋಲಾರದಿಂದ ಹೊರಟು ನಾಪತ್ತೆಯಾಗಿದ್ದ ಟೊಮೆಟೊ ಲಾರಿ ಗುಜರಾತ್​ನಲ್ಲಿ ಪತ್ತೆ
ಟೊಮ್ಯಾಟೊ (ಸಂಗ್ರಹ ಚಿತ್ರ)
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Jul 31, 2023 | 10:46 AM

Share

ಕೋಲಾರ, (ಜುಲೈ 31): ಕೋಲಾರದ(Kolar) ಎಪಿಎಂಸಿಯಿಂದ ಸುಮಾರು 21 ಲಕ್ಷ ರೂ. ಮೌಲ್ಯದ ಟೊಮೆಟೊ (Tomato) ಹೊತ್ತು ನಾಪತ್ತೆಯಾಗಿದ್ದ ಲಾರಿ ಕೊನೆಗೂ ಗುಜರಾತಿನಲ್ಲಿ ಪತ್ತೆಯಾಗಿದೆ. ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಹೋಗಿ ಬೇಕಿದ್ದ ಲಾರಿ ಗುಜರಾತ್​ನ ಅಹಮದಾಬಾದ್​ನಲ್ಲಿ ಸಿಕ್ಕಿದ್ದು, ಲಾರಿ ಚಾಲಕ ಟೊಮೆಟೊವನ್ನು ಅರ್ಧ ಬೆಲೆಗೆ ಮಾರಾಟ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಚಾಲಕ ಅನ್ವರ್​ ಲಾರಿಯಲ್ಲಿ ಅಳವಡಿಸಿದ್ದ ಜಿಪಿಎಸ್ ಕಿತ್ತೆಸೆದು ಅಹಮದಾಬಾದ್​ಗೆ ಚಲಾಯಿಸಿಕೊಂಡು ಹೋಗಿದ್ದಾನೆ. ಬಳಿಕ ಅಲ್ಲಿ ಟೊಮೆಟೊವನ್ನು ಅರ್ಧ ದರಕ್ಕೆ ಮಾರಾಟ ಮಾಡಿ ಇದೀಗ ತಲೆಮರಿಸಿಕೊಂಡಿದ್ದಾನೆ.

ಇದನ್ನೂ ಓದಿ: Tomato: ಟೊಮೆಟೊ ತುಂಬಿಕೊಂಡು ಕೋಲಾರದಿಂದ ಹೊರಟಿದ್ದ ಲಾರಿ ನಾಪತ್ತೆ, ದೂರು ದಾಖಲು

ಮೆಹತ್ ಟ್ರಾನ್ಸ್ ಪೋರ್ಟ್ ಮಾಲೀಕ ಸಾಧಿಕ್, ಕಳೆದ ರಾತ್ರಿಯೇ ಅಹಮದಾಬಾದ್​ನತ್ತ ಹೊರಟ್ಟಿದ್ದು, ಲಾರಿ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇನ್ನು ಟೊಮೆಟೊ ಮಾರಾಟದಿಂದ ಬಂದ ಹಣದೊಂದಿಗೆ ನಾಪತ್ತೆಯಾಗಿರುವ ಚಾಲಕ ಅನ್ವರ್ ವಿರುದ್ದ ಅಹಮದಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮಾಲೀಕ ಸಾಧಿಕ್‌ ನಿರ್ಧರಿಸಿದ್ದಾರೆ.

ಟೊಮೆಟೋ ದರ ಭಾರೀ ಏರಿಕೆ ಕಾಣುತ್ತಿದ್ದಂತೆ ಜಮೀನಿನಲ್ಲಿದ್ದ ಬೆಳೆ ಕಳ್ಳತನದ ಪ್ರಕರಣಗಳು ವರದಿಯಾಗುತ್ತಿವೆ. ಇದರ ಮಧ್ಯೆಯೇ ಕೋಲಾರದ ಎಪಿಎಂಸಿಯಿಂದ ಸುಮಾರು .21 ಲಕ್ಷ ಮೌಲ್ಯದ ಟೊಮೆಟೊ ಹೊತ್ತು ರಾಜಸ್ಥಾನ ಕಡೆ ಹೊರಟಿದ್ದ ಲಾರಿ ನಾಪತ್ತೆಯಾಗಿತ್ತು. ಕೋಲಾರ ಎಪಿಎಂಸಿ ಮಾರುಕಟ್ಟೆಯ ಮುನಿರೆಡ್ಡಿ ಎಂಬುವರು ಸುಮಾರು 21 ಲಕ್ಷ ರೂ. ಮೌಲ್ಯದ ಸುಮಾರು 750 ಕ್ರೇಟ್‌ (11 ಟನ್‌) ಟೊಮೆಟೊವನ್ನು ಜು.27ರಂದು ರಾಜಸ್ಥಾನದ ಜೈಪುರಕ್ಕೆ ಮೆಹತ್‌ ಟ್ರಾನ್ಸ್‌ಪೋರ್ಚ್‌ಗೆ ಸೇರಿದ ಲಾರಿಯ ಮೂಲಕ ಕಳುಹಿಸಿಕೊಟ್ಟಿದ್ದರು. ಈ ಸಂಬಂಧ ಕೋಲಾರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:17 am, Mon, 31 July 23

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ