AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಮೂಲ್​​ ಬೆನ್ನಲ್ಲೇ ಕೋಮುಲ್​​ನಿಂದ ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್‌

ಕೋಮುಲ್​​ ಪ್ರತಿ ಲೀಟರ್ ಹಾಲಿಗೆ 2 ರೂ ಹೆಚ್ಚಳ ಮಾಡಿದೆ. ಆ ಮೂಲಕ ಕೋಲಾರ ಜಿಲ್ಲಾ ಹಾಲು ಉತ್ಪಾದಕರಿಗೆ ಕೋಮುಲ್ ಯುಗಾದಿ ಹಬ್ಬಕ್ಕೆ ಭರ್ಜರಿ ಕೊಡುಗೆ ನೀಡಿದೆ. ಈ ಬಗ್ಗೆ ಕೋಲಾರ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಕೆ.ವೈ.ನಂಜೇಗೌಡ ಮಾಹಿತಿ ನೀಡಿದ್ದಾರೆ.

ಬಮೂಲ್​​ ಬೆನ್ನಲ್ಲೇ ಕೋಮುಲ್​​ನಿಂದ ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್‌
ಕೋಮುಲ್Image Credit source: google
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Mar 17, 2026 | 3:16 PM

Share

ಕೋಲಾರ, ಮಾರ್ಚ್​​ 17: ಇತ್ತೀಚೆಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಿಸುವ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಉಡುಗೊರೆ ನೀಡಿತ್ತು. ಇದೀಗ ಅದರಂತೆ ಕೋಲಾರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (komul) ಕೂಡ ಹಾಲು ಉತ್ಪಾದಕರಿಗೆ ಲೀಟರ್‌ಗೆ 2 ರೂಪಾಯಿ ಹೆಚ್ಚಿಸುವ ಮೂಲಕ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್‌ ನೀಡಿದೆ.

ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಳ

ಯುಗಾದಿ ಹಬ್ಬಕ್ಕೆ ಕೋಲಾರ ಜಿಲ್ಲಾ ಹಾಲು ಉತ್ಪಾದಕರಿಗೆ ಕೋಮುಲ್​ ಕೊಡುಗೆ ನೀಡಿದೆ. ಲೀಟರ್​ ಹಾಲಿಗೆ 2 ರೂಪಾಯಿ ಹೆಚ್ಚಿಸಿದೆ. ಈ ಹಿಂದೆ ಹಾಲು ಉತ್ಪಾದಕರಿಗೆ ಲೀಟರ್‌ಗೆ 35.40 ರೂ. ನೀಡಲಾಗುತ್ತಿತ್ತು. ಇದೀಗ ಪ್ರತಿ ಲೀಟರ್‌ಗೆ 37.40 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ಇದನ್ನೂ ಓದಿ: ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್​​: ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದ ಬಮೂಲ್

ಜೊತೆಗೆ ಹಸಿರು ಮೇವು ಬೆಳೆಯುವ ರೈತರಿಗೆ ಎಕರೆಗೆ 3 ಸಾವಿರ ರೂ ಪ್ರೋತ್ಸಾಹ ಧನ, ಹಸುಗಳಿಗೆ ವಿಮೆ 70 ಸಾವಿರದಿಂದ 80 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ ಎಂದು ಕೋಲಾರ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಕೆ.ವೈ.ನಂಜೇಗೌಡ ಮಾಹಿತಿ ನೀಡಿದ್ದಾರೆ.

ರೈತರು ಉತ್ಪಾದಿಸುವ 1 ಲೀಟರ್ ಹಾಲಿಗೆ ಕನಿಷ್ಟ 2 ರೂ. ಹೆಚ್ಚಳ ಮಾಡಬೇಕು ಎಂದು ಇತ್ತೀಚೆಗೆ ಒತ್ತಾಯ ಕೇಳಿಬಂದಿತ್ತು. ಪ್ರತಿ ಲೀಟರ್ ಹಾಲು ಉತ್ಪಾದಿಸಲು ಕನಿಷ್ಠ 50 ರೂ. ವೆಚ್ಚವಾಗುತ್ತದೆ. ಇತ್ತೀಚೆಗೆ ಹಿಂಡಿ ಮತ್ತು ಬೂಸಾ ದರ ಕೂಡ 50 ಕೆಜಿ ಚೀಲಕ್ಕೆ 100 ರೂ. ಏರಿಕೆಯಾಗಿದ್ದು, ರೈತರು ಪರದಾಡು ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು? ಹೊರ ದೇಶಕ್ಕೆ ಎಷ್ಟು ರಫ್ತು ಆಗ್ತಿತ್ತು?

ಕಳೆದ ವರ್ಷ ಬೇಸಿಗೆ ಆರಂಭದಲ್ಲಿ ಒಕ್ಕೂಟವು 2 ರೂ. ದರ ಹೆಚ್ಚಿಸಿದ್ದರೂ, ಸರ್ಕಾರ 4 ರೂ. ನೀಡಿದ ಬಳಿಕ ಅದರಲ್ಲಿ 2 ರೂ. ಮರುಪಡೆಯಲಾಗಿತ್ತು. ಬಳಿಕ ರೈತರು ಉತ್ಪಾದಿಸುವ ಪ್ರತಿ ಲೀಟರ್ ಹಾಲಿಗೆ ಕನಿಷ್ಠ 2 ರೂ. ಹೆಚ್ಚಳ ಮಾಡುವಂತೆ ಒತ್ತಾಯಿಸಲಾಗಿತ್ತು. ಜೊತೆಗೆ ಪಶು ಆಹಾರಕ್ಕಾಗಿ ಮೆಕ್ಕೆಜೋಳವನ್ನು ನೇರವಾಗಿ ರೈತರಿಂದಲೇ ಖರೀದಿಸಬೇಕು ಎಂದು ಆಗ್ರಹಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ