AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿಯಿಂದ ಭೂ ಒತ್ತುವರಿ? ಕೋರ್ಟ್ ಆದೇಶದಂತೆ ಸರ್ವೆ, ಆರೋಪ ನಿಜ ಎಂದ ತಹಶೀಲ್ದಾರ್

ಮೂಲತ: ರಿಯಲ್​ ಎಸ್ಟೇಟ್​ ಉದ್ಯಮಿಯಾಗಿರುವ ಬಂಗಾರಪೇಟೆ ಶಾಸಕ ಎಸ್​. ಎನ್​. ನಾರಾಯಣಸ್ವಾಮಿ 4 ವರ್ಷಗಳಿಂದ ಅನಿಗಾನಹಳ್ಳಿ ಬಳಿ ಎಸ್​. ಎನ್​. ಸಿಟಿ ಐಶಾರಾಮಿ ಬಡಾವಣೆ ನಿರ್ಮಾಣ ಮಾಡುತ್ತಿದ್ದಾರೆ. ಇಲ್ಲಿಗೆ ಹೋಗಿ ಬರುವ ದಾರಿಗಾಗಿ ಗುಂಡುತೋಪು ಒತ್ತುವಾರಿಯಾಗಿದೆ ಅನ್ನೋದು ಮೇಲ್ನೋಟಕ್ಕೆ ಕಂಡು ಬಂದಿದೆ.

ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿಯಿಂದ ಭೂ ಒತ್ತುವರಿ? ಕೋರ್ಟ್ ಆದೇಶದಂತೆ ಸರ್ವೆ, ಆರೋಪ ನಿಜ ಎಂದ ತಹಶೀಲ್ದಾರ್
ಶಾಸಕ ನಾರಾಯಣಸ್ವಾಮಿಯಿಂದ ಭೂ ಒತ್ತುವರಿ?
TV9 Web
| Edited By: |

Updated on:Dec 19, 2022 | 11:52 AM

Share

ಬಂಗಾರಪೇಟೆ (bangarpet) ಶಾಸಕರ ಮೇಲೆ ಮತ್ತೊಮ್ಮೆ ಸರ್ಕಾರಿ ಭೂಮಿ ಒತ್ತುವರಿ ಮಾಡಿರುವ ಆರೋಪ ಕೇಳಿ ಬಂದಿದೆ. ತಮ್ಮ ಒಡೆತನದಲ್ಲಿ ಖಾಸಗಿ ಬಡಾವಣೆ ನಿರ್ಮಾಣ ಮಾಡುವ ವೇಳೆಯಲ್ಲಿ ಶಾಸಕರು ಸರ್ಕಾರಿ ಗುಂಡು ತೋಪು ಒತ್ತುವರಿ ಮಾಡಿರುವ ಆರೋಪ ಕೇಳಿಬಂದಿದ್ದು ಅಧಿಕಾರಿಗಳು ನ್ಯಾಯಾಲಯದ ಆದೇಶದ ಮೇರೆಗೆ ತಹಶೀಲ್ದಾರ್ (tahsildar) ಸ್ಥಳ ಸರ್ವೆ ಮಾಡುವ ವೇಳೆ ಶಾಸಕರು ಅಸಹಕಾರ ತೋರಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ಅನಿಗಾನಹಳ್ಳಿ ಗ್ರಾಮದ ಬಳಿ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್​.ಎನ್​. ನಾರಾಯಣಸ್ವಾಮಿ (bangarpet congress mla sn narayanaswamy) ಅವರು ತಮ್ಮ ಒಡೆತನದ ಎಸ್​.ಎನ್​. ಸಿಟಿ ಅನ್ನೋ ಖಾಸಗಿ ಬಡಾವಣೆ ನಿರ್ಮಾಣ ವೇಳೆಯಲ್ಲಿ ಅನಿಗಾನಹಳ್ಳಿ ಸರ್ವೆ ನಂ-36 ರಲ್ಲಿನ ಸುಮಾರು 35 ಗುಂಟೆ ಗುಂಡು ತೋಪನ್ನು ಒತ್ತುವರಿ ಮಾಡಿದ್ದಾರೆಂದು ಆರೋಪಿಸಿ ಕೋಲಾರದ ನಳಿನಿಗೌಡ ಎಂಬುವರು ದೂರು ಸರ್ಕಾರಿ ಭೂ ಕಬಳಿಕೆ ಜನಪ್ರತಿನಿಧಿಗಳ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಶೀಲನೆ ನಡೆಸಿದ ಕೋರ್ಟ್​ ಅಧಿಕಾರಿಗಳಿಗೆ ಸ್ಥಳ ಸರ್ವೆ (survey) ನಡೆಸಲು ಸೂಚನೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ಬಂಗಾರಪೇಟೆ ತಹಶೀಲ್ದಾರ್ ದಯಾನಂದ್​​ ನೇತೃತ್ವದಲ್ಲಿ ಅಧಿಕಾರಿಗಳು ಸರ್ವೆಗೆ ಸಿದ್ದತೆ ಮಾಡಿಕೊಂಡಿದ್ದರು. ಆದರೆ ಸರ್ವೆಯರ್​ ಹರೀಶ್​ ಅವರು ಮೊಬೈಲ್​ ಸ್ವಿಚ್​ ಆಫ್​ ಮಾಡಿಕೊಂಡು ಸಂಪರ್ಕಕ್ಕೆ ಸಿಗದ ಕಾರಣ, ಬೇರೆ ಸರ್ವೆ ಅಧಿಕಾರಿಗಳೊಂದಿಗೆ ದಯಾನಂದ್​ ಸರ್ವೆ ನಡೆಸಿದ್ದಾರೆ. ಜೊತೆಗೆ ಸರ್ವೆ ಮಾಡುವ ವೇಳೆ ಒತ್ತುವರಿದಾರರು ಹಾಗೂ ದೂರುದಾರರು ಇಬ್ಬರ ಸಮಕ್ಷಮದಲ್ಲಿ ಸರ್ವೆ ಮಾಡಬೇಕು ಅನ್ನೋ ನಿಟ್ಟಿನಲ್ಲಿ ನೋಟಿಸ್ ನೀಡುವ ವೇಳೆ ಶಾಸಕ ಎಸ್​.ಎನ್​.ನಾರಾಯಣಸ್ವಾಮಿ ನೋಟಿಸ್​ ಸ್ವೀಕರಿಸಿಲ್ಲ.

ಆದರೂ ಕೋರ್ಟ್​ ಆದೇಶದ ಹಿನ್ನೆಲೆಯಲ್ಲಿ ಸರ್ವೆ ನಡೆಸಲಾಗಿದೆ. ಈ ವೇಳೆ ಮೇಲ್ನೋಟಕ್ಕೆ 35 ಗುಂಟೆ ಸರ್ಕಾರಿ ಭೂಮಿಯಲ್ಲಿ ದೇವಾಲಯ, ಅಶ್ವಥ ಕಟ್ಟೆ, ನಾಗರಕಲ್ಲು ನಿರ್ಮಾಣ ಮಾಡಲಾಗಿದೆ. ಜೊತೆಗೆ 35 ಗುಂಟೆ ಗುಂಡು ತೋಪು ಪ್ರದೇಶದಲ್ಲಿ ಒಂದಷ್ಟು ಭೂಮಿ ಒತ್ತುವರಿಯಾಗಿರುವುದು ಕಂಡು ಬಂದಿದೆ ಎಂದು ಬಂಗಾರಪೇಟೆ ತಹಶೀಲ್ದಾರ್​ ದಯಾನಂದ್ ತಿಳಿಸಿದ್ದಾರೆ.

Also Read: ದಾವಣಗೆರೆ: ಒಬ್ಬ ತಹಶೀಲ್ದಾರ್ ತೆಗೆದುಕೊಂಡ ಗಟ್ಟಿ ನಿರ್ಧಾರದಿಂದ ಕೋಟ್ಯಂತರ ರೂ ಬೆಲೆಬಾಳುವ ಜಾಗ ಮತ್ತೆ ಶಾಲೆಗೆ ದಕ್ಕಿತು!

ಇನ್ನು ಮೂಲತ: ರಿಯಲ್​ ಎಸ್ಟೇಟ್​ ಉದ್ಯಮಿಯಾಗಿರುವ ಬಂಗಾರಪೇಟೆ ಶಾಸಕ ಎಸ್​.ಎನ್​. ನಾರಾಯಣಸ್ವಾಮಿ ಕಳೆದ ನಾಲ್ಕು ವರ್ಷಗಳಿಂದ ಅನಿಗಾನಹಳ್ಳಿ ಬಳಿಯಲ್ಲಿ ಎಸ್​.ಎನ್​. ಸಿಟಿ ಅನ್ನೋ ಹೆಸರಲ್ಲಿ ಬೃಹತ್​ ಐಶಾರಾಮಿ ಬಡಾವಣೆ ನಿರ್ಮಾಣ ಮಾಡುತ್ತಿದ್ದಾರೆ. ಈ ಎಸ್​.ಎನ್​. ಸಿಟಿಗೆ ಹೋಗಿ ಬರುವ ದಾರಿಗಾಗಿ ಗುಂಡುತೋಪು ಒತ್ತುವಾರಿಯಾಗಿದೆ ಅನ್ನೋದು ಮೇಲ್ನೋಟಕ್ಕೆ ಕಂಡು ಬಂದಿದೆ. ಜೊತೆಗೆ ಅದನ್ನು ಶಾಸಕರೂ ಒಪ್ಪಿಕೊಂಡಿದ್ದಾರೆ.

ಆದರೆ ಅದು ಕಳೆದ 100 ವರ್ಷಗಳ ಹಿಂದೆ ಗುಂಡುತೋಪು ಎಂದು ಇತ್ತು. ಆದರೆ ಅಲ್ಲೀಗ ಗುಂಡುತೋಪು ಇರಲಿಲ್ಲ. ಬದಲಾಗಿ ಅನಿಗಾನಹಳ್ಳಿ, ಹುದುಕುಳ, ಗ್ರಾಮಗಳ ರೈತರು ತಮ್ಮ ಜಮೀನುಗಳಿಗೆ ಹೋಗಲು ರಸ್ತೆ ಹಾಗೂ ದನಕರುಗಳನ್ನು ಮೇಯಿಸಿಕೊಳ್ಳಲು ಸ್ಥಳ ಮಾಡಿಕೊಂಡಿದ್ದರು. ಅದು ಅದೇ ರೀತಿ ಇದೆ, ಇತ್ತೀಚೆಗೆ ಅಲ್ಲಿ ಹೆಚ್ಚು ಅಪಘಾತವಾಗುತ್ತಿತ್ತು ಅನ್ನೋ ಕಾರಣಕ್ಕೆ ಅಲ್ಲಿ ಗ್ರಾಮಸ್ಥರೇ ಮುಂದೆ ನಿಂತು ದೇವಾಲಯ ನಿರ್ಮಾಣ ಮಾಡಿದ್ದಾರೆ ಅನ್ನೋದು ಶಾಸಕರ ಮಾತು.

ಇದರಲ್ಲಿ ಯಾವುದೇ ಕಬಳಿಕೆ, ಒತ್ತುವರಿ, ಯಾವುದೂ ಆಗಿಲ್ಲ. ಆದರೆ ಉದ್ದೇಶಪೂರ್ವಕವಾಗಿ ಬಂಗಾರಪೇಟೆ ತಹಶೀಲ್ದಾರ್ ದಯಾನಂದ್​​, ಸಿಎಂ ಮುಖ್ಯ ಕಾರ್ಯದರ್ಶಿ ಮಂಜುನಾಥ್​ ಪ್ರಸಾದ್​, ಜೆಡಿಎಸ್​ ಅಭ್ಯರ್ಥಿ ಮಲ್ಲೇಶ್​ ಬಾಬು ಹಾಗೂ ಹಲವರು ನನ್ನ ಮೇಲೆ ಚಿತಾವಣೆ ಮಾಡಿ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ ಅನ್ನೋದು ಶಾಸಕ ನಾರಾಯಣ ಸ್ವಾಮಿ ಅವರು ಆರೋಪ.

ಒಟ್ಟಾರೆ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಅವರ ಮೇಲೆ ಮೇಲಿಂದ ಮೇಲೆ ಸರ್ಕಾರಿ ಭೂಮಿ ಒತ್ತುವರಿ ಆರೋಪ ಕೇಳಿ ಬರುತ್ತಿದೆ. ಜೊತೆಗೆ ಎಲ್ಲವೂ ಕೂಡಾ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು ಶಾಸಕರ ಮೇಲಿನ ಈ ಎಲ್ಲಾ ಆರೋಪಗಳು ನಿಜಕ್ಕೂ ರಾಜಕೀಯ ಪ್ರೇರಿತವಾ ಇಲ್ಲಾ ನಿಜಕ್ಕೂ ಒತ್ತುವರಿಯಾಗಿದ್ಯಾ ಅನ್ನೋದು ತನಿಖೆಯಿಂದಷ್ಟೇ ತಿಳಿಯಬೇಕಿದೆ.

ವರದಿ: ರಾಜೇಂದ್ರಸಿಂಹ, ಟಿವಿ 9, ಕೋಲಾರ

Also Read: ಇರೋದು ಒಂದು ಹುಡುಗಿ, 10 ಜನ ಗಂಡಂದಿರು ರೆಡಿಯಾಗಿದ್ದಾರೆ

Published On - 11:47 am, Mon, 19 December 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ