AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ವಿವಾಹಕ್ಕೆ ಮನೆಯವರ ವಿರೋಧ; ನಮಗೆ ಬದುಕಲು ರಕ್ಷಣೆ ನೀಡಿ, ಕೋಲಾರ ಎಸ್​ಪಿಗೆ ದೂರು ನೀಡಿದ ನವ ಜೋಡಿ

ಪತಿ ಮೋಹನ್ ಅನ್ಯ ಜಾತಿಗೆ ಸೇರಿದ ಹಿನ್ನಲೆ ಮನೆಯವರು ಮದುವೆಗೆ ವಿರೋಧ ಮಾಡಿದ್ದರು. ಹೀಗಾಗಿ ನಮಗೆ ಬದುಕಲು ರಕ್ಷಣೆ ನೀಡಬೇಕೆಂದು ನವಿತ ಕೋಲಾರ ಎಸ್​ಪಿ ಡಿ. ದೇವರಾಜ್​ಗೆ ಮನವಿ ಮಾಡಿದ್ದಾಳೆ.

ಪ್ರೇಮ ವಿವಾಹಕ್ಕೆ ಮನೆಯವರ ವಿರೋಧ; ನಮಗೆ ಬದುಕಲು ರಕ್ಷಣೆ ನೀಡಿ, ಕೋಲಾರ ಎಸ್​ಪಿಗೆ ದೂರು ನೀಡಿದ ನವ ಜೋಡಿ
ಮೋಹನ್ ಹಾಗೂ ನವಿತಾ
Follow us
TV9 Web
| Updated By: preethi shettigar

Updated on:Mar 21, 2022 | 7:57 PM

ಕೋಲಾರ: ಪ್ರೇಮ ವಿವಾಹಕ್ಕೆ ಮನೆಯವರ ವಿರೋಧ ಹಿನ್ನೆಲೆಯಲ್ಲಿ ಕುಟುಂಬಸ್ಥರ ವಿರುದ್ಧವೇ ನವಜೋಡಿ ದೂರು(Complaint) ನೀಡಿದ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಆರ್. ತಿಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ. ಮಾರ್ಚ್​ 7ರಂದು ತಿರುಪತಿಯಲ್ಲಿ ವಿವಾಹವಾಗಿದ್ದ(Marriage) ಶ್ರೀನಿವಾಸಪುರ ತಾಲೂಕಿನ ಆರ್.ತಿಮ್ಮಸಂದ್ರ ನವಿತಾ ಹಾಗೂ ಮೋಹನ್, ನವಿತಾ ಮಾವ ಲೋಕೇಶ್​​ನಿಂದ ಕೊಲೆ (Murder) ಬೆದರಿಕೆ ಆರೋಪ ಹಿನ್ನೆಲೆ ಕೋಲಾರ ಎಸ್​​ಪಿ ಡಿ. ದೇವರಾಜ್ ಅವರಿಗೆ ದೂರು ನೀಡಿದ್ದಾರೆ.

ಪತಿ ಮೋಹನ್ ಅನ್ಯ ಜಾತಿಗೆ ಸೇರಿದ ಹಿನ್ನಲೆ ಮನೆಯವರು ಮದುವೆಗೆ ವಿರೋಧ ಮಾಡಿದ್ದರು. ಹೀಗಾಗಿ ನಮಗೆ ಬದುಕಲು ರಕ್ಷಣೆ ನೀಡಬೇಕೆಂದು ನವಿತ ಕೋಲಾರ ಎಸ್​ಪಿ ಡಿ. ದೇವರಾಜ್​ಗೆ ಮನವಿ ಮಾಡಿದ್ದಾಳೆ.

ಹಾಸನ: ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಕಳ್ಳತನ;  6 ಮಂದಿ ಅರೆಸ್ಟ್

ಸರ್ಕಾರಿ ಆಸ್ಪತ್ರೆಯಿಂದ ನವಜಾತ ಶಿಶು ಕದ್ದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿ ನಡು ರಾತ್ರಿಯಲ್ಲಿ ಹಸುಗೂಸನ್ನು ಅಪಹರಿಸಿದ್ದ ಖತರ್ನಾಕ್ ಖದೀಮರು ಅರೆಸ್ಟ್ ಆಗಿದ್ದಾರೆ. ಮಕ್ಕಳಿಲ್ಲದ ಮಗಳಿಗೆ ಗಂಡು ಮಗು ಕೊಡಿಸಲು ಕಳ್ಳತನದ ಪ್ಲಾನ್ ಮಾಡಿದ ಕುಟುಂಬವೊಂದು ಸಿಕ್ಕಿಬಿದ್ದಿದೆ. ಹಾಸನ ಜಿಲ್ಲೆ ಕಣಿಯಾರು ಸುಮಾ(22) ಯಶ್ವಂತ್(28), ಅರ್ಪಿತಾ(24) ಶೈಲಜಾ(42) ಸುಶ್ಮಾ(24), ಪ್ರಕಾಶ್ ಬಂಧಿತರು.

ಮದುವೆಯಾಗಿ ಐದು ವರ್ಷ ಆದರೂ ಸುಮಾಗೆ ಮಕ್ಕಳಾಗದಿದ್ದಕ್ಕೆ ಸಂಸಾರದಲ್ಲಿ ಜಗಳ ಶುರುವಾಗಿತ್ತು. ಇದನ್ನು ತಪ್ಪಿಸಲು, ಮಗಳಿಗೆ ಮಗು ಕೊಡಿಸೋ ಸಲುವಾಗಿ ತಾಯಿ ಶೈಲಜಾ ಹಾಗೂ ಸುಮಾ ಸಹೋದರ ಯಶ್ವಂತ್ ಪ್ಲಾನ್ ಮಾಡಿ ಮಗು ಕಳ್ಳತನ ಮಾಡಿದ್ದಾರೆ. ನರ್ಸ್ ವೇಷಧಾರಿಯಾಗಿ ಆಸ್ಪತ್ರೆಗೆ ಎಂಟ್ರಿಯಾಗಿದ್ದ ಅರ್ಪಿತಾ ಆಸ್ಪತ್ರೆಯ ಪರಿಸ್ಥಿತಿ ಅವಲೋಕಿಸಿ ಕಳ್ಳತನಕ್ಕೆ ಪ್ಲಾನ್ ಮಾಡಲು ಯಶ್ವಂತ್ಗೆ ಸಹಾಯ ಮಾಡಿದ್ದಳು. ಕಡೆಗೆ ನಡು ರಾತ್ರಿ ಆಸ್ಪತ್ರೆ ಸಿಬ್ಬಂದಿ ಕಣ್ತಪ್ಪಿಸಿ ಮಗು ಕದ್ದು ಪರಾರಿಯಾಗಿದ್ದರು. ಆಸ್ಪತ್ರೆ ಸಿಸಿ ಕ್ಯಾಮರಾಗಳ ದೃಶ್ಯಾವಳಿ, ಮೊಬೈಲ್ ಲೊಕೇಷನ್ ಆಧರಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಯಾಸ್ಮಿನ್ ಹಾಗು ಸಿರಾಜ್ ದಂಪತಿಯ ನವಜಾತ ಗಂಡು ಮಗುವನ್ನು ಖದೀಮರು ಕದ್ದೊಯ್ದಿದ್ದರು. ಕೇಸ್ ದಾಖಲಿಸಿಕೊಂಡು ಆರು ಜನ ಆರೋಪಿಗಳನ್ನ ಅರಕಲಗೂಡು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಘಟನೆ ಹಿನ್ನೆಲೆ ವಾರದ ಹಿಂದಷ್ಟೇ ಇಡೀ ಜಿಲ್ಲೆಯನ್ನೆ ಬೆಚ್ಚಿ ಬೀಳಿಸಿದ್ದ ಮಗು ಕಳ್ಳತನದ ಅಸಲಿ ಕಹಾನಿ ಸದ್ಯ ಅಂತ್ಯ ಕಂಡಿದೆ. ಯಾಸ್ಮಿನ್ ಹಾಗೂ ಸೀರಾಜ್ ದಂಪತಿ ಅಸ್ಸಾಂನಿಂದ ಕೂಲಿ ಕೆಲಸಕ್ಕೆಂದು 3 ವರ್ಷಗಳ ಹಿಂದೆ ಹಾಸನದ ಅರಕಲಗೂಡಿಗೆ ಬಂದು ಜೀವನ ಕಟ್ಕೊಂಡಿದ್ರು. ಇಬ್ಬರು ಮಕ್ಕಳಿರುವ ಈ ದಂಪತಿಗೆ ಮಾರ್ಚ್ 14ರ ರಾತ್ರಿ ಸರ್ಕಾರಿ ಆಸ್ಪತ್ರೆಯಲ್ಲಿ ಮುದ್ದಾದ ಗಂಡು ಮಗುವೊಂದು ಜನಿಸಿತ್ತು. ಆದ್ರೆ ಮಧ್ಯರಾತ್ರಿ ಇದ್ದಕ್ಕಿದ್ದಂತೆ ನರ್ಸ್ ವೇಷದಲ್ಲಿ ಕಳ್ಳಿಯೊಬ್ಬಳು ಬಂದು ಮಗು ಉಸಿರಾಟಕ್ಕೆ ಸಮಸ್ಯೆ ಆಗ್ತಿದೆ ಬೇಗ ಹೋಗಿ ಔಷಧಿ ತನ್ನಿ ಅಂತ ತಂದೆಯನ್ನ ಹೊರಗೆ ಕಳಿಸಿದ್ಳು. ಬಳಿಕ ತಾಯಿಗೂ ಸುಳ್ಳು ಹೇಳಿ ಮಗುವನ್ನು ಕದ್ದು ಪರಾರಿಯಾಗಿದ್ರು. ಪ್ರಕರಣ ದಾಖಲಿಸಿಕೊಂಡಿದ್ದ ಅರಕಲಗೂಡು ಪೊಲೀಸರು ಮೊಬೈಲ್ ಲೊಕೇಷನ್ ಸುಳಿವಿನ ಮೇಲೆ ಕಳ್ಳರನ್ನ ಬಂಧಿಸಿದ್ದಾರೆ.

ಇದನ್ನೂ ಓದಿ: ಬೀದಿ ಬದಿಯಲ್ಲಿದ್ದ ನಿರ್ಗತಿಕ ವ್ಯಕ್ತಿಯನ್ನು ಮದುವೆಯಾದ ಮಹಿಳೆ: ಇವರ ಸಿಂಪಲ್​ ಲವ್​ ಸ್ಟೋರಿ ಈಗ ಸಖತ್​ ವೈರಲ್​

ಪ್ರೀತಿಗಾಗಿ ಅಪ್ಪ-ಅಮ್ಮನನ್ನೇ ಕೊಂದ ಮಗಳು; ಪ್ರಿಯಕರನ ಜೊತೆ ಸೇರಿ 17 ವರ್ಷದ ಯುವತಿಯಿಂದ ಡಬಲ್ ಮರ್ಡರ್!

Published On - 7:56 pm, Mon, 21 March 22

ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ