AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಸವಾರನ ಮೇಲಿನ ದರ್ಪ ಪ್ರಕರಣ: ಮಾಲೂರು JMFC ಜಡ್ಜ್ ಗಾಯತ್ರಿ ಬೀದರ್‌ಗೆ ವರ್ಗಾವಣೆ

ಕೋಲಾರದ ಮಾಲೂರು ಜೆಎಂಎಫ್‌ಸಿ ನ್ಯಾಯಾಧೀಶೆ ಗಾಯತ್ರಿ ಅವರನ್ನು ಬೀದರ್‌ನ ಹುಮ್ನಾಬಾದ್‌ಗೆ ವರ್ಗಾಯಿಸಲಾಗಿದೆ. ಬೈಕ್ ಸವಾರನೊಂದಿಗೆ ದರ್ಪ ತೋರಿದ್ದಕ್ಕೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಈ ಘಟನೆ ವೈರಲ್ ಆಗಿದ್ದು, ನ್ಯಾಯಾಧೀಶೆ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚಿಸಿತ್ತು. ಇದರ ಬೆನ್ನಲ್ಲೇ ಇದೀಗ ವರ್ಗಾವಣೆ ಆದೇಶ ಹೊರಬಿದ್ದಿದ್ದು, ನ್ಯಾಯಾಂಗದ ವರ್ಚಸ್ಸಿಗೆ ಧಕ್ಕೆ ತಂದ ಪ್ರಕರಣಕ್ಕೆ ತೆರೆಬಿದ್ದಿದೆ.

ಬೈಕ್ ಸವಾರನ ಮೇಲಿನ ದರ್ಪ ಪ್ರಕರಣ: ಮಾಲೂರು JMFC ಜಡ್ಜ್ ಗಾಯತ್ರಿ ಬೀದರ್‌ಗೆ ವರ್ಗಾವಣೆ
ನ್ಯಾಯಾಧೀಶೆ ಗಾಯತ್ರಿ
ವಿಕಾಸ್​ ಬಿಎಂ
| Edited By: |

Updated on: Aug 06, 2026 | 6:02 AM

Share

ಬೆಂಗಳೂರು ಆ.6: ಬೈಕ್ ಸವಾರನ ಮೇಲೆ ದರ್ಪ ತೋರಿ, ಹೈಕೋರ್ಟ್‌ನಿಂದ ತರಾಟೆಗೆ ಒಳಗಾಗಿದ್ದ ಕೋಲಾರ ಜಿಲ್ಲೆಯ ಮಾಲೂರು ಜೆಎಂಎಫ್‌ಸಿ (JMFC) ನ್ಯಾಯಾಧೀಶೆ ಗಾಯತ್ರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಚಂದ್ರಶೇಖರ ರೆಡ್ಡಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಬೈಕ್ ಸವಾರ ವಿನಯ್ ಎಂಬಾತ ನ್ಯಾಯಾಧೀಶೆ ಗಾಯತ್ರಿ ಅವರ ಇನೋವಾ ಕಾರನ್ನು ಓವರ್‌ಟೇಕ್ ಮಾಡಿದ್ದಾನೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ನ್ಯಾಯಾಧೀಶೆ ಬೈಕ್ ಸವಾರನ ಫಾಲೋ ಮಾಡಿಕೊಂಡು ಹೊಗಿ ಸಾರ್ವಜನಿಕವಾಗಿ ರಂಪಾಟ ನಡೆಸಿದ್ದರು. ಈ ಜಗಳದ ದೃಶ್ಯಾವಳಿಗಳು ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದವು. ಘಟನೆಯ ಬಳಿಕ ಬೈಕ್ ಸವಾರ ವಿನಯ್ ವಿರುದ್ಧ ಮಾಲೂರು ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲು ಮಾಡಲಾಗಿತ್ತು.

ತಮ್ಮ ವಿರುದ್ಧದ ನಕಲಿ ಪ್ರಕರಣ ರದ್ದುಗೊಳಿಸುವಂತೆ ಕೋರಿ ಬೈಕ್ ಸವಾರ ವಿನಯ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆದಿತ್ತು. ಪ್ರಕರಣವನ್ನು ತೀವ್ರವಾಗಿ ಪರಿಗಣಿಸಿದ ಪೀಠವು, ಎಫ್‌ಐಆರ್ ದಾಖಲಿಸಿದ್ದಕ್ಕೆ ತರಾಟೆಗೆ ತೆಗೆದುಕೊಂಡಿತ್ತಲ್ಲದೆ, ನ್ಯಾಯಾಧೀಶೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಿಜಿಸ್ಟ್ರಾರ್‌ಗೆ ಸೂಚನೆ ನೀಡಿದ್ದರು.

ಇದನ್ನೂ ಓದಿ: 120 ಕೋಟಿ ಮಠದ ಜಮೀನು ಕಬಳಿಕೆ ಕೇಸ್: ಕೊನೆಗೂ ಪೊಲೀಸರ ಮುಂದೆ ಹಾಜರಾದ ಕಿಂಗ್‌ಪಿನ್ ನರೇಶ್ ಗೌಡ

ಹೈಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ ಇದೀಗ ನ್ಯಾಯಾಧೀಶೆ ಗಾಯತ್ರಿ ಅವರನ್ನು ಹುಮ್ನಾಬಾದ್‌ಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ