AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಭಕ್ತರು ನೀಡುವ ಕಾಣಿಕೆ ಮೂಲಕ ಶಾಲೆ ನಿರ್ಮಿಸಿದ ದೇವಾಲಯದ ಟ್ರಸ್ಟ್; ಇಲ್ಲಿದೆ ವಿವರ

ಇತ್ತೀಚೆಗೆ ದೇವಾಲಯಗಳ ಆದಾಯದ್ದೇ ದೊಡ್ಡ ಚರ್ಚೆ ನಡೆಯುತ್ತಿತ್ತು, ಹಣವನ್ನು ಹೇಗೆ ಬಳಕೆ ಮಾಡಬೇಕು, ಎಲ್ಲಿ ಬಳಕೆ ಮಾಡಬೇಕು ಎನ್ನುವ ಕುರಿತು ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿತ್ತು. ಇಂಥಹ ಸಂದರ್ಭದಲ್ಲಿ ಇಲ್ಲೊಂದು ದೇವಾಲಯದ ಟ್ರಸ್ಟ್​​ ಸದ್ದಿಲ್ಲದೆ, ತನ್ನ ಭಕ್ತರು ನೀಡುವ ಕಾಣಿಕೆಯನ್ನು ತನ್ನ ಭಕ್ತರಿಗೆ ಸಮಾಜಮುಖಿ ಕಾರ್ಯಗಳನ್ನ ಮಾಡುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ.

ಕೋಲಾರ: ಭಕ್ತರು ನೀಡುವ ಕಾಣಿಕೆ ಮೂಲಕ ಶಾಲೆ ನಿರ್ಮಿಸಿದ ದೇವಾಲಯದ ಟ್ರಸ್ಟ್; ಇಲ್ಲಿದೆ ವಿವರ
ಮಾಲೂರು ಭಕ್ತರು ನೀಡುವ ಕಾಣಿಕೆ ಮೂಲಕ ಶಾಲೆ ನಿರ್ಮಿಸಿದ ದೇವಾಲಯದ ಟ್ರಸ್ಟ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 13, 2024 | 10:28 PM

Share
ಕೋಲಾರ, ಮಾ.13: ಜಿಲ್ಲೆಯ ಮಾಲೂರು ಪಟ್ಟಣದ ಕುಂಬಾರಪಾಳ್ಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಂದರವಾಗಿ ನಿರ್ಮಾಣ ಮಾಡಲಾಗಿದೆ. ಆದರೆ, ಈ ಸರ್ಕಾರಿ ಶಾಲೆಯ ನಿರ್ಮಾಣಕ್ಕೆ ಮಾಲೂರು(Malur) ಮಾರಿಕಾಂಬ ದೇವಿಯ ಶಕ್ತಿಯೇ ಕಾರಣವಾಗಿದೆ. ಹೌದು, ಮಾಲೂರು ಜನರ ಭಕ್ತಿಯ ಕೇಂದ್ರ ಹಾಗೂ ಆರಾಧ್ಯ ದೈವ ಅಂದರೆ ಅದು ಮಾಲೂರು ಮಾರಿಕಾಂಬ ದೇವರು. ಇಲ್ಲಿನ ಜನರು ತಮಗೆ ಕಷ್ಟ ಬಂದಾಗ ಮೊದಲು ಬರುವುದೇ ಈ ಮಾರಿಕಾಂಬ ದೇವಾಲಯಕ್ಕೆ, ಅದೂ ಅಲ್ಲದೆ ಈ ದೇವಾಲಯಕ್ಕೆ ಅರ್ಚಕರು ಇಲ್ಲ, ಬಾಗಿಲುಗಳು ಇಲ್ಲ. ದಿನದ 24 ಗಂಟೆ ಮಾರಿಕಾಂಬ ದೇವಿಗೆ ಭಕ್ತರಿಂದ ಪೂಜೆ ನಡೆಯುತ್ತಲೇ ಇರುತ್ತದೆ.

ಕಾಣಿಕೆ ಹಣವನ್ನ ಸಮಾಜಮುಖಿ ಕಾರ್ಯಗಳಿಗೆ ಬಳಕೆ

ಈ ದೇವಾಲಯವನ್ನು ಶ್ರೀ ಕ್ಷೇತ್ರ ಮಾರಿಕಾಂಬ ಟ್ರಸ್ಟ್​ ಮೂಲಕ ನಿರ್ವಹಣೆ ಮಾಡುತ್ತದೆ. ದೇವಾಲಯಕ್ಕೆ ಬರುವ ಭಕ್ತರು, ದೇವರಿಗೆ ನೀಡುವ ಕಾಣಿಕೆ ಹಣವನ್ನು ಇಲ್ಲಿನ ಟ್ರಸ್ಟ್,​ ಭಕ್ತರಿಗಾಗಿಯೇ ವಿನಿಯೋಗಿಸುತ್ತಿದೆ. ಹಲವು ವರ್ಷಗಳಿಂದ ಹಲವು ಸಮಾಜಮುಖಿ ಕಾರ್ಯಗಳಿಗಾಗಿಯೇ ಬಳಕೆ ಮಾಡುತ್ತಿದೆ. ಈ ಮೊದಲು ಆಸ್ಪತ್ರೆಯಲ್ಲಿ ಐಸಿಯು ವಾರ್ಡ್​, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದಲ್ಲಿ ಶುದ್ದ ಕುಡಿಯುವ ನೀರು, ನಿತ್ಯ ಅನ್ನ ದಾಸೋಹ, ಹೀಗೆ ಹತ್ತು ಹಲವು ಜನರಿಗೆ ಅನುಕೂಲವಾಗುವ ಕಾರ್ಯಗಳನ್ನು ಮಾಡಿಕೊಂಡು ಬಂದಿದೆ.

ಹೈಟೆಕ್​ ಶಾಲೆಯನ್ನಾಗಿ ನಿರ್ಮಾಣ

ಇಂಥಹ ದೇವಾಲಯ ಟ್ರಸ್ಟ್​ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಅವನತಿ ಹಾದಿಯಲ್ಲಿದ್ದ ಮಾಲೂರು ಪಟ್ಟಣದ ಕುಂಬಾರಪಾಳ್ಯದ ಸರ್ಕಾರಿ ಶಾಲೆಯನ್ನು ಹೈಟೆಕ್​ ಶಾಲೆಯನ್ನಾಗಿ ನಿರ್ಮಾಣ ಮಾಡಿಕೊಟ್ಟಿದೆ. ಈ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಚೆನ್ನಾಗಿತ್ತು. ಆದರೆ, ಶಾಲೆಯ ಕಟ್ಟಡ ಮಾತ್ರ ಶಿಥಿಲಾವಸ್ಥೆಗೆ ತಲುಪಿತ್ತು. ಈ ವೇಳೆ ಅಲ್ಲಿನ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯರು ಹಾಗೂ ಅಲ್ಲಿನ ಸಿಬ್ಬಂದಿಗಳು ಮಾಲೂರು ಮಾರಿಕಾಂಬ ದೇವಾಲಯ ಟ್ರಸ್ಟ್​ಗೆ ಒಂದು ಪತ್ರ ಬರೆದು ಸರ್ಕಾರಿ ಶಾಲೆಯನ್ನು ದೇವಾಲಯದ ಟ್ರಸ್ಟ್​ ಮೂಲಕ ರಿಪೇರಿ ಮಾಡಿಕೊಡುವಂತೆ ಮನವಿ ಮಾಡಿದ್ದರು. ಆದ್ರೆ, ಮಾರಿಕಾಂಬ ದೇವಾಲಯದ ಟ್ರಸ್ಟ್​ನ ಸದಸ್ಯರು ಶಾಲೆಯನ್ನು ರಿಪೇರಿ ಮಾಡೋದೇಕೆ ಹೊಸ ಸುಸರ್ಜಿತವಾದ ಶಾಲೆಯನ್ನೇ ನಿರ್ಮಾಣ ಮಾಡಿಕೊಡೋಣ ಎಂದು ನಿರ್ಧರಿಸಿ ಕೇವಲ ಒಂದು ವರ್ಷದ ಅವಧಿಯಲ್ಲಿ ಸುಮಾರು 75 ಲಕ್ಷ ರೂಪಾಯಿ ವೆಚ್ಚದಲ್ಲಿ ಒಂದು ಸುಸರ್ಜಿತವಾದ ಹೈಟೆಕ್​ ಶಾಲೆಯನ್ನೇ ನಿರ್ಮಾಣ ಮಾಡಿಕೊಟ್ಟಿದೆ.
ಈ ಮೂಲಕ ಮಾಲೂರಿನ ಜನರ ಆರಾಧ್ಯ ದೈವ ತಾಯಿ ಮಾರಿಕಾಂಬ ದೇವಿಯ ಶಕ್ತಿ ಹಾಗೂ ಪವಾಡದಿಂದ ಭಕ್ತರಿಗೆ ಒಳಿತಾದಾಗ ದೇವರಿಗೆ ಅರ್ಪಿಸುವ ಕಾಣಿಕೆಯನ್ನು ಆ ತಾಯಿಯ ಭಕ್ತರಿಗೆ ಅರ್ಪಿಸುವ ಮೂಲಕ ಮಾಲೂರು ಮಾರಿಕಾಂಬ ಟ್ರಸ್ಟ್​ ವಿಭಿನ್ನ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಜನರ ಸೇವೆಗೆ ವಿನಿಯೋಗಿಸುತ್ತಿದ್ದಾರೆ. ಭಕ್ತರಿಂದ ಬಂದ ಹಣವನ್ನು ಭಕ್ತರಿಗೆ ವಿವಿಧ ಜನಪರ ಕಾರ್ಯಗಳ ಮೂಲಕ ವಿನಿಯೋಗಿಸಲಾಗುತ್ತಿದೆ ಎಂದು ಟ್ರಸ್ಟ್​ನವರು ಹೇಳುತ್ತಿದ್ದಾರೆ. ಒಟ್ಟಾರೆ ಮಾಲೂರು ಮಾರಿಕಾಂಬ ದೇವಿಯ ಶಕ್ತಿ ಹಾಗೂ ಪವಾಡಗಳಿಂದ ದೇವಾಲಯಕ್ಕೆ ವಾರ್ಷಿಕವಾಗಿ ಕೋಟ್ಯಾಂತರ ರೂಪಾಯಿ ಕಾಣಿಕೆ ರೂಪದಲ್ಲಿ ಬರುವ ಹಣ, ಆ ತಾಯಿಯ ಭಕ್ತರಿಗೆ ವಿನಿಯೋಗವಾಗುವ ಮೂಲಕ ಭಕ್ತರಿಂದ ಬಂದಿದ್ದು, ಭಕ್ತರಿಗೆ ಎನ್ನುವಂತೆ ಹಲವು ಸಮಾಜಮುಖಿ ಕಾರ್ಯಗಳಿಗೆ ದೇವಾಲಯದ ಟ್ರಸ್ಟ್​ ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ