AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಮೇಲೆ ಮಾರಣಾಂತಿಕೆ ಹಲ್ಲೆ, ಆಸ್ಪತ್ರೆಗೆ ದಾಖಲು

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತರಾಗಿರುವ ಮಾಜಿ ಜಿಲ್ಲಾಪಂಚಾಯ್ತಿ ಅಧ್ಯಕ್ಷ ಎಂ.ಶ್ರೀನಿವಾಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಹೊಗಳಗೆರೆ ಬಳಿ ಬಾರ್ ಕಟ್ಟಡ ಕಾಮಗಾರಿಗೆ ಹೋಗಿದ್ದ ವೇಳೆ ಆರು ಜನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಮೇಲೆ ಮಾರಣಾಂತಿಕೆ ಹಲ್ಲೆ, ಆಸ್ಪತ್ರೆಗೆ ದಾಖಲು
ಮಾಜಿ ಜಿಲ್ಲಾಪಂಚಾಯ್ತಿ ಅಧ್ಯಕ್ಷ ಎಂ.ಶ್ರೀನಿವಾಸ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಆಯೇಷಾ ಬಾನು|

Updated on: Oct 23, 2023 | 1:45 PM

Share

ಕೋಲಾರ, ಅ.23: ಜಿಲ್ಲೆಯ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್‌ ಬಳಿ ಅನಿಲ್‌ ಕುಮಾರ್ ಅನ್ನೋ ಗ್ರಾಮ ಪಂಚಾಯ್ತಿ ಸದಸ್ಯನನ್ನ ಕೊಲೆ ಮಾಡಿ ಹಂತಕರು ಎಸ್ಕೇಪ್‌ ಆಗಿದ್ದರು. ಈ ಘಟನೆ ಮಾಸುವ ಮುನ್ನವೇ ಕಾಂಗ್ರೆಸ್ ಮುಖಂಡನ‌ ಮೇಲೆ ಹಲ್ಲೆ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ex-Speaker Ramesh Kumar) ಆಪ್ತರಾಗಿರುವ ಮಾಜಿ ಜಿಲ್ಲಾಪಂಚಾಯ್ತಿ ಅಧ್ಯಕ್ಷ ಎಂ.ಶ್ರೀನಿವಾಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಶ್ರೀನಿವಾಸಪುರ ಪಟ್ಟಣದ ಹೊರವಲಯದ ಹೊಗಳಗೆರೆ ಬಳಿ ಆರು ಜನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ. ಹೊಗಳಗೆರೆ ಬಳಿ ಬಾರ್ ಕಟ್ಟಡ ಕಾಮಗಾರಿಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಹಲ್ಲೆಗೊಳಗಾದ ಶ್ರೀನಿವಾಸ್ ಅವರನ್ನು ಕೋಲಾರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ತುಮಕೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ; ಸ್ನೇಹಿತರಿಂದಲೇ ಕೊಲೆಯಾದ್ನಾ?

ಹಾಡಹಗಲೇ ಗ್ರಾಮ ಪಂಚಾಯ್ತಿ ಸದಸ್ಯ ಮರ್ಡರ್‌!

ಇತ್ತೀಚೆಗೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್‌ ಬಳಿ ಭೀಕರ ಮರ್ಡರ್ ಆಗಿತ್ತು. ಅನಿಲ್‌ ಕುಮಾರ್ ಅನ್ನೋ ಗ್ರಾಮ ಪಂಚಾಯ್ತಿ ಸದಸ್ಯನನ್ನ ಕೊಲೆ ಮಾಡಿ ಹಂತಕರು ಎಸ್ಕೇಪ್‌ ಆಗಿದ್ದರು. ಮಾಲೂರು ತಾಲೂಕಿನ ಮೀಣಸಂದ್ರ ಗ್ರಾಮದ ಅನಿಲ್, ಜಯಮಂಗಲ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದ. ಮಾಲೂರು ಶಾಸಕ ಕೆ.ವೈ ನಂಜೇಗೌಡ ಆಪ್ತನಾಗಿದ್ದ ಅನಿಲ್ ರಾಜಕೀಯದಲ್ಲಿ ಬೆಳೆಯುತ್ತಾ ಒಳ್ಳೆ ಹೆಸರು ಮಾಡಿದ್ದ. ಇದ್ರ ನಡುವೆ ರಾಜಕೀಯ ವಿರೋಧಿಗಳ ಕೋಪಕ್ಕೆ ಕಾರಣವಾಗಿದ್ದ. ಹೀಗಿದ್ದವನು ಅ.20ರಂದು ಹೆಣವಾಗಿದ್ದ. ಎಂದಿನಂತೆ ತನ್ನ ದ್ವಿಚಕ್ರ ವಾಹನದಲ್ಲಿ ಸಂಜೆ ನಾಲ್ಕು ಗಂಟೆ ಸುಮಾರಿಗೆ ಮಾಲೂರು ಪಟ್ಟಣದ ಕಡೆಗೆ ಅನಿಲ್ ಬರುವಾಗ ಹಿಂಬಾಲಿಸಿಕೊಂಡು ಬಂದ ಅಪರಿಚಿತರು ಮಚ್ಚಿನಿಂದ ಅನಿಲ್‌ ಮೇಲೆ ಅಟ್ಯಾಕ್‌ ಮಾಡಿ ಎಸ್ಕೇಪ್ ಆಗಿದ್ದರು

ಇನ್ನು ಅನಿಲ್‌ ಕುಟುಂಬ ಮತ್ತೊಂದು ಕುಟುಂಬದ ನಡುವೆ ಆಗಾಗ ಜಗಳ ಆಗ್ತಿತ್ತಂತೆ. ಮೊನ್ನೆ ನಡೆದ ಗಣೇಶ ಹಬ್ಬದ ದಿನ ಆರ್ಕೆಸ್ಟ್ರ ಆಯೋಜನೆ ಮಾಡಿದ್ದ ವೇಳೆ ಅನಿಲ್ ಹಾಗೂ ಗ್ರಾಮದ ಕೆಲವರ ನಡುವೆ ಗಲಾಟೆ ಆಗಿತ್ತಂತೆ. ಮತ್ತೊಂದು ವಿಚಾರ ಏನಂದ್ರೆ ಅನಿಲ್ ಕೊಲೆ ಆಗುವ ಕೆಲ ಹೊತ್ತಿನ ಹಿಂದೆಯಷ್ಟೇ ಸಾಕಷ್ಟು ವರ್ಷಗಳಿಂದ ಮಾತನಾಡದೆ ಇದ್ದ ಓರ್ವ ವ್ಯಕ್ತಿ ಅನಿಲ್ ಜೊತೆ ಆತ್ಮೀಯವಾಗಿ ಮಾತನಾಡಿದಾರೆ. ಹೀಗಾಗಿ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸ್ತಿರೋ ಪೊಲೀಸರು ಒಬ್ಬನನ್ನ ವಶಕ್ಕೆ ಪಡೆದಿದ್ದಾರೆ.

ಅನ್ಯ ಜಾತಿಯ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಅನಿಲ್‌ಗೆ ಒಬ್ಬಳು ಹೆಣ್ಣು ಮಗಳು ಸಹ ಇದ್ದಾಳೆ. ಅನಿಲ್‌ನ ಸಾವು ಇಡೀ ಕುಟುಂಬವೇ ಕಂಗಾಲಾಗುವಂತೆ ಮಾಡಿದೆ. ಅನಿಲ್ ಕೊಲೆ ಬಳಿಕ ಈಗ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆದಿದ್ದು ಜಿಲ್ಲೆಯಲ್ಲಿ ಆತಂಕ ಹೆಚ್ಚಿದಿದೆ.

ಕೋಲಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ