ಯುವತಿ ಮೇಲೆ ಹಲ್ಲೆ ನಡೆಸಿ, ರಾತ್ರೋ ರಾತ್ರಿ ಮನೆ ಧ್ವಂಸಗೊಳಿಸಿದ ಕಿಡಿಗೇಡಿಗಳು

ಕೋಲಾರ: ಯುವತಿ ಒಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿ ಹಲ್ಲೆ ನಡೆಸಿ ಜೆಸಿಬಿಯಿಂದ ಮನೆ ಧ್ವಂಸಗೊಳಿಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಕಾವ್ಯಾ ಎಂಬ ಯುವತಿ ಕಳೆದ ಎರಡು ವರ್ಷಗಳಿಂದ ಆಶ್ರಯ ಯೋಜನೆಯಡಿ ನೀಡಲಾಗಿದ್ದ ಮನೆಯಲ್ಲಿ ವಾಸವಾಗಿದ್ದರು. ಮನೆ ವಿಚಾರಕ್ಕೆ ಸಂಬಂಧಿಸಿ ಕಾವ್ಯಾ ತಾಯಿ ಜಯಮ್ಮ ಹಾಗೂ ವಿಜಯಮ್ಮ ಎಂಬುವವರ ನಡುವೆ ವಿವಾದವಿತ್ತು. ಈ ವಿವಾದ ಪ್ರಕರಣ ಕೋರ್ಟ್‌ನಲ್ಲಿರುವಾಗಲೇ ರೌಡಿಗಳಿಂದ ಜೀವ ಬೆದರಿಕೆ ಹಾಕಿ ಜಯಮ್ಮ ಪುತ್ರಿ ಕಾವ್ಯಾ ಮೇಲೆ ಹಲ್ಲೆ ಮಾಡಿ, ರಾತ್ರೋ […]

ಯುವತಿ ಮೇಲೆ ಹಲ್ಲೆ ನಡೆಸಿ, ರಾತ್ರೋ ರಾತ್ರಿ ಮನೆ ಧ್ವಂಸಗೊಳಿಸಿದ ಕಿಡಿಗೇಡಿಗಳು
ಸಾಧು ಶ್ರೀನಾಥ್​

Updated on: Jan 07, 2020 | 8:25 PM

ಕೋಲಾರ: ಯುವತಿ ಒಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿ ಹಲ್ಲೆ ನಡೆಸಿ ಜೆಸಿಬಿಯಿಂದ ಮನೆ ಧ್ವಂಸಗೊಳಿಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಕಾವ್ಯಾ ಎಂಬ ಯುವತಿ ಕಳೆದ ಎರಡು ವರ್ಷಗಳಿಂದ ಆಶ್ರಯ ಯೋಜನೆಯಡಿ ನೀಡಲಾಗಿದ್ದ ಮನೆಯಲ್ಲಿ ವಾಸವಾಗಿದ್ದರು.

ಮನೆ ವಿಚಾರಕ್ಕೆ ಸಂಬಂಧಿಸಿ ಕಾವ್ಯಾ ತಾಯಿ ಜಯಮ್ಮ ಹಾಗೂ ವಿಜಯಮ್ಮ ಎಂಬುವವರ ನಡುವೆ ವಿವಾದವಿತ್ತು. ಈ ವಿವಾದ ಪ್ರಕರಣ ಕೋರ್ಟ್‌ನಲ್ಲಿರುವಾಗಲೇ ರೌಡಿಗಳಿಂದ ಜೀವ ಬೆದರಿಕೆ ಹಾಕಿ ಜಯಮ್ಮ ಪುತ್ರಿ ಕಾವ್ಯಾ ಮೇಲೆ ಹಲ್ಲೆ ಮಾಡಿ, ರಾತ್ರೋ ರಾತ್ರಿ ಮನೆ ಧ್ವಂಸ ಮಾಡಲಾಗಿದೆ. ಮನೆಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us