AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ, ಅತ್ಯಾಚಾರ ಶಂಕೆ; ಆರೋಪಿ ಪತ್ತೆಗೆ ತಂಡ ರಚನೆ

ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಮಹಿಳೆಯ ಕೊಲೆಯಾಗಿದೆ. ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಇನ್ನು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಪತ್ತೆಗೆ ಪೊಲೀಸರು ತಂಡ ರಚನೆ ಮಾಡಿದ್ದಾರೆ.

ಕೋಲಾರದಲ್ಲಿ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ, ಅತ್ಯಾಚಾರ ಶಂಕೆ; ಆರೋಪಿ ಪತ್ತೆಗೆ ತಂಡ ರಚನೆ
ಘಟನಾ ಸ್ಥಳದಲ್ಲಿ ನೆರೆದಿರುವ ಪೊಲೀಸರು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಆಯೇಷಾ ಬಾನು|

Updated on: Mar 05, 2024 | 8:53 AM

Share

ಕೋಲಾರ, ಮಾರ್ಚ್​.05: ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ (Murder) ಮಾಡಲಾಗಿದ್ದು ಅತ್ಯಾಚಾರ ಶಂಕೆ ವ್ಯಕ್ತವಾಗಿದೆ. ಕೋಲಾರ ಜಿಲ್ಲೆ ಕೆಜಿಎಫ್ (KGF) ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಕೆಜಿಎಫ್ ತಾಲೂಕಿನ ಐಪಲ್ಲಿ ಗ್ರಾಮದ 28 ವರ್ಷದ ಮಹಿಳೆ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಕೆಜಿಎಫ್ ಎಸ್​ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕೆಜಿಎಫ್ ಆಸ್ಪತ್ರೆಗೆ ಶವ ಸ್ಥಳಾಂತರ ಮಾಡಲಾಗಿದೆ. ಆರೋಪಿ ಪತ್ತೆಗಾಗಿ ತಂಡ ರಚನೆ ಮಾಡಲಾಗಿದೆ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೀದರ್‌ ಜಿಲ್ಲೆಯ ವಿವಿಧೆಡೆ ಕಂಪಿಸಿದ ಭೂಮಿ

ಬೀದರ್​ ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದೆ. ಬೀದರ್ ತಾಲೂಕಿನ ರಾತ್ರಿ 7.40ರ ಸುಮಾರಿಗೆ ಇಸ್ಲಾಂಪುರ ಯರನಳ್ಳಿಯಲ್ಲಿ ಭೂಮಿ ಕಂಪಿಸಿದೆ. ಕಂಪನದ ತೀವ್ರತೆ 1.85ರಷ್ಟು ದಾಖಲಾಗಿದೆ. ಬಸವಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ 2.6ರಷ್ಟು ತೀವ್ರತೆ ದಾಖಲಾಗಿದೆ. ಬಸವಕಲ್ಯಾಣ ತಾಲೂಕಿನ ಯರಬಾಗನಲ್ಲಿ 3.2ರಷ್ಟು ತೀವ್ರತೆ ದಾಖಲಾಗಿದೆ.

ಇದನ್ನೂ ಓದಿ: ಇನ್ನು ಮುಂದೆ ಮೈಸೂರಿನ ಈ 31 ಕೇಂದ್ರಗಳಲ್ಲಿ ಸಿಗಲಿದೆ ಹಾವು ಕಡಿತಕ್ಕೆ ಚಿಕಿತ್ಸೆ

ಚಿಕ್ಕಮಗಳೂರಲ್ಲಿ ಮಂಗನ ಕಾಯಿಲೆಗೆ 3ನೇ ಬಲಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 71 ವರ್ಷದ ವೃದ್ಧ ಬಲಿಯಾಗಿದ್ದಾರೆ. ಎನ್.ಆರ್.ಪುರ ತಾಲೂಕಿನ ಮೇಲ್ಪಾಲ ಗ್ರಾಮದ ಬಸವ ಪೂಜಾರಿ ಮೃತ ದುರ್ದೈವಿ. ಕಳೆದ 3 ದಿನದ ಹಿಂದೆ ವೃದ್ಧನಲ್ಲಿ KFD ಸೋಂಕು ಪತ್ತೆಯಾಗಿತ್ತು. ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೆ KFDಯಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಹೆಚ್ಚಳವಾಗಿದೆ.

ಮರಕ್ಕೆ ಕಾರು ಡಿಕ್ಕಿ ಮಗು ಸೇರಿ ಐವರು ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಐವರು ಸಾವನಪ್ಪಿದ್ದಾರೆ. ಸ್ಥಳದಲ್ಲೇ ನಾಲ್ವರು ದುರ್ಮರಣಕ್ಕಿಡಾಗಿದ್ರೆ, ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ. ಆಂಧ್ರದ ಮೆಹಬೂಬನಗರ ಜಿಲ್ಲೆಯ ಕೊತಕೋಟ ಬೈಪಾಸ್‌ನಲ್ಲಿ ಘಟನೆ ನಡೆದಿದೆ. ಬಳ್ಳಾರಿ ಮೂಲದ ಫಾತೀಮಾ(50), ಅಬ್ದುಲ್ ರೆಹಮಾನ್(30) ಮಾರಿಯಾ(32), ವಾಸೀಂ(01), ಬುಸ್ರಾ(02) ಮೃತ ದುರ್ದೈವಿಗಳಾಗಿದ್ದಾರೆ, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ