AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ, ಅತ್ಯಾಚಾರ ಶಂಕೆ; ಆರೋಪಿ ಪತ್ತೆಗೆ ತಂಡ ರಚನೆ

ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಮಹಿಳೆಯ ಕೊಲೆಯಾಗಿದೆ. ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಇನ್ನು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಪತ್ತೆಗೆ ಪೊಲೀಸರು ತಂಡ ರಚನೆ ಮಾಡಿದ್ದಾರೆ.

ಕೋಲಾರದಲ್ಲಿ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ, ಅತ್ಯಾಚಾರ ಶಂಕೆ; ಆರೋಪಿ ಪತ್ತೆಗೆ ತಂಡ ರಚನೆ
ಘಟನಾ ಸ್ಥಳದಲ್ಲಿ ನೆರೆದಿರುವ ಪೊಲೀಸರು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಆಯೇಷಾ ಬಾನು|

Updated on: Mar 05, 2024 | 8:53 AM

Share

ಕೋಲಾರ, ಮಾರ್ಚ್​.05: ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ (Murder) ಮಾಡಲಾಗಿದ್ದು ಅತ್ಯಾಚಾರ ಶಂಕೆ ವ್ಯಕ್ತವಾಗಿದೆ. ಕೋಲಾರ ಜಿಲ್ಲೆ ಕೆಜಿಎಫ್ (KGF) ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಕೆಜಿಎಫ್ ತಾಲೂಕಿನ ಐಪಲ್ಲಿ ಗ್ರಾಮದ 28 ವರ್ಷದ ಮಹಿಳೆ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಕೆಜಿಎಫ್ ಎಸ್​ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕೆಜಿಎಫ್ ಆಸ್ಪತ್ರೆಗೆ ಶವ ಸ್ಥಳಾಂತರ ಮಾಡಲಾಗಿದೆ. ಆರೋಪಿ ಪತ್ತೆಗಾಗಿ ತಂಡ ರಚನೆ ಮಾಡಲಾಗಿದೆ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೀದರ್‌ ಜಿಲ್ಲೆಯ ವಿವಿಧೆಡೆ ಕಂಪಿಸಿದ ಭೂಮಿ

ಬೀದರ್​ ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದೆ. ಬೀದರ್ ತಾಲೂಕಿನ ರಾತ್ರಿ 7.40ರ ಸುಮಾರಿಗೆ ಇಸ್ಲಾಂಪುರ ಯರನಳ್ಳಿಯಲ್ಲಿ ಭೂಮಿ ಕಂಪಿಸಿದೆ. ಕಂಪನದ ತೀವ್ರತೆ 1.85ರಷ್ಟು ದಾಖಲಾಗಿದೆ. ಬಸವಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ 2.6ರಷ್ಟು ತೀವ್ರತೆ ದಾಖಲಾಗಿದೆ. ಬಸವಕಲ್ಯಾಣ ತಾಲೂಕಿನ ಯರಬಾಗನಲ್ಲಿ 3.2ರಷ್ಟು ತೀವ್ರತೆ ದಾಖಲಾಗಿದೆ.

ಇದನ್ನೂ ಓದಿ: ಇನ್ನು ಮುಂದೆ ಮೈಸೂರಿನ ಈ 31 ಕೇಂದ್ರಗಳಲ್ಲಿ ಸಿಗಲಿದೆ ಹಾವು ಕಡಿತಕ್ಕೆ ಚಿಕಿತ್ಸೆ

ಚಿಕ್ಕಮಗಳೂರಲ್ಲಿ ಮಂಗನ ಕಾಯಿಲೆಗೆ 3ನೇ ಬಲಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 71 ವರ್ಷದ ವೃದ್ಧ ಬಲಿಯಾಗಿದ್ದಾರೆ. ಎನ್.ಆರ್.ಪುರ ತಾಲೂಕಿನ ಮೇಲ್ಪಾಲ ಗ್ರಾಮದ ಬಸವ ಪೂಜಾರಿ ಮೃತ ದುರ್ದೈವಿ. ಕಳೆದ 3 ದಿನದ ಹಿಂದೆ ವೃದ್ಧನಲ್ಲಿ KFD ಸೋಂಕು ಪತ್ತೆಯಾಗಿತ್ತು. ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೆ KFDಯಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಹೆಚ್ಚಳವಾಗಿದೆ.

ಮರಕ್ಕೆ ಕಾರು ಡಿಕ್ಕಿ ಮಗು ಸೇರಿ ಐವರು ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಐವರು ಸಾವನಪ್ಪಿದ್ದಾರೆ. ಸ್ಥಳದಲ್ಲೇ ನಾಲ್ವರು ದುರ್ಮರಣಕ್ಕಿಡಾಗಿದ್ರೆ, ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ. ಆಂಧ್ರದ ಮೆಹಬೂಬನಗರ ಜಿಲ್ಲೆಯ ಕೊತಕೋಟ ಬೈಪಾಸ್‌ನಲ್ಲಿ ಘಟನೆ ನಡೆದಿದೆ. ಬಳ್ಳಾರಿ ಮೂಲದ ಫಾತೀಮಾ(50), ಅಬ್ದುಲ್ ರೆಹಮಾನ್(30) ಮಾರಿಯಾ(32), ವಾಸೀಂ(01), ಬುಸ್ರಾ(02) ಮೃತ ದುರ್ದೈವಿಗಳಾಗಿದ್ದಾರೆ, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ