AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೂರಿನಲ್ಲಿ ರಾತ್ರೋರಾತ್ರಿ ಪೆಟ್ಟಿಗೆ ‌ಅಂಗಡಿ ನಾಪತ್ತೆ! ಬೇಲೂರಿನಲ್ಲಿ ಜಾನುವಾರು ಕಟ್ಟುವ ವಿಚಾರ ಬಡಿದಾಡಿಕೊಂಡ ಕುಟುಂಬಗಳು!

ದಿಕ್ಕು ಕಾಣದಂತಾದ ಶಂಕರಪ್ಪ ಕುಟುಂಬದವರು ಮಾಲೂರು ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರಪ್ಪ ವಿಕಲಚೇತನನಾಗಿದ್ದು, ತನ್ನ ತಮ್ಮನ ಜೀವನ ನಿರ್ವಹಣೆಗಾಗಿ ಅವರದ್ದೇ ಜಮೀನಿನಲ್ಲಿ ಒಂದು ಸಣ್ಣ ಪೆಟ್ಟಿಗೆ ಅಂಗಡಿಯನ್ನು ಹಾಕಿಕೊಟ್ಟಿದ್ದರು. ಆದರೆ ಯಾರೋ ದುಷ್ಕರ್ಮಿಗಳು ಕಳೆದ ರಾತ್ರಿಯ ಅಲ್ಲಿದ್ದ ಪೆಟ್ಟಿಗೆ ಅಂಗಡಿಯನ್ನು ಹೊತ್ತೊಯ್ದಿದ್ದಾರೆ.

ಮಾಲೂರಿನಲ್ಲಿ ರಾತ್ರೋರಾತ್ರಿ ಪೆಟ್ಟಿಗೆ ‌ಅಂಗಡಿ ನಾಪತ್ತೆ! ಬೇಲೂರಿನಲ್ಲಿ ಜಾನುವಾರು ಕಟ್ಟುವ ವಿಚಾರ ಬಡಿದಾಡಿಕೊಂಡ ಕುಟುಂಬಗಳು!
ಮಾಲೂರು ತಾಲೂಕಿನಲ್ಲಿ ರಾತ್ರೋರಾತ್ರಿ ಪೆಟ್ಟಿಗೆ ‌ಅಂಗಡಿ ನಾಪತ್ತೆ!
TV9 Web
| Updated By: ಸಾಧು ಶ್ರೀನಾಥ್​|

Updated on: Sep 16, 2022 | 5:08 PM

Share

ಕೋಲಾರ: ರಾತ್ರೋರಾತ್ರಿ ರಸ್ತೆ ಬದಿಯಲ್ಲಿದ್ದ ಪೆಟ್ಟಿಗೆ ‌ಅಂಗಡಿಯೇ ನಾಪತ್ತೆಯಾಗಿರುವ ಘಟನೆಯೊಂದು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ (Malur taluk) ಎಡಕೋಡಿ ಗ್ರಾಮದಲ್ಲಿ ನಡೆದಿದೆ. ಎಟ್ಟಕೋಡಿ ಗ್ರಾಮಹದಲ್ಲಿ ರಸ್ತೆ ಪಕ್ಕದಲ್ಲಿ ಸಣ್ಣದೊಂದು ಪೆಟ್ಟಿಗೆ ಅಂಗಡಿಯನ್ನು (Petty shop) ಇಟ್ಟುಕೊಂಡಿದ್ದ ಗ್ರಾಮದ ಶಂಕರಪ್ಪ ಎಂಬುವರು ನಿನ್ನೆ ರಾತ್ರಿ ಎಂದಿನಂತೆ ಪೆಟ್ಟಿಗೆ ಅಂಗಡಿಗಿಗೆ ಬೀಗ ಹಾಕಿಕೊಂಡು ಹೋಗಿದ್ದರು. ಅದರೆ ಇಂದು ಮುಂಜಾನೆ ಬಂದು ನೋಡಿದ್ರೆ ಅಲ್ಲಿದ್ದ ಪೆಟ್ಟಿಗೆ ಅಂಗಡಿಯೇ ನಾಪತ್ತೆಯಾಗಿತ್ತು (missing case). ಗಾಬರಿಗೊಂಡ ಶಂಕರಪ್ಪ ಅವರು ಅಕ್ಕಪಕ್ಕದಲ್ಲಿ ಸುತ್ತ ಮುತ್ತಲ ಗ್ರಾಮಗಳಲೆಲ್ಲಾ ಹುಡುಕಾಡಿದ್ದಾರೆ ಆದರೆ ಅಂಗಡಿಯ ಸುಳಿವು ಮಾತ್ರ ಸಿಕ್ಕಿಲ್ಲ. ಯಾರೋ ಕಿಡಿಗೇಡಿಗಳು ರಾತ್ರೋರಾತ್ರಿ ಅಂಗಡಿಯನ್ನು ಬೇರೆಡೆಗೆ ಹೊತ್ತೊಯ್ದಿದ್ದಾರೆ.

ಸದ್ಯ ದಿಕ್ಕು ಕಾಣದಂತಾದ ಶಂಕರಪ್ಪ ಕುಟುಂಬದವರು ಮಾಲೂರು ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರಪ್ಪ ವಿಕಲಚೇತನನಾಗಿದ್ದು, ತನ್ನ ತಮ್ಮನ ಜೀವನ ನಿರ್ವಹಣೆಗಾಗಿ ಅವರದ್ದೇ ಜಮೀನಿನಲ್ಲಿ ಒಂದು ಸಣ್ಣ ಪೆಟ್ಟಿಗೆ ಅಂಗಡಿಯನ್ನು ಹಾಕಿಕೊಟ್ಟಿದ್ದರು. ಆದರೆ ಯಾರೋ ದುಷ್ಕರ್ಮಿಗಳು ಕಳೆದ ರಾತ್ರಿಯ ಅಲ್ಲಿದ್ದ ಪೆಟ್ಟಿಗೆ ಅಂಗಡಿಯನ್ನು ಹೊತ್ತೊಯ್ದಿದ್ದಾರೆ. ಸದ್ಯ ಶಂಕರಪ್ಪ ಮಾಲೂರು ಪೊಲೀಸ್​ ಠಾಣೆಗೆ ದೂರು ನೀಡಿದ್ದು ದೂರಿನಲ್ಲಿ ಅಂಗಡಿ ಇಟ್ಟಿರುವ ಸ್ಥಳದ ಜಮೀನಿಗೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ಜಮೀನು ವಿವಾದವಿರುವ ಹಿನ್ನೆಲೆಯಲ್ಲಿ ವಿವಾದ ಸೃಷ್ಟಿಮಾಡಿರುವ ಜನರೇ ಅಲ್ಲಿದ್ದ ಪೆಟ್ಟಿಗೆ ಅಂಗಡಿಯನ್ನು ಕಳವು ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಮಾಲೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹಾಸನ : ಜಾನುವಾರು ಕಟ್ಟುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ

ಹಾಸನ: ಕ್ಣುಲ್ಲಕ‌ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದೆ. ಜಾನುವಾರು ಕಟ್ಟುವ ವಿಚಾರ ವಿಕೋಪಕ್ಕೆ ತಿರುಗಿ, ಕುಟುಂಬಗಳು ಬಡಿದಾಡಿಕೊಂಡಿವೆ. ಮಚ್ಚು, ದೊಣ್ಣೆ, ಕಲ್ಲಿನಿಂದ ಮನೆ ಮೇಲೆ ದಂಪತಿ ಅಟ್ಯಾಕ್ ಮಾಡಿದ್ದಾರೆ. ಆ ವೇಳೆ ಮತ್ತೊಂದು ಕುಟುಂಬ ಮನೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದೆ. ಹಾಸನ ‌ಜಿಲ್ಲೆ ಬೇಲೂರು ತಾಲ್ಲೂಕಿನ ಪ್ರಸಾದಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯ ಬಾಗಿಲ ಮೇಲೆ ಕಲ್ಲು ಎತ್ತಿಹಾಕಿ ಪತಿ ಹಲ್ಲೆಗೆ ಮುಂದಾಗಿದ್ದಾರೆ. ಗ್ರಾಮದ ಶಿವಣ್ಣ- ದಾಕ್ಷಾಯಿಣಿ ದಂಪತಿಯಿಂದ ಹಲ್ಲೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮಲ್ಲೇಗೌಡ ಹಾಗೂ ಶಿವಣ್ಣ ನಡುವೆ ಜಾನುವಾರು ಕಟ್ಟೋ ವಿಚಾರದಲ್ಲಿ ಜಗಳ ಶುರುವಾಗಿದೆ. ಕುಟುಂಬಗಳೆರಡೂ ಜಮೀನಿನ ಬಳಿ ಪರಸ್ಪರ ಬಡಿದಾಡಿಕೊಂಡಿವೆ. ಬಳಿಕ ಊರಿಗೆ ಬಂದು ಮಲ್ಲೇಗೌಡ ಮನೆ ಮೇಲೆ ಶಿವಣ್ಣ- ದಾಕ್ಣಾಯಿಣಿ ದಾಳಿ ಮಾಡಿದ್ದಾರೆ. ಮನೆ ಬಾಗಿಲಿಗೆ ಮಚ್ಚು, ದೊಣ್ಣೆ,ಕಲ್ಲಿನಿಂದ ಹಲ್ಲೆ ಮಾಡೋ ವೀಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಬೇಲೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!