AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಕೊತ್ತೂರು ಜಿ.ಮಂಜುನಾಥ್ ಜಾತಿ ಸಿಂಧುತ್ವ ಕೇಸ್​: ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

2021ರಲ್ಲಿ ತಮ್ಮ ಜಾತಿ ಪ್ರಮಾಣ ಪತ್ರ ಸಿಂದುತ್ವ ಕುರಿತು ಕೋಲಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಾತಿ ಪರಿಶೀಲನಾ ಸಮಿತಿ ತೀರ್ಮಾನದ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಅರ್ಜಿ ಸಲ್ಲಿಸಿದ್ದರು. ಮೇಲ್ಮನವಿಯನ್ನು ಇಂದು ನ್ಯಾಯ ಮೂರ್ತಿ ನಾಗಪ್ರಸನ್ನ ಪೀಠ ವಜಾಗೊಳಿಸಿದೆ.

ಶಾಸಕ ಕೊತ್ತೂರು ಜಿ.ಮಂಜುನಾಥ್ ಜಾತಿ ಸಿಂಧುತ್ವ ಕೇಸ್​: ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಶಾಸಕ ಕೊತ್ತೂರು ಜಿ.ಮಂಜುನಾಥ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Dec 20, 2023 | 8:08 PM

Share

ಕೋಲಾರ, ಡಿಸೆಂಬರ್​ 20: ಕಾಂಗ್ರೆಸ್ ಶಾಸಕ ಕೊತ್ತೂರು ಜಿ. ಮಂಜುನಾಥ್ (Kothur Manjunath)  ಜಾತಿ ಸಿಂದುತ್ವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮುಳಬಾಗಲು ಮೀಸಲು ಕ್ಷೇತ್ರದಿಂದ 2013ರಲ್ಲಿ ಗೆದ್ದಿದ್ದ ಶಾಸಕ ಮಂಜುನಾಥ್, ಕಾಂಗ್ರೆಸ್ಸ್ ಬೆಂಬಲಿತ ಸ್ವತಂತ್ರ್ಯ ಅಭ್ಯರ್ಥಿಯಾಗಿ ಶಾಸಕರಾಗಿದ್ಧರು.

2021ರಲ್ಲಿ ತಮ್ಮ ಜಾತಿ ಪ್ರಮಾಣ ಪತ್ರ ಸಿಂದುತ್ವ ಕುರಿತು ಕೋಲಾರ ಜಿಲ್ಲಾಧಿಕಾರಿ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ತೀರ್ಮಾನದ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮೇಲ್ಮನವಿಯನ್ನು ಇಂದು ನ್ಯಾಯ ಮೂರ್ತಿ ನಾಗಪ್ರಸನ್ನ ಪೀಠ ವಜಾಗೊಳಿಸಿದೆ.

ಇದನ್ನೂ ಓದಿ: ಹಿಂದೂ ಧರ್ಮ ಇಲ್ಲ ಎಂದ ಉದಯನಿಧಿ ಸ್ಟಾಲಿನ್​​ನನ್ನು ಗಲ್ಲಿಗೇರಿಸಿ: ಕಾಂಗ್ರೆಸ್​ ಶಾಸಕ

2013ರ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಕೊತ್ತೂರು ಜಿ.ಮಂಜುನಾಥ ಪ್ರವರ್ಗ ಹಿಂದುಳಿದ ಜಾತಿ ಎಂದು ನಮೂದಿಸಲಾಗಿತ್ತು, ತದ ನಂತರ ಪರಿಶಿಷ್ಟ ಜಾತಿ ಪ್ರಮಾಣ  ಪತ್ರ ಪಡೆದು ಜಯಶೀಲರಾಗಿದ್ದರು. 2022 ರಲ್ಲಿ ಮುಚ್ಚಿದ ಲಕೋಟೆ ಯಲ್ಲಿ ಸೆಲ್ವಮಣಿ ಸುಪ್ರೀಂ ಕೋರ್ಟ್​ಗೆ ಜಾತಿ ಕುರಿತಾದ ವರದಿ ಸಲ್ಲಿಸಿದ್ದರು.

ಇದನ್ನೂ ಓದಿ: ವಿದೇಶದಲ್ಲೂ ಕೊತ್ತೂರು ಮಂಜುನಾಥ್ ಹವಾ: ಅಮೇರಿಕಾ, ‌ಲಂಡನ್, ಕೆನಾಡದಲ್ಲೂ ಅಭಿಮಾನಿಗಳಿಂದ ಗೆಲುವಿನ ಸಂಭ್ರಮ

ಸುಪ್ರೀಂ ಕೋರ್ಟ್ ಜಾತಿ ವಿವಾದವನ್ನು ಹೈಕೋರ್ಟ್​ನಲ್ಲೇ ಇತ್ಯರ್ಥ ಪಡೆಸಿಕೊಳ್ಳುವಂತೆ ಸೂಚನೆ ನೀಡಿತ್ತು. ನಂತರ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಹಾಲಿ ಕೋಲಾರ ಶಾಸಕ ಮೊರೆ ಹೋಗಿದ್ದರು. ಹೈ ಕೋರ್ಟ್ ಶಾಸಕರ ಅರ್ಜಿ ತಿರಸ್ಕರಿಸಿದ್ದು ಶಾಸಕ ಮಂಜುನಾಥ್ಗೆ ಹಿನ್ನಡೆ ಉಂಟಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:07 pm, Wed, 20 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ