AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂನಲ್ಲಿ 11 ಲಕ್ಷಕ್ಕೂ ಅಧಿಕ ಹಣ ಕಳ್ಳತನ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಎಸ್​ಬಿಐ ಎಟಿಎಂನಲ್ಲಿ 11 ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳತನ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಎಂಟಿಎಂ ಸಿಸಿ ಕ್ಯಾಮರಾಗೆ ಕಪ್ಪು ಬಣ್ಣವನ್ನು ಸ್ಪ್ರೇ ಮಾಡಿ ನಂತರ ಖದೀಮರು ಕೈ ಚಳಕ ತೋರಿಸಿದ್ದಾರೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೋಲಾರ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂನಲ್ಲಿ 11 ಲಕ್ಷಕ್ಕೂ ಅಧಿಕ ಹಣ ಕಳ್ಳತನ
ಕೋಲಾರ ಎಸ್​ಬಿಐ ಎಟಿಎಮ್​ ಕಳ್ಳತನ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Aug 23, 2023 | 4:30 PM

Share

ಕೋಲಾರ, ಆ.23: ಜಿಲ್ಲೆಯ ಶ್ರೀನಿವಾಸಪುರ(Srinivaspur) ಪಟ್ಟಣದ ಚಿಂತಾಮಣಿ ವೃತ್ತದಲ್ಲಿರುವ ಎಸ್​ಬಿಐ ಎಟಿಎಂನಲ್ಲಿ (SBI, ATM) ಖದೀಮರು ಕೈಚಳಕ ತೋರಿಸಿದ್ದಾರೆ. ಹೌದು, ಗ್ಯಾಸ್ ಕಟ್ಟರ್ ಮೂಲಕ ಎಟಿಎಂ ಮೆಷಿನ್ ಕತ್ತರಿಸಿ, ಅಂದಾಜು 11 ಲಕ್ಷಕ್ಕೂ ಅಧಿಕ ಹಣ ಕದ್ದು ಪರಾರಿಯಾಗಿದ್ದಾರೆ. ಇನ್ನು ಈ ಖತರ್ನಾಕ್​ ಆಸಾಮಿಗಳು ಎಟಿಎಂ ಸಿಸಿ ಕ್ಯಾಮೆರಾ ಗಳಿಗೆ ಕಪ್ಪು ಬಣ್ಣವನ್ನು ಸ್ಪ್ರೇ ಮಾಡಿ ಕದ್ದಿದ್ದಾರೆ. ಸ್ಥಳಕ್ಕೆ ಕೋಲಾರ ಎಸ್ಪಿ ನಾರಾಯಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೀದರ್ ಪೊಲೀಸರ ಕಾರ್ಯಾಚರಣೆ; 1.18 ಕೋಟಿ ರೂಪಾಯಿ ಮೌಲ್ಯದ 118 ಕೆಜಿಯಷ್ಟು ಗಾಂಜಾ ವಶಕ್ಕೆ

ಬೀದರ್​: ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಮುಂಬೈಗೆ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಖಚಿತ ಮಾಹಿತಿ ಮೇರೆಗೆ ಬೀದರ್​ ಪೊಲೀಸರು ದಾಳಿ ಮಾಡಿದ್ದರು. ಇನ್ನು ದಾಳಿ ವೇಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ಅವರನ್ನು ಬೆನ್ನುಹತ್ತಿದ್ದಾರೆ. ಈ ವೇಳೆ ಚಿಟಗುಪ್ಪಾ ತಾಲೂಕಿನ ಮಂಗಲಗಿ ಟೋಲ್ ಬಳಿ ಕಾರು ನಿಲ್ಲಿಸಿ ಗಾಂಜಾ ಸಾಗಾಟಗಾರರು ಪರಾರಿಯಾಗಿದ್ದಾರೆ. ಆದರೆ, ಕಾರ್​ನಲ್ಲಿದ್ದ 1.18 ಕೋಟಿ ರೂಪಾಯಿ ಮೌಲ್ಯದ 118 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆದ್ದಾರೆ. ಇನ್ನು ಗಾಂಜಾ ಸಾಗಾಟ ಮಾಡುತ್ತಿದ್ದ ಕಾರು ಸಹ ಪೊಲೀಸರು ಜಪ್ತಿ ಮಾಡಿಕೊಂಡಿದ್ದು, ಕಾರಿನ ಮೌಲ್ಯ 8 ಲಕ್ಷ ರೂಪಾಯಿ ಎಂದು ತಿಳಿದು ಬಂದಿದೆ. ಕಾರ್ಯಚರಣೆ ನಡೆಸಿದ ಮನ್ನಾಖೇಳ್ಳಿ ಪೋಲಿಸರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪೋಲಿಸರಿಗೆ ಬೀದರ್ ಎಸ್ಪಿ ಚೆನ್ನಬಸವಣ್ಣರಿಂದ ಬಹುಮಾನ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ:ಮಂಗಳೂರು: ಜೆಸಿಬಿ ಬಳಸಿ ಎಟಿಎಂ ಕಳವು ಮಾಡಲು ಯತ್ನ, ಪೊಲೀಸರ ಕಂಡು ಪರಾರಿಯಾದ ಆರೋಪಿಗಳು

ದಾಳಿಂಬೆ ಕಳ್ಳತನ ಆರೋಪಿಸಿ ಮನಸೋ ಇಚ್ಛೆ ಥಳಿತ

ಬೆಂಗಳೂರು ಗ್ರಾಮಾಂತರ: ದಾಳಿಂಬೆ ಕಳ್ಳತನ ಆರೋಪಿಸಿ ನಾಲ್ವರು ಸೇರಿ ಮರಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಕಾಚನಹಳ್ಳಿಯಲ್ಲಿ ನಡೆದಿದೆ. ಕೋಡಿಪಾಳ್ಯ ಮೂಲದ ಕಾಂತರಾಜು, ಶಶಿಕುಮಾರ್, ಕೆಂಪರಾಜು ಮೇಲೆ ಪಕ್ಕದ ಬರದಿ ಗ್ರಾಮದ ಕೇಶವ ಮೂರ್ತಿ, ಬೈಲಪ್ಪ, ರವಿ, ಲೋಕೇಶ್ ಸೇರಿದಂತೆ ನಾಲ್ಕು ಜನರ ತಂಡ ಮನಸೋ ಇಚ್ಛೆ ಹಲ್ಲೆ ನಡೆಸಿದ್ದು, ಇನ್ನು ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇನ್ನು ಹಲ್ಲೆಗೊಳಗಾದ ಯುವಕರ ಪೋಷಕರು ಹೇಳುವ ಪ್ರಕಾರ ಹಳೆಯ ವ್ಯಷ್ಯಮ್ಯದಿಂದಾಗಿ ನಡೆದಿರುವ ಘಟನೆ ಎಂದು ಅರೋಪಿಸುತ್ತಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ