AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ: ಮಹಿಳೆಯ ರಕ್ಷಣೆ, ಪುಣಾಣಿಗಳು ಸಾವು

ಆ ಅವಳಿ ಮಕ್ಕಳಿನ್ನೂ ಸರಿಯಾಗಿ ಪ್ರಪಂಚವನ್ನೇ ನೋಡಿರಲಿಲ್ಲ. ಅಷ್ಟರಲ್ಲಾಗಲೇ ಹೆತ್ತ ತಾಯಿಯ ದುಡುಕಿನ ನಿರ್ಧಾರ ಕಂದಮ್ಮಗಳನ್ನು ಬಲಿ ಪಡೆದಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತ ತಾಯಿ ಮಕ್ಕಳ ಜೊತೆ ಬಾವಿಗೆ ಹಾರಿದ್ದು, ಆಕೆಯ ರಕ್ಷಣೆ ಮಾಡಲಾಗಿದ್ದರೆ ಏನೂ ಅರಿಯದ ಪುಟಾಣಿಗಳ ಜೀವ ಹೋಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆ ನಡೆದಿದ್ದೆಲ್ಲಿ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ: ಮಹಿಳೆಯ ರಕ್ಷಣೆ, ಪುಣಾಣಿಗಳು ಸಾವು
ಮೃತ ಪುಟಾಣಿಗಳುImage Credit source: Tv9 Kannada
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Mar 02, 2026 | 2:12 PM

Share

ಕೋಲಾರ/ಗದಗ, ಮಾರ್ಚ್​​ 02: ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಮಕ್ಕಳ ಜೊತೆ ತಾಯಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ 3 ವರ್ಷದ ಹರ್ಷಿತ್​ ಮತ್ತು ಹಿತೇಶ್ ಮೃತಪಟ್ಟಿದ್ದು, ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಉಷಾರನ್ನು ಪ್ರವಾಸಿ ಮಿತ್ರ ಸಿಬ್ಬಂದಿ ರಕ್ಷಿಸಿದ್ದಾರೆ. ಮೃತ ಪುಟಾಣಿಗಳಿಬ್ಬರೂ ಅವಳಿ-ಜವಳಿ ಎಂಬುದು ಗೊತ್ತಾಗಿದೆ. ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಡಿವೈಎಸ್ಪಿ ಲಕ್ಷ್ಮಯ್ಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಇರಗಮುತ್ತನಹಳ್ಳಿ ಗ್ರಾಮದ ರೈತನೋರ್ವ ಸಾಲಭಾದೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹರೀಶ್​​ (45) ಮೃತ ವ್ಯಕ್ತಿಯಾಗಿದ್ದು, ಈತ ಮುಳಬಾಗಿಲು ತಾಲೂಕಿನ ಆಂಬ್ಲಿಕಲ್ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಮತ್ತು ಸಣ್ಣಪುಟ್ಟ ಕೈ ಸಾಲ ಎಲ್ಲವೂ ಸೇರಿ ಸುಮಾರು 10 ಲಕ್ಷ ರೂಪಾಯಿ ಸಾಲ ಹೊಂದಿದ್ದ ಎನ್ನಲಾಗಿದೆ. ಇನ್ನು ಇದೇ ವಿಚಾರವಾಗಿ ಪತ್ನಿ ಜೊತೆಗೆ ಗಲಾಟೆ ಮಾಡಿಕೊಂಡಿದ್ದ ಹರೀಶ್, ತೋಟದ ಬಳಿ ನಿರ್ಮಾಣ‌ಮಾಡಿರುವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್​ಮೇಲ್ ಮಾಡಿದ ಮಾಜಿ ಪ್ರಿಯಕರ, ಆತನ ಕೊಂದು, ಮುಖಕ್ಕೆ ಆ್ಯಸಿಡ್ ಹಾಕಿದ ಮಹಿಳೆ

ಕೌಂಟುಬಿಕ ಕಲಹಕ್ಕೆ ಯುವಕ ಬಲಿ

ಕೌಟುಂಬಿಕ ಕಲಹ ಹಿನ್ನೆಲೆ ಅಕ್ಕ ಮತ್ತು ಅಳಿಯನೇ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ನಡೆದಿದೆ. ವಸಂತ ಭಜಂತ್ರಿ ಕೊಲೆಯಾದ ವ್ಯಕ್ತಿಯಾಗಿದ್ದು, ಮಂಜುಳಾ ಮತ್ತು ಶ್ರೀಕಾಂತ್​​ ಆರೋಪಿಗಳಾಗಿದ್ದಾರೆ. ಕುಡಗೋಲಿಂದ ಕೊಚ್ಚಿ ವಸಂತನ ಕೊಲೆ ಮಾಡಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಕ-ಅಳಿಯನೊಂದಿಗೆ ವಸಂತ ಜಗಳ ಮಾಡುತಿದ್ದ ಎನ್ನಲಾಗಿದ್ದು, ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ