AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ನಗರಸಭೆ ಸದಸ್ಯನ ಬರ್ಬರ ಕೊಲೆ‌ ಪ್ರಕರಣ: ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಜಗನ್ ಮೋಹನ್ ರೆಡ್ಡಿ ಕೊಲೆ‌ ಪ್ರಕರಣ ಹಿನ್ನೆಲೆ ಬೆಳ್ಳಂಬೆಳಿಗ್ಗೆ ಕೊಲೆ ಆರೋಪಿ ಮೇಲೆ ಜಿಲ್ಲೆಯ ಚಲುವನಹಳ್ಳಿ ಬಳಿ ಪೊಲೀಸರಿಂದ ಫೈರಿಂಗ್​ ಮಾಡಲಾಗಿದ್ದು, ಪ್ರಮುಖ ಆರೋಪಿ ಹಾಗೂ ಸುಫಾರಿ ಕಿಲ್ಲರ್ ಬಾಲಾಜಿ ಸಿಂಗ್​ನನ್ನು ಬಂಧಿಸಲಾಗಿದೆ.

ಕೋಲಾರ ನಗರಸಭೆ ಸದಸ್ಯನ ಬರ್ಬರ ಕೊಲೆ‌ ಪ್ರಕರಣ: ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 24, 2022 | 7:47 AM

Share

ಕೋಲಾರ: ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ‌ (Murder) ಪ್ರಕರಣ ಹಿನ್ನೆಲೆ ಬೆಳ್ಳಂಬೆಳಿಗ್ಗೆ ಕೊಲೆ ಆರೋಪಿ ಮೇಲೆ ಜಿಲ್ಲೆಯ ಚಲುವನಹಳ್ಳಿ ಬಳಿ ಪೊಲೀಸರಿಂದ ಫೈರಿಂಗ್​ ಮಾಡಲಾಗಿದೆ. ಪ್ರಮುಖ ಆರೋಪಿ ಹಾಗೂ ಸುಫಾರಿ ಕಿಲ್ಲರ್ ಬಾಲಾಜಿ ಸಿಂಗ್ ಮೇಲೆ ಮುಳಬಾಗಿಲು ಇನ್ಸ್‌ಪೆಕ್ಟರ್ ಲಕ್ಷ್ಮೀಕಾಂತ್​​ ಫೈರಿಂಗ್ ಮಾಡಿದ್ದಾರೆ. ಮಾಹಿತಿ ಮೇರೆಗೆ ಆರೋಪಿಯನ್ನ ಬಂಧಿಸಲು ಹೋದಾಗ ಪೊಲೀಸರ ಮೇಲೆ‌ ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ಆರೋಪಿ ಬಾಲಾಜಿ ಸಿಂಗ್ ಮೇಲೆ ಗುಂಡು ಹಾರಿಸಲಾಗಿದೆ. ಸದ್ಯ ಆರೋಪಿಯನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆ ಹಿನ್ನೆಲೆ: 

ಜೂನ್​ 7ರಂದು ಜಿಲ್ಲೆಯ ಮುಳಬಾಗಿಲು ನಗರಸಭೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಜಗನ್ ಮೋಹನ್ ಹತ್ಯೆ ನಡೆದಿದೆ. ಅಂದು ಬೆಳಿಗ್ಗೆ ಮುತ್ಯಾಲಪೇಟೆಯ ಗಂಗಮ್ಮ ದೇವಾಲಯಕ್ಕೆ ಹೋಗುವಾಗ ಅಪರಿಚಿತ ಗುಂಪೊಂದು ಜಗನ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಜಗನ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಾಣ ಬಿಟ್ಟಿದ್ದಾರೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗ ಮೋಹನ್ ಮೇಲೆ ನಡೆದ ದಾಳಿಯಿಂದ ಕೋಲಾರ ಬೆಚ್ಚಿಬಿದ್ದಿದೆ. ಮುಳಬಾಗಿಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಲೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ. ಈ ದೃಶ್ಯದಲ್ಲಿ ಆರೋಪಿಗಳು ಕೊಲೆ ಮಾಡಿ ಪರಾರಿಯಾಗುವ ದೃಶ್ಯಗಳು ಸೆರೆಯಾಗಿದೆ. ಕೋಲಾರದ ಮೆಡಿಕಲ್ ಕಾಲೇಜು ಶವಾಗಾರದಲ್ಲಿ ಜಗನ್ ಮೋಹನ್ ಮೃತ ದೇಹ ಇರಿಸಲಾಗಿತ್ತು. ಶವಾಗಾರದ ಬಳಿ ರಾಜಕೀಯ ಮುಖಂಡರು, ಕಾಂಗ್ರೆಸ್ ಹಾಗೂ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಸೇರಿ ಹಲವು ಮುಖಂಡರು ಜಮಾಯಿಸಿದ್ದರು. ಕೊಲೆ ನಡೆದ ಸ್ಥಳಕ್ಕೆ ಕೋಲಾರ ಎಸ್ಪಿ ದೇವರಾಜ್ ಭೇಟಿ ನೀಡಿ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಸ್ಥಳೀಯರ ವಿಚಾರಣೆ ನಡೆಸಿದರು.

ಕಣ್ಣೀರು ಹಾಕಿದ ಜಗನ್ ಮೋಹನ್ ಪುತ್ರ

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹತ್ಯೆಯಾದ ಜಗನ್ ಮೋಹನ್ ಪುತ್ರ ಮಿಥುನ್ ಸಾಯಿಕೃಷ್ಣ ಪ್ರತಿಕ್ರಿಯೆ ನೀಡಿದ್ದು, ನಮ್ಮ ತಂದೆ ಜಗನ್ ಮೋಹನ್ ರೆಡ್ಡಿ ಯಾರಿಗೂ ಅನ್ಯಾಯಮಾಡಿಲ್ಲ. ನಮ್ಮ ತಂದೆ ಹತ್ತಾರು ಜನರಿಗೆ ಸಹಾಯ ಮಾಡುತ್ತಿದ್ದರು. ನಮ್ಮ ತಂದೆ ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆ ಕೊಡಿಸಬೇಕು. ನಮ್ಮ ತಂದೆ ಯಾರಿಗೂ ಮೋಸ ಮಾಡಿಲ್ಲ, ಜನರಿಗೋಸ್ಕರ ಬದುಕಿದ್ರು. ಎಂದಿನಂತೆಯೇ ಗಂಗಮ್ಮ ದೇವಸ್ಥಾನದ ಬಾಗಿಲು ತೆಗೆಯುತ್ತಿದ್ದರು. ದೇವಸ್ಥಾನದ ಬಾಗಿಲು ತೆಗೆಯಲು ಹೋದಾಗ ಕೊಲೆ ಮಾಡಿದ್ದಾರೆ. ನಮ್ಮ ತಂದೆ ಕೊಂದವರನ್ನು ಪೊಲೀಸರು ಹಿಡಿದು ಶಿಕ್ಷೆ ಕೊಡಿಸಬೇಕು ಎಂದು ಹತ್ಯೆಯಾದ ಜಗನ್ ಮೋಹನ್ ಪುತ್ರ ಮಿಥುನ್ ಸಾಯಿಕೃಷ್ಣ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: KS Bharat: ಭಾರತದ ಮಾನ ಉಳಿಸಿದ ಭರತ್: ಕೊಹ್ಲಿ-ರೋಹಿತ್ ವೈಫಲ್ಯದ ನಡುವೆ ತೊಡೆತಟ್ಟಿನಿಂತ ಶ್ರೀಕರ್

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು