AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಸ್ನೇಹಿತರಿಂದಲೇ ಅಪ್ರಾಪ್ತ ಬಾಲಕನ ಹತ್ಯೆ; ಕಾಲೇಜು ಮಕ್ಕಳಿಗೆ ಕಾನೂನು ಜಾಗೃತಿ ಮೂಡಿಸಲು ಮುಂದಾದ ಪೊಲೀಸರು

ಅಪ್ರಾಪ್ತ ಬಾಲಕನನ್ನು ಅವರ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿ ವಿಕೃತಿ ಮೆರೆದಿರುವ ಪ್ರಕರಣ, ಇದೀಗ ಕೋಲಾರ ಜನರನ್ನು ಬೆಚ್ಚಿ ಬೀಳಿಸಿದೆ. ಅಲ್ಲದೆ ಈ ಘಟನೆ ಖಂಡಿಸಿ ಸೇವ್ ಕೋಲಾರ, ಸೇವ್​ ಯೂತ್ಸ್​ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್​ ಇಲಾಖೆ ಹಾಗೂ ಜಿಲ್ಲಾಡಳಿತ ಈಗ ಅಲರ್ಟ್​ ಆಗಿದ್ದು, ಕಾನೂನು ಅರಿವು ಮೂಡಿಸಲು ಮುಂದಾಗಿದೆ.

ಕೋಲಾರದಲ್ಲಿ ಸ್ನೇಹಿತರಿಂದಲೇ ಅಪ್ರಾಪ್ತ ಬಾಲಕನ ಹತ್ಯೆ; ಕಾಲೇಜು ಮಕ್ಕಳಿಗೆ ಕಾನೂನು ಜಾಗೃತಿ ಮೂಡಿಸಲು ಮುಂದಾದ ಪೊಲೀಸರು
ಕೋಲಾರದಲ್ಲಿ ಕಾನೂನು ಜಾಗೃತಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 07, 2023 | 7:09 PM

Share
ಕೋಲಾರ, ನ.07: ನಗರದಲ್ಲಿ ನವೆಂಬರ್​ 4 ರಂದು ನಡೆದ ಅಪ್ರಾಪ್ತ ಬಾಲಕನ ಬರ್ಬರ ಹತ್ಯೆ ಪ್ರಕರಣ, ಇಡೀ ಕೋಲಾರ(Kolar) ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದೆ. ಅಷ್ಟೇ ಅಲ್ಲದೆ ಜನರು ತಮ್ಮ ಮಕ್ಕಳನ್ನು ಶಾಲಾ-ಕಾಲೇಜಿಗೆ ಕಳಿಸಲು ಹೆದರುವ ಸ್ಥಿತಿ ನಿರ್ಮಾಣವಾಗಿದೆ. ಎಲ್ಲಿ ತಮ್ಮ ಮಕ್ಕಳು ಹಾದಿ ತಪ್ಪುತ್ತಾರೋ ಎನ್ನುವ ಭಯ ಶುರುವಾಗಿದೆ. ಅದಕ್ಕೆ ತಕ್ಕಂತೆ ಸಾಮಾಜಿಕ ಜಾಲತಾಣಗಳಲ್ಲಿ ಸೇವ್​ ಕೋಲಾರ(Save Kolar), ಸೇವ್ ಯೂತ್ಸ್(Save Youths)​ ಅಭಿಯಾನ ಆರಂಭಿಸಲಾಗಿದೆ. ಇದರಿಂದ ಎಚ್ಚೆತ್ತಿರುವ ಪೊಲೀಸ್​ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಇಂದು(ನ.07) ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ.

ಅಕ್ರಮ ಚಟುವಟಿಕೆ ನಡೆಯದಂತೆ ಕ್ರಮ

ಕೋಲಾರದ ಎಸ್​ಡಿಸಿ ಕಾಲೇಜು ಸೇರಿದಂತೆ ವಿವಿಧೆಡೆ ಪೊಲೀಸ್ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ ಕಾನೂನಿನ ಪಾಠ ಹೇಳುವ ಕೆಲಸ ಮಾಡುತ್ತಿದ್ದಾರೆ. ಇನ್ನು ಮಕ್ಕಳು ಕೂಡ ಪೊಲೀಸರ ಮಾತುಗಳನ್ನು ಕೇಳಿ ಕೊಂಚ ಜಾಗೃತರಾಗುತ್ತಿದ್ದಾರೆ. ಅಲ್ಲದೆ ಕೋಲಾರದಲ್ಲಿ ನಡೆದ ಕೊಲೆಯ ಪ್ರಕರಣದ ಆತಂಕದಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ಮುಂದೆ ಕಾಲೇಜಿನಲ್ಲಿ ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ ಕ್ರಮವಹಿಸಲು ಕಾಲೇಜು ಆಡಳಿತ ಮಂಡಳಿಗಳೂ ನಿಯಮ ರೂಪಿಸುತ್ತಿವೆ.
ಇನ್ನು ಕೋಲಾರದಲ್ಲಿ ಕಳೆದ ಮೂರು ತಿಂಗಳಿಂದ ನಡೆಯುತ್ತಿರುವ ಸರಣಿ ಕೊಲೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಕೂಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳಿಗೆ ಕಾರಣವೇನು ಎನ್ನುವುದನ್ನು ಕಲೆ ಹಾಕುತ್ತಿದ್ದಾರೆ. ಪ್ರಮುಖವಾಗಿ ಕೋಲಾರ ಜಿಲ್ಲೆಗೆ ಆಂಧ್ರ, ತಮಿಳುನಾಡಿನಿಂದ, ಬರುವ ಅಕ್ರಮ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಕಡಿವಾಣ ಹಾಕಲು ಕೋಲಾರ ಜಿಲ್ಲೆಯ ಗಡಿಭಾಗಗಳಲ್ಲಿ ಚೆಕ್​ ಪೋಸ್ಟ್​ಗಳನ್ನು ನಿರ್ಮಾಣ ಮಾಡಿ ತಪಾಸಣೆ ಮಾಡಲು ಸೂಚನೆ ನೀಡಿದ್ದಾರೆ. ಅಲ್ಲದೆ ಕಾಲೇಜು ಆಡಳಿತ ಮಂಡಳಿಗಳ ಸಭೆ ಕರೆದು ಜಿಲ್ಲೆಯ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹೇರ್ ಕಟ್​, ಬಟ್ಟೆ ಸೇರಿದಂತೆ ಎಲ್ಲವನ್ನು ಬದಲಾಯಿಸಬೇಕು. ಜೊತೆಗೆ ಮಕ್ಕಳ ಮೇಲೆ ಕಾಲೇಜು ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ನಿಗಾ ವಹಿಸಬೇಕು ಎಂದು ಸೂಚಿಸಿದ್ದಾರೆ.
ಅದರ ಜೊತೆಗೆ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಗೂ ಸೂಚನೆ ನೀಡಿ ಬೆಳ್ಳಂಬೆಳಿಗ್ಗೆ ಬಾರ್​ ಬಾಗಿಲು ತೆರೆಯುವ ಹಾಗೂ ಚಿಲ್ಲರೆ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವವರ ಮೇಲೆ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಒಟ್ಟಾರೆ ಕೋಲಾರ ಜಿಲ್ಲೆಯಲ್ಲಿ ಮೇಲಿಂದ ಮೇಲೆ ನಡೆಯುತ್ತಿರುವ ಕೊಲೆ ಪ್ರಕರಣಗಳು ಜಿಲ್ಲೆಯ ನಾಗರೀಕರನ್ನು ಬೆಚ್ಚಿ ಬೀಳಿಸಿದ್ದು, ಸದ್ಯ ಈ ಸರಣಿ ಕೊಲೆಗಳಿಗೆ ಕಡಿವಾಣ ಹಾಕುವುದು ಹೇಗೆ ಎಂದು ತಲೆ ಕೆಡಿಸಿಕೊಂಡಿದ್ದಾರೆ. ಈ ಹಿನ್ನಲೆ ಜಿಲ್ಲೆಯಲ್ಲಿ ಜನರಿಗೆ, ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಮೂಲಕ ಎಚ್ಚರಿಕೆ ವಹಿಸುವ ಕೆಲಸಕ್ಕೆ ಮುಂದಾಗಿದ್ದು, ಇದು ಎಷ್ಟರ ಮಟ್ಟಿಗೆ ಸಾಕಾರಗೊಳ್ಳುತ್ತದೆ ಎಂಬುದನ್ನು ​ಕಾದು ನೋಡಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!