AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನ್ಯಾಪ್​: ನನ್ನ ಮಕ್ಕಳಾಣೆ ನಾನು ಹೇಳಿದ್ದೆಲ್ಲಾ ನಿಜ ಎಂದ ಮಾಜಿ ಸಚಿವ ವರ್ತೂರು ಪ್ರಕಾಶ್

ತನಿಖೆ ಚುರುಕುಗೊಳಿಸುವಂತೆ ಕೋರಲು ಹಾಗೂ ಅಗತ್ಯ ಮಾಹಿತಿ ನೀಡಲು ವರ್ತೂರು ಪ್ರಕಾಶ್​ ಪೊಲೀಸ್​ ಠಾಣೆಗೆ ಆಗಮಿಸಿದ್ದರು. ಎಸ್​ಪಿ ಭೇಟಿಯಾದ ಬಳಿಕ ಅವರು ಮಾಧ್ಯಮದ ಎದುರು ಈ ವಿಚಾರ ಹೇಳಿಕೊಂಡಿದ್ದಾರೆ.

ಕಿಡ್ನ್ಯಾಪ್​: ನನ್ನ ಮಕ್ಕಳಾಣೆ ನಾನು ಹೇಳಿದ್ದೆಲ್ಲಾ ನಿಜ ಎಂದ ಮಾಜಿ ಸಚಿವ ವರ್ತೂರು ಪ್ರಕಾಶ್
ವರ್ತೂರು ಪ್ರಕಾಶ್​
preethi shettigar
| Edited By: ಸಾಧು ಶ್ರೀನಾಥ್​|

Updated on:Dec 04, 2020 | 5:14 PM

Share

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್​ ಅಪಹರಣ ಪ್ರಕರಣ ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ವಿಚಾರಕ್ಕೆ ಸಂಬಂಧಿಸಿ ವರ್ತೂರು ಪ್ರಕಾಶ್​ ಮತ್ತೊಮ್ಮೆ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ನನ್ನ ರಾಜಕೀಯ ಭವಿಷ್ಯವನ್ನು ದಯವಿಟ್ಟು ಹಾಳು ಮಾಡಬೇಡಿ. ನನ್ನನ್ನು ಹಣಕ್ಕಾಗಿಯೇ ಕಿಡ್ನ್ಯಾಪ್​ ಮಾಡಲಾಗಿತ್ತು ಎಂದು ಮತ್ತೊಮ್ಮೆ ಅವರು ಹೇಳಿದ್ದಾರೆ.

ನನ್ನ ಕಾರು ಚಾಲಕ ತಪ್ಪಿಸಿಕೊಳ್ಳದಿದ್ದರೆ ನನ್ನ ಕೊಲೆ ಆಗುತ್ತಿತ್ತು

ತನಿಖೆ ಚುರುಕುಗೊಳಿಸುವಂತೆ ಕೋರಲು ಹಾಗೂ ಅಗತ್ಯ ಮಾಹಿತಿ ನೀಡಲು ವರ್ತೂರು ಪ್ರಕಾಶ್​ ಪೊಲೀಸ್​ ಠಾಣೆಗೆ ಆಗಮಿಸಿದ್ದರು. ಎಸ್​ಪಿ ಭೇಟಿಯಾದ ಬಳಿಕ ಮಾತನಾಡಿದ ಅವರು, “ಹೆಣ್ಣು, ಜಮೀನು, ಹಸು ಸಾಲದ ವಿಚಾರಕ್ಕೆ ನನ್ನ ಕಿಡ್ನ್ಯಾಪ್ ಆಗಿರಲಿಲ್ಲ. ನನ್ನ ಅಪಹರಣ​ ಆಗಿದ್ದು ಹಣಕ್ಕಾಗಿ. ನನ್ನ ಕಾರು ಚಾಲಕ ತಪ್ಪಿಸಿಕೊಳ್ಳದಿದ್ದರೆ ನನ್ನ ಕೊಲೆ ಆಗುತ್ತಿತ್ತು,” ಎಂದರು.

ನನ್ನ ಬಗ್ಗೆ ತಪ್ಪಾಗಿ ಸುದ್ದಿ ಪ್ರಸಾರ ಮಾಡಬೇಡಿ ಎಂದಿರುವ ಪ್ರಕಾಶ್​, “ಕೈ‌ಮುಗಿದು ಕೇಳಿ‌ಕೊಳ್ಳುತ್ತೇನೆ, ನನ್ನ ಭವಿಷ್ಯ ಹಾಳು ಮಾಡಬೇಡಿ. ಮತ್ತೊಮ್ಮೆ ನಾನು ಶಾಸಕನಾಗಬೇಕೆಂದುಕೊಂಡಿದ್ದೇನೆ. ಏನೇನೋ ಹೇಳಿ ನನ್ನ ತೇಜೋವಧೆ ಮಾಡಬೇಡಿ. ನನ್ನ ಮಕ್ಕಳಾಣೆ ನಾನು ಹೇಳಿರೋದೆಲ್ಲಾ ನಿಜ. ನೂರಕ್ಕೆ ನೂರರಷ್ಟು ಹಣಕ್ಕಾಗಿ ನನ್ನ ಅಪಹಣ ನಡೆದಿದೆ,” ಎಂದು ಅವರು ಅಳಲು ತೋಡಿಕೊಂಡರು.

ಮೂರು ದಿನಗಳಲ್ಲಿ ಸುಳಿವು ಸಿಗಲಿದೆ:

ಈಗಾಗಲೇ ಎಸ್​ಪಿ ಅವರನ್ನು ಭೇಟಿಯಾಗಿ ತನಿಖೆ ಚುರುಕುಗೊಳಿಸುವಂತೆ ಕೇಳಿದ್ದೇನೆ. ಅವರಿಗೆ ಎಲ್ಲಾ ರೀತಿಯ ಸಹಕಾರಕ್ಕೆ ನಾನು ಸಿದ್ಧ. ಅವರಿಗೆ ಅಗತ್ಯವಾಗಿ ಬೇಕಿರುವ ಮಾಹಿತಿ ಕೂಡ ನೀಡುತ್ತೇನೆ. ಎರಡು ಮೂರು ದಿನಗಳಲ್ಲಿ ಅಹರಣಕಾರರ ಸುಳಿವು ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?

Published On - 5:13 pm, Fri, 4 December 20

Follow Us
preethi shettigar
preethi shettigar
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ