AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದ ಈ 14ರ ಫೋರಿ ಸತ್ತಿದ್ದಾದರೂ ಹೇಗೆ? | Mystery shrouds death of a 14-year-old girl in Kolar

 ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಕೂರನಹೊಸಹಳ್ಳಿ ಗ್ರಾಮದ ತನ್ನ ಮನೆಯೊಂದರಲ್ಲಿ ಎಲ್ಲರೊಂದಿಗೆ ನಗುನಗುತಾ ಆಟವಾಡಿಕೊಂಡಿದ್ದ ಬಾಲಕಿಯೊಬ್ಬಳು, ಆಕೆಯ ತಂದೆ ಪಡಿತರ ಅಂಗಡಿಗೆ ಹೋಗಿ ತಮ್ಮ ಕುಟುಂಬದ ಪಾಲಿನ ಅಕ್ಕಿಯನ್ನು ಮನೆಗೆ ತರುವಷ್ಟರಲ್ಲಿ ಶವವಾಗಿ ಪತ್ತೆಯಾಗಿದ್ದು; ಆಕೆಯ ಸಾವು ಅಕಸ್ಮಿಕವೋ, ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವುದು ಶೋಕಸಾಗರದಲ್ಲಿ ಮುಳುಗಿರುವ ಆಕೆಯ ಕುಟುಂಬಕ್ಕೆ, ಊರಿನವರಿಗೆ ಮತ್ತು ಪೊಲೀಸರಿಗೂ ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ. ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಭಾವಿಸಿದ ಪಾಲಕರು ಅಂತ್ಯಕ್ರಿಯೆಯನ್ನೂ ಮಾಡಿ ಮುಗಿಸಿದ್ದರು. ಆದರೆ, ಸಾವಿನ ಬಗ್ಗೆ ಆನುಮಾನಗಳು ಹುಟ್ಟಿದ ಮೇಲೆ […]

ಕೋಲಾರದ ಈ 14ರ ಫೋರಿ ಸತ್ತಿದ್ದಾದರೂ ಹೇಗೆ? | Mystery shrouds death of a 14-year-old girl in Kolar
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 19, 2020 | 9:46 PM

Share

 ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಕೂರನಹೊಸಹಳ್ಳಿ ಗ್ರಾಮದ ತನ್ನ ಮನೆಯೊಂದರಲ್ಲಿ ಎಲ್ಲರೊಂದಿಗೆ ನಗುನಗುತಾ ಆಟವಾಡಿಕೊಂಡಿದ್ದ ಬಾಲಕಿಯೊಬ್ಬಳು, ಆಕೆಯ ತಂದೆ ಪಡಿತರ ಅಂಗಡಿಗೆ ಹೋಗಿ ತಮ್ಮ ಕುಟುಂಬದ ಪಾಲಿನ ಅಕ್ಕಿಯನ್ನು ಮನೆಗೆ ತರುವಷ್ಟರಲ್ಲಿ ಶವವಾಗಿ ಪತ್ತೆಯಾಗಿದ್ದು; ಆಕೆಯ ಸಾವು ಅಕಸ್ಮಿಕವೋ, ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವುದು ಶೋಕಸಾಗರದಲ್ಲಿ ಮುಳುಗಿರುವ ಆಕೆಯ ಕುಟುಂಬಕ್ಕೆ, ಊರಿನವರಿಗೆ ಮತ್ತು ಪೊಲೀಸರಿಗೂ ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ. ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಭಾವಿಸಿದ ಪಾಲಕರು ಅಂತ್ಯಕ್ರಿಯೆಯನ್ನೂ ಮಾಡಿ ಮುಗಿಸಿದ್ದರು. ಆದರೆ, ಸಾವಿನ ಬಗ್ಗೆ ಆನುಮಾನಗಳು ಹುಟ್ಟಿದ ಮೇಲೆ ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ.

ಸ್ನೇಹ ಎಂದು ಗುರುತಿಸಲಾಗಿರುವ 14 ವರ್ಷದ ಮೃತ ಬಾಲಕಿ ನವೆಂಬರ್ 16 ರಂದು ಮನೆಯಲ್ಲಿ ಎಲ್ಲರೊಂದಿಗೆ ದೀಪಾವಳಿ ಹಬ್ಬವನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಿದ್ದಳು. ಮಾರನೇ ದಿನ ಆಕೆಯ ತಂದೆ ಶ್ರೀನಿವಾಸ ತಮ್ಮ ಎರಡನೇ ಮಗಳನ್ನು (ಸ್ನೇಹಳ ತಂಗಿ) ಪಡಿತರ ಆಂಗಡಿಗೆ ಕರೆದುಕೊಂಡು ಹೋಗುವ ಮುನ್ನ, ಮೊಬೈಲ್​ನಲ್ಲಿ ಆಟವಾಡುತ್ತಿದ್ದ ಸ್ನೇಹಳಿಂದ ಫೋನನ್ನು ಇಸಿದುಕೊಂಡಿದ್ದರು.

ಅವರು ಅಕ್ಕಿ ತೆಗೆದುಕೊಂಡು ಮನೆಗೆ ಬಂದಾಗ ಸ್ನೇಹ ಮಂಚದ ಮೇಲೆ ನಿಶ್ಚೇಷ್ಟಿತಳಾಗಿ ಮಲಗಿರುವುದನ್ನು ಕಂಡು ಎಬ್ಬಿಸಲು ಹೋಗಿದ್ದಾರೆ. ಆದರೆ ಆಕೆಯ ಮೈಯೆಲ್ಲ ತಣ್ಣಗಾಗಿದ್ದು ಕಂಡು ಗಾಬರಿಗೊಂಡಿದ್ದಾರೆ. ಶ್ರೀನಿವಾಸ್, ಬಾಮ್ ಒಂದರಿಂದ ಆಕೆಯ ಕಾಲನ್ನು ತಿಕ್ಕಿ, ಸ್ನೇಹಳಿಂದ ಪ್ರತಿಕ್ರಿಯೆ ಬಾರದಿದ್ದಾಗ ಪಕ್ಕದೂರಿನ ಅಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ಆಕೆ ಮೃತಪಟ್ಟಿರುವುದನ್ನು ದೃಢೀಕರಿಸಿದ್ದಾರೆ. ಆಕೆಯ ಕತ್ತಿನ ಮೇಲಿದ್ದ ಗಾಯದ ಗುರುತನ್ನು ನೋಡಿ, ಮೊಬೈಲ್ ಫೋನನ್ನು ತೆಗೆದುಕೊಂಡು ಹೋಗಿದ್ದಕ್ಕೆ ಬೇಜಾರಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಭಾವಿಸಿ ಶವಸಂಸ್ಕಾರ ನಡೆಸಿದ್ದಾರೆ.

ಆದರೆ, ಅಕೆಯ ಸೋದರಮಾವನಾಗಿರುವ ನಾಗೇಶ್ ಎನ್ನುವವರಿಗೆ; ಸ್ನೇಹ ಬುದ್ಧಿವಂತೆ, ವಿವೇಕಶೀಲೆ, ಓದಿನಲ್ಲಿ ಚುರುಕು ಎನ್ನುವ ವಿಷಯ ಗೊತ್ತಿತ್ತು. ಮೊಬೈಲ್​ನಂಥ ಸಣ್ಣ ವಿಚಾರಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿರಲಾರಳು ಎಂಬುದನ್ನು ಗ್ರಹಿಸಿ ಮಾಸ್ತಿ ಪೊಲೀಸ್ ಠಾನಣೆಗೆ ದೂರು ನೀಡಿ ಆಕೆಯ ಸಾವಿನ ತನಿಖೆ ನಡೆಸುವಂತೆ ಕೋರಿದ್ದಾರೆ. ಅವರ ದೂರಿ ಆಧಾರದ ಮೇಲೆಯೇ, ಗುರುವಾರದಂದು ಪೊಲೀಸರು ಮಾಲೂರು ತಹಸಿಲ್ದಾರ್ ಅವರ ಸಮಕ್ಷಮದಲ್ಲಿ ಮೃತಳ ದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದರು. ವರದಿಯಲ್ಲೇನಿದೆ ಅನ್ನುವುದು ಇನ್ನೂ ಗೊತ್ತಾಗಿಲ್ಲ. ಸ್ನೇಹಳ ಆಕಸ್ಮಿಕ ಸಾವು ಹಲವು ಅನುಮಾನಗಳನ್ನು ಮೂಡಿಸಿದೆ. ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ಸಹ ನೀಡದೆ ಅಂತ್ಯಸಂಸ್ಕಾರ ನಡೆಸಿರೋದು, ಸಾವು ಹೇಗಾಯ್ತು ಅನ್ನೋದರ ಬಗ್ಗೆ ನಿಖರ ಮಾಹಿತಿ ಸಿಗದಿರುವುದು ಗೊಂದಲ ಮೂಡಿಸುತ್ತಿದೆ.

ಪೊಲೀಸರ ತನಿಖೆಯಿಂದಷ್ಟೆ ಸತ್ಯ ಬಯಲಿಗೆ ಬರಬೇಕು.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?