Sign In

By signing in or creating an account, you agree with Associated Broadcasting Company's Terms & Conditions and Privacy Policy.

Vemagal Police: ಕೋಲಾರದಲ್ಲಿ ಇದೇನಿದು ಲವ್ ಗಲಾಟೆ, ಮುಂದೇನಾಗುತ್ತದೆ ಆ ಯುವಕ-ಯುವತಿಯ ಬಾಳಲ್ಲಿ?

vemagal police: ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಯುವಕ ಮುನಿರಾಜು ಹಾಗೂ ಯುವತಿ ಸಿಂಧು ಒಂದೇ ಜಾತಿಯವರಾಗಿದ್ದು, ಪೋಷಕರನ್ನ ಒಪ್ಪಿಸಿ ಮದುವೆಯಾಗುವಲ್ಲಿ ವಿಫಲರಾಗಿದ್ದಾರೆ. ಇನ್ನು ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯುವತಿ ಸಿಂಧು ದೂರು ನೀಡಿದ್ದಾಳೆ.

Vemagal Police: ಕೋಲಾರದಲ್ಲಿ ಇದೇನಿದು ಲವ್ ಗಲಾಟೆ, ಮುಂದೇನಾಗುತ್ತದೆ ಆ ಯುವಕ-ಯುವತಿಯ ಬಾಳಲ್ಲಿ?
ಕೋಲಾರದಲ್ಲಿ ಇದೇನಿದು ಲವ್ ಗಲಾಟೆ, ಮುಂದೇನಾಗುತ್ತದೆ ಆ ಯುವಕ-ಯುವತಿಯ ಬಾಳಲ್ಲಿ?
Follow us
TV9 Web
| Updated By: ಸಾಧು ಶ್ರೀನಾಥ್​

Updated on: Apr 26, 2022 | 10:12 PM

ಕೋಲಾರ: ಹಲವಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು, ಕೊನೆಗೂ ಪ್ರೀತಿಸಿ ಮದುವೆಯಾಗಿದ್ದಾರೆ (love marriage). ಆದರೆ ಅದೇ ಮಹಾಪರಾಧವಾಗಿ ಪರಿಣಮಿಸಿದೆ. ಇವರ ಪ್ರೀತಿಯನ್ನು ಒಪ್ಪದ ಯುವತಿಯ ಮನೆಯವರು ಯುವಕನ ಮನೆಯ ಮೇಲೆ‌ ದಾಳಿ ಮಾಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ತಾಲ್ಲೂಕಿನ ವೇಮಗಲ್‌ನಲ್ಲಿ ಈ ಘಟನೆ ನಡೆದಿದ್ದು, ವೇಮಗಲ್ ಗ್ರಾಮದ ಮುನಿರಾಜು ಹಾಗೂ ಸಿಂಧು ಪರಸ್ಪರ ಪ್ರೀತಿಸಿ ಮದುವೆಯಾದ ದಂಪತಿ.

ಆದರೆ, ಪ್ರೀತಿಯಿಂದ ಸಾಕಿ ಸಲುಹಿದ ಮಗಳನ್ನ ಪ್ರೀತಿಸಿದ ಯುವಕ ಬೇರೆಡೆ ಕರೆದುಕೊಂಡು ಹೋಗಿ ಮದುವೆಯಾಗಿದ್ದಾನೆ ಎಂದು ವಿಚಾರ ತಿಳಿದ ಯುವತಿಯ ಪೋಷಕರು ವೇಮಗಲ್‌ನಲ್ಲಿನ ಮುನಿರಾಜು ಮನೆಯ ಮೇಲೆ‌ ದಾಳಿ ಮಾಡಿ‌ ಮನೆಯ ಆವರಣದಲ್ಲಿದ್ದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಮನೆಯ ಮೇಲೆ‌ ದಾಳಿ ಮಾಡಿ ಬೆಂಕಿ ಹಚ್ಚಿ ಯುವಕನ ತಂದೆ ಹಾಗೂ ಅತ್ತಿಗೆಯ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು, ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಯುವಕ ಮುನಿರಾಜು ಹಾಗೂ ಯುವತಿ ಸಿಂಧು ಒಂದೇ ಜಾತಿಯವರಾಗಿದ್ದು, ಪೋಷಕರನ್ನ ಒಪ್ಪಿಸಿ ಮದುವೆಯಾಗುವಲ್ಲಿ ವಿಫಲರಾಗಿದ್ದಾರೆ. ಇನ್ನು ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ (vemagal police) ಘಟನೆ ನಡೆದಿದ್ದು, ಯುವತಿ ಸಿಂಧು ದೂರು ನೀಡಿದ್ದಾಳೆ. ತಮ್ಮ ಪೋಷಕರ ವಿರುದ್ದವೇ ದೂರು ಸಲ್ಲಿಸಿದ ಯುವತಿ ಸಿಂಧು ತಮಗೆ ರಕ್ಷಣೆ ನೀಡುವಂತೆ ವ್ಯಾಟ್ಸಾಪ್ ಮೂಲಕ ಪತ್ರ ರವಾನೆ ಮಾಡಿದ್ದಾಳೆ.

Also Read: Jet Airways Jobs: ಜೆಟ್​ ಏರ್​ವೇಸ್ ಆಕಾಶ ಮಾರ್ಗದಲ್ಲಿ ಉದ್ಯೋಗಾವಕಾಶ ಸುರಿಮಳೆ, ಅಕ್ರಮಗಳಿಗೆ ಅವಕಾಶವಿಲ್ಲ!

Also Read: PSI Recruitment Scam: ದೇಶದ್ರೋಹಿ ದಾವೂದ್ ಇಬ್ರಾಹಿಂಗೆ ಜಾರಿ ಮಾಡಿದಂತೆ ದಿವ್ಯಾ ಹಾಗರಗಿಗೂ ಅರೆಸ್ಟ್​ ವಾರಂಟ್ ಜಾರಿ!

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ