AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಕೊಡಲು ಹಣ ಇಲ್ಲ, ಜಾಹೀರಾತಿಗೆ 200 ಕೋಟಿ ಅನುದಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೆಚ್​ಡಿಕೆ ಆಕ್ರೋಶ

ಕೋಲಾರದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದ ಹೆಚ್​ಡಿ ಕುಮಾರಸ್ವಾಮಿಯವರು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ರಾಜ್ಯದಿಂದ ಕಾಂಗ್ರೆಸ್ ತೆಗೆದುಹಾಕಬೇಕು ಎಂದಿದ್ದಾರೆ. ರೈತರು ನಷ್ಟದಲ್ಲಿದ್ದಾರೆ, ಪರಿಹಾರ ಕೊಡೋಕೆ ಹಣ ಇಲ್ಲ. ಆದರೆ ಜಾಹೀರಾತು ಕೊಡೋಕೆ 200 ಕೋಟಿ ಹಣ ಬಜೆಟ್​ನಲ್ಲಿ ಅನುದಾನ ಪಡೆದಿದ್ದಾರೆ ಎಂದು ಕಿಡಿಕಾರಿದ್ದಾರೆ.

ರೈತರಿಗೆ ಕೊಡಲು ಹಣ ಇಲ್ಲ, ಜಾಹೀರಾತಿಗೆ 200 ಕೋಟಿ ಅನುದಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೆಚ್​ಡಿಕೆ ಆಕ್ರೋಶ
ಹೆಚ್​ಡಿ ಕುಮಾರಸ್ವಾಮಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Feb 26, 2024 | 1:42 PM

Share

ಕೋಲಾರ, ಫೆ.26: ರಾಜ್ಯದ ಜನತೆ ಕಾಂಗ್ರೆಸ್​ನ (Congress) ಕೆಟ್ಟ ಸರ್ಕಾರ ತೆಗೆಯಬೇಕಿದೆ. ಜಾಹೀರಾತು ಕೊಡೋಕೆ ಬಜೆಟ್​ನಲ್ಲಿ 200 ಕೋಟಿ ಅನುದಾನ ಪಡೆಯುತ್ತಾರೆ. ರೈತರು ನಷ್ಟದಲ್ಲಿದ್ದಾರೆ, ಪರಿಹಾರ ಕೊಡೋಕೆ ಹಣ ಇಲ್ಲ. ಜಾಹೀರಾತು ಕೊಡೋಕೆ 200 ಕೋಟಿ ಹಣ ಪಾಸ್ ಮಾಡ್ತಾರೆ. ಜಾಹೀರಾತಿನಲ್ಲಿ ಇರುವ ಕಲರ್ ಫೋಟೋ ನೋಡಿದ್ರೆ ಹೇಸಿಗೆ ಆಗುತ್ತೆ. ಸರ್ಕಾರ ಯಾರಪ್ಪನ ದುಡ್ಡಲ್ಲಿ ಜಾಹೀರಾತು ಕೊಡ್ತಿದ್ದಾರೆ ಎಂದು ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಲೋಕಸಭಾ ಚುನಾವಣೆ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆ ಜೆಡಿಎಸ್ ಭರ್ಜರಿ ತಯಾರಿ ಶುರು ಮಾಡಿದೆ. ಈ ನಡುವೆ ಇಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಯವರು ಕೋಲಾರದಲ್ಲಿ ನಡೆಯುತ್ತಿರುವ ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ದಿ ಮಂಜುನಾಥ್ ಅವರ ಸಿರಿಸಮೃದ್ದಿ ಗೋಲ್ಡ್ ಪ್ಯಾಲೇಸ್ ಎರಡನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಮುಳಬಾಗಿಲು ಶಾಸಕ ಸಮೃದ್ದಿ ಮಂಜುನಾಥ್ ಹೆಸರು ಸಹ ಕೇಳಿ ಬರ್ತಿದೆ. ಈ ಬಾರಿ ಕೋಲಾರ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ. ಸೀಟ್ ಹಂಚಿಕೆ ಬಗ್ಗೆ ಅಧಿಕೃತವಾಗಿ ಘೋಷಣೆ ಆಗಬೇಕು. ಸಂಸದ ಮುನಿಸ್ವಾಮಿ ಸಹ ನಿರೀಕ್ಷೆ ಇಟ್ಟಿದ್ದಾರೆ, ಅಂತಿಮವಾಗಿ ಪಟ್ಟಿ ಬರಲಿದೆ. ಮುನಿಸ್ವಾಮಿ ಸಹ ಸಮರ್ಥರಿದ್ದಾರೆ ಎಂದರು.

ರಾಜ್ಯ ಕಾಂಗ್ರೆಸ್​ನ ಕೆಟ್ಟ ಸರ್ಕಾರ ತೆಗೀಬೇಕಾಗಿದೆ. ಬಜೆಟ್​ನಲ್ಲಿ ಜಾಹೀರಾತು ಕೊಡೋಕೆ 200 ಕೋಟಿ ಅನುದಾನ ಪಡೆಯುತ್ತಾರೆ. ರೈತರು ನಷ್ಟದಲ್ಲಿದ್ದಾರೆ, ಪರಿಹಾರ ಕೊಡೋಕೆ ಹಣ ಇಲ್ಲ. ರೈತರಿಗೆ ತಲಾ 2 ಸಾವಿರ ಕೊಡ್ತೀವಿ ಅಂತ 620 ಕೋಟಿ ಮೀಸಲಿಟ್ಟಿದ್ದಾರೆ. ಅದರಲ್ಲಿ 75 ಪರ್ಸೆಂಟ್ ಕೇಂದ್ರದ್ದು, 25 ಪರ್ಸೆಂಟ್ ರಾಜ್ಯದ್ದು. ಜಾಹೀರಾತು ಕೊಡೋಕೆ 200 ಕೋಟಿ ಹಣ ಪಾಸ್ ಮಾಡ್ತಾರೆ. ಜಾಹಿರಾತಿನಲ್ಲಿ ಇರುವ ಕಲರ್ ಫೋಟೋ ನೋಡಿದ್ರೆ ಹೇಸಿಗೆ ಆಗುತ್ತೆ. ಸರ್ಕಾರ ಯಾರಪ್ಪನ ದುಡ್ಡಲ್ಲಿ ಜಾಹೀರಾತು ಕೊಡ್ತಿದ್ದಾರೆ. ರೈತರ ಸಾಲಮನ್ನ ಮಾಡಿದ ಬಳಿಕ ನಾನು ಜಾಹೀರಾತು ಎಲ್ಲೂ ಹಾಕಿಲ್ಲ. ಗೃಹಲಕ್ಷ್ಮಿ ಯೋಜನೆಯಲ್ಲಿ ಬೇಕಾದ್ರೆ ಇನ್ನು 2 ಸಾವಿರ ಹೆಚ್ಚಿಗೆ ಕೊಡಲಿ. ಸರ್ಕಾರ ಗ್ಯಾರಂಟಿ ಬಗ್ಗೆ ಕನವರಿಕೆ ಮಾಡಿ ಖಜಾನೆ ಖಾಲಿ ಮಾಡಿಕೊಳ್ತಿದ್ದಾರೆ ಎಂದು ಹೆಚ್​ಡಿಕೆ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Karnataka Budget Session: ರಾಜಾ ವೆಂಕಟಪ್ಪ ನಾಯಕ್ ಜನಪರ ಕಾಳಜಿಯುಳ್ಳ ನಾಯಕರಾಗಿದ್ದರು: ಸಿದ್ದರಾಮಯ್ಯ, ಸಿಎಂ

ಜೆಡಿಎಸ್ ಶಾಸಕರು ಕಾಂಗ್ರೆಸ್​ಗೆ ಹೋಗ್ತಾ ಇರ್ತಾರೆ, ಬರ್ತಾರೆ ತಲೆ ಏಕೆ ಕೆಡಿಸಿಕೊಳ್ಳಬೇಕು. ಡಿಕೆಶಿಗೆ ಹಣ ಹಾಗೂ ಧಮ್ಕಿ ನಲ್ಲಿ ಪೈಪೋಟಿ ಕೊಡೋಕೆ ಆಗುತ್ತಾ? ಯಾರಾದ್ರೂ ಶಾಸಕರು ಆ ರೀತಿ ಹೇಳಿದ್ದಾರ? ಸೆಟಲ್ಮೆಂಟ್ ರಾಜಕಾರಣದಲ್ಲಿ ಪೈಪೋಟಿ ಕೊಡೋಕೆ ನಮ್ಮಿಂದ ಆಗಲ್ಲ. ಗಿಫ್ಟ್ ಹಂಚೋರು ಎಲ್ಲಾ ಬಿಟ್ಟಿದ್ದಾರೆ ಅದರ ಬಗ್ಗೆ ಮಾತಾಡಲ್ಲ. ಚೈನಾದಿಂದ ಖರೀದಿ ಮಾಡಿರುವ ಕುಕ್ಕರ್ ಹಾಗೂ ಡೈನಿಂಗ್ ಸೆಟ್ ಹಂಚುತ್ತಿದ್ದಾರೆ. ಕಾಂಗ್ರೆಸ್ ನವ್ರು 55 ವರ್ಷಗಳಿಂದ ಇದೆ ಪರಿಸ್ಥಿತಿಯಲ್ಲಿಟ್ಟಿದ್ದಾರೆ. ಲೂಟಿ ಹೊಡೆದಿರುವ ಗಿಫ್ಟ್ ಹಂಚಲಾಗ್ತಿದೆ. ಒಳ್ಳೆ ಕೆಲಸ ಮಾಡಿದ್ರೆ ಗಿಫ್ಟ್ ಕೊಡ್ಬೇಕಾ? ಎಂದು ಡಿಸಿಎಂ ಡಿಕೆ ಶಿವಕುಮಾರ್​ಗೆ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇನ್ನು ಕೋಲಾರಕ್ಕೆ ಎತ್ತಿನಹೊಳೆ ಯೋಜನೆ ಕೊಡುವ ವಿಚಾರ ಸಂಬಂಧ ಮಾತನಾಡಿದ ಹೆಚ್​ಡಿಕೆ, ಸಿಎಂ ಸಿದ್ದರಾಮಯ್ಯ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಟೋಪಿ ಹಾಕಿದ್ದಾರೆ. ಅರಸಿಕೆರಿಗೆ ಕೊಡೋಕೆ ಇನ್ನು 2 ವರ್ಷ ಆಗುತ್ತೆ ಅಂತ ಸಿಎಂ ಹೇಳ್ತಿದ್ದಾರೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:24 pm, Mon, 26 February 24

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​