AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಕಾರಿನ ಮುಂಭಾಗ ನಿಂತು ಜನ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ! ಏನು ವಿಶೇಷ?

ಕೋಲಾರದಲ್ಲಿ ಅಯೋಧ್ಯೆ ಶ್ರೀರಾಮನ ಸ್ಟಿಕ್ಕರ್ ಕಟ್ಟಿಂಗ್​ ಮಾಡಲಾಗಿರುವ ಕಾರ್​ನ ಮುಂಭಾಗ ನಿಂತು ಸೆಲ್ಪಿ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಕಾರಿನ ಮೇಲೆ ನನ್ನ ಆರಾಧ್ಯ ದೈವ ರಾಮನ ಚಿತ್ರ ಹಾಕಿಸಿಕೊಂಡಿದ್ದೇನೆ. ಇದು ನನ್ನ ಖುಷಿ, ಯಾರೂ ಏನೂ ಮಾಡುವಂತಿಲ್ಲ - ಸಂಸದ ಮುನಿಸ್ವಾಮಿ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಸಾಧು ಶ್ರೀನಾಥ್​|

Updated on: Jan 22, 2024 | 11:07 AM

Share

ಸದ್ಯ ಈಗಂತೂ ಎಲ್ಲಿ ನೋಡಿದರೂ ರಾಮನದ್ದೇ ಜಪ, ಎಲ್ಲರೂ ಕೂಡಾ ರಾಮನ ಹೆಸರಲ್ಲಿ ವಿಭಿನ್ನವಾಗಿ ಏನಾದರೂ ಮಾಡಿ ಗಮನ ಸೆಳೆಯುವ ಕೆಲಸ ಮಾಡಲಾಗುತ್ತಿದೆ. ಅದಕ್ಕೆ ಪೂರಕ ಎಂಬಂತೆ ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಅವರು ತಮ್ಮ ಕಾರಿಗೆ ಅಯೋಧ್ಯೆ ಶ್ರೀರಾಮ ಮಂದಿರ ಹಾಗೂ ಅಯೋಧ್ಯೆ ಶ್ರೀರಾಮನ ಚಿತ್ರಗಳಿರುವ ಸ್ಟಿಕ್ಕರ್​ ಕಟ್ಟಿಂಗ್ ಮಾಡಿಸುವ ಮೂಲಕ ತಮ್ಮ ಫಾರ್ಚೂನರ್​ ಕಾರ್​ನ್ನು ಆಕರ್ಷಕವಾಗಿಸಿದ್ದಾರೆ.

ತಮ್ಮ ಕಾರ್​ ಮೇಲೆ ಅಯೋಧ್ಯೆ ಶ್ರೀರಾಮ ಮಂದಿರದ ಚಿತ್ರವಿರುವ ಸ್ಟಿಕ್ಕರ್​ ಹಾಗೂ ಅಯೋಧ್ಯೆ ರಾಮನ ಚಿತ್ರವಿರುವ ಸ್ಟಿಕ್ಕರ್​ ಕಟ್ಟಿಂಗ್ ಮಾಡಿಸಿದ್ದಾರೆ. ಇನ್ನು ಕಾರಿನ ಹಿಂಭಾಗದಲ್ಲಿ ನರೇಂದ್ರ ಮೋದಿ ಹಾಗೂ ರಾಮಲಲ್ಲಾರ ಚಿತ್ರವನ್ನು ಬಿಡಿಸಲಾಗಿದೆ. ಸದ್ಯ ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಅವರ ಕಾರು ಎಲ್ಲರಿಗೂ ಆಕರ್ಷಣೆಯಾಗಿದೆ.

ಹಾಗಾಗಿ ಅಯೋಧ್ಯೆ ಶ್ರೀರಾಮನ ಸ್ಟಿಕ್ಕರ್ ಕಟ್ಟಿಂಗ್​ ಮಾಡಲಾಗಿರುವ ಕಾರ್​ನ ಮುಂಭಾಗ ನಿಂತು ಸೆಲ್ಪಿ ತೆಗೆದುಕೊಳ್ಳುತ್ತಿದ್ದಾರೆ. ಸದ್ಯ ಈ ಬಗ್ಗೆ ಮಾತನಾಡಿರುವ ಕೋಲಾರ ಸಂಸದ ಕೋಲಾರದಲ್ಲಿ ಶ್ರೀರಾಮನ ಫ್ಲೆಕ್ಸ್ ಬ್ಯಾನರ್​ಗಳನ್ನು ಹಾಕಲು ನಿರ್ಬಂಧ ಮಾಡಿದ್ದಾರೆ. ಹಾಗಾಗಿ ನನ್ನ ಕಾರಿನ ಮೇಲೆ ನಾನು ನನ್ನ ಆರಾಧ್ಯ ದೈವ ರಾಮನ ಚಿತ್ರವನ್ನು ಹಾಕಿಸಿಕೊಂಡಿದ್ದೇನೆ. ಇದು ನನ್ನ ಖುಷಿ ಯಾರೂ ಏನೂ ಮಾಡುವಂತಿಲ್ಲ ಎಂದರು.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?