AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಕಾರಿನ ಮುಂಭಾಗ ನಿಂತು ಜನ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ! ಏನು ವಿಶೇಷ?

ಕೋಲಾರದಲ್ಲಿ ಅಯೋಧ್ಯೆ ಶ್ರೀರಾಮನ ಸ್ಟಿಕ್ಕರ್ ಕಟ್ಟಿಂಗ್​ ಮಾಡಲಾಗಿರುವ ಕಾರ್​ನ ಮುಂಭಾಗ ನಿಂತು ಸೆಲ್ಪಿ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಕಾರಿನ ಮೇಲೆ ನನ್ನ ಆರಾಧ್ಯ ದೈವ ರಾಮನ ಚಿತ್ರ ಹಾಕಿಸಿಕೊಂಡಿದ್ದೇನೆ. ಇದು ನನ್ನ ಖುಷಿ, ಯಾರೂ ಏನೂ ಮಾಡುವಂತಿಲ್ಲ - ಸಂಸದ ಮುನಿಸ್ವಾಮಿ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Jan 22, 2024 | 11:07 AM

Share

ಸದ್ಯ ಈಗಂತೂ ಎಲ್ಲಿ ನೋಡಿದರೂ ರಾಮನದ್ದೇ ಜಪ, ಎಲ್ಲರೂ ಕೂಡಾ ರಾಮನ ಹೆಸರಲ್ಲಿ ವಿಭಿನ್ನವಾಗಿ ಏನಾದರೂ ಮಾಡಿ ಗಮನ ಸೆಳೆಯುವ ಕೆಲಸ ಮಾಡಲಾಗುತ್ತಿದೆ. ಅದಕ್ಕೆ ಪೂರಕ ಎಂಬಂತೆ ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಅವರು ತಮ್ಮ ಕಾರಿಗೆ ಅಯೋಧ್ಯೆ ಶ್ರೀರಾಮ ಮಂದಿರ ಹಾಗೂ ಅಯೋಧ್ಯೆ ಶ್ರೀರಾಮನ ಚಿತ್ರಗಳಿರುವ ಸ್ಟಿಕ್ಕರ್​ ಕಟ್ಟಿಂಗ್ ಮಾಡಿಸುವ ಮೂಲಕ ತಮ್ಮ ಫಾರ್ಚೂನರ್​ ಕಾರ್​ನ್ನು ಆಕರ್ಷಕವಾಗಿಸಿದ್ದಾರೆ.

ತಮ್ಮ ಕಾರ್​ ಮೇಲೆ ಅಯೋಧ್ಯೆ ಶ್ರೀರಾಮ ಮಂದಿರದ ಚಿತ್ರವಿರುವ ಸ್ಟಿಕ್ಕರ್​ ಹಾಗೂ ಅಯೋಧ್ಯೆ ರಾಮನ ಚಿತ್ರವಿರುವ ಸ್ಟಿಕ್ಕರ್​ ಕಟ್ಟಿಂಗ್ ಮಾಡಿಸಿದ್ದಾರೆ. ಇನ್ನು ಕಾರಿನ ಹಿಂಭಾಗದಲ್ಲಿ ನರೇಂದ್ರ ಮೋದಿ ಹಾಗೂ ರಾಮಲಲ್ಲಾರ ಚಿತ್ರವನ್ನು ಬಿಡಿಸಲಾಗಿದೆ. ಸದ್ಯ ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಅವರ ಕಾರು ಎಲ್ಲರಿಗೂ ಆಕರ್ಷಣೆಯಾಗಿದೆ.

ಹಾಗಾಗಿ ಅಯೋಧ್ಯೆ ಶ್ರೀರಾಮನ ಸ್ಟಿಕ್ಕರ್ ಕಟ್ಟಿಂಗ್​ ಮಾಡಲಾಗಿರುವ ಕಾರ್​ನ ಮುಂಭಾಗ ನಿಂತು ಸೆಲ್ಪಿ ತೆಗೆದುಕೊಳ್ಳುತ್ತಿದ್ದಾರೆ. ಸದ್ಯ ಈ ಬಗ್ಗೆ ಮಾತನಾಡಿರುವ ಕೋಲಾರ ಸಂಸದ ಕೋಲಾರದಲ್ಲಿ ಶ್ರೀರಾಮನ ಫ್ಲೆಕ್ಸ್ ಬ್ಯಾನರ್​ಗಳನ್ನು ಹಾಕಲು ನಿರ್ಬಂಧ ಮಾಡಿದ್ದಾರೆ. ಹಾಗಾಗಿ ನನ್ನ ಕಾರಿನ ಮೇಲೆ ನಾನು ನನ್ನ ಆರಾಧ್ಯ ದೈವ ರಾಮನ ಚಿತ್ರವನ್ನು ಹಾಕಿಸಿಕೊಂಡಿದ್ದೇನೆ. ಇದು ನನ್ನ ಖುಷಿ ಯಾರೂ ಏನೂ ಮಾಡುವಂತಿಲ್ಲ ಎಂದರು.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

ಮುದ್ದಾದ ಹೆಣ್ಣು ಮಗುವಿಗೆ ನಾಮಕರಣ ಮಾಡಿದ ಶಿವರಾಜ್​​ಕುಮಾರ್
ಮುದ್ದಾದ ಹೆಣ್ಣು ಮಗುವಿಗೆ ನಾಮಕರಣ ಮಾಡಿದ ಶಿವರಾಜ್​​ಕುಮಾರ್
ಆಸ್ಟ್ರೇಲಿಯಾ ತಂಡಕ್ಕೆ ಟ್ರಾವಿಸ್ ಹೆಡ್ ಕ್ಯಾಪ್ಟನ್
ಆಸ್ಟ್ರೇಲಿಯಾ ತಂಡಕ್ಕೆ ಟ್ರಾವಿಸ್ ಹೆಡ್ ಕ್ಯಾಪ್ಟನ್
ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು