AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಕಟಾವಿಗೆ ಬಂದ 700ಕ್ಕೂ ಹೆಚ್ಚು ಕಲ್ಲಂಗಡಿ ಹಣ್ಣುಗಳನ್ನ ನಾಶಪಡಿಸಿದ ದುಷ್ಕರ್ಮಿಗಳು

ಅಂಬರೀಶ್ ಎಂಬ ರೈತ 5 ಎಕರೆ ಜಮೀನನ್ನು ಗುತ್ತಿಗೆಗೆ ಪಡೆದು ಕಲ್ಲಂಗಡಿ ಬೆಳೆದಿದ್ದರು. ಆದರೆ ದುಷ್ಕರ್ಮಿಗಳು ಕಲ್ಲಂಗಡಿ ಹಣ್ಣುಗಳನ್ನು ಮನಬಂದಂತೆ ಕತ್ತರಿಸಿದ್ದಾರೆ. ಬೆಳಿಗ್ಗೆ ಎಂದಿನಂತೆ ತೋಟಕ್ಕೆ ಬಂದ ಅಂಬರೀಶ್ ಹೊಲವನ್ನು ನೋಡಿ ಆಘಾತಕ್ಕೆ ಒಳಗಾಗಿದ್ದಾರೆ.

ಕೋಲಾರ: ಕಟಾವಿಗೆ ಬಂದ 700ಕ್ಕೂ ಹೆಚ್ಚು ಕಲ್ಲಂಗಡಿ ಹಣ್ಣುಗಳನ್ನ ನಾಶಪಡಿಸಿದ ದುಷ್ಕರ್ಮಿಗಳು
ಕಲ್ಲಂಗಡಿ ಹಣ್ಣುಗಳನ್ನ ನಾಶಪಡಿಸಿದ್ದಾರೆ
TV9 Web
| Updated By: sandhya thejappa|

Updated on: Feb 17, 2022 | 11:22 AM

Share

ಕೋಲಾರ: ಉರಟಿ ಅಗ್ರಹಾರ ಗ್ರಾಮದ ರೈತರೊಬ್ಬರು ಬೇರೆಯವರ ಭೂಮಿಯನ್ನು ಬೋಗ್ಯಕ್ಕೆ ಪಡೆದು ಕಲ್ಲಂಗಡಿ (Water Melon) ಬೆಳೆದಿದ್ದರು. ಹಣ ಸಂಪಾದನೆ ಮಾಡುವ ಕನಸು ಕಂಡಿದ್ದರು. ಆದರೆ ಈಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ದುಷ್ಕರ್ಮಿಗಳು ರಾತ್ರೋ ರಾತ್ರಿ ಕಲ್ಲಂಗಡಿ ಬೆಳೆಯನ್ನು ನಾಶ ಮಾಡಿ, ವಿಕೃತಿ ಮೆರೆದಿದ್ದಾರೆ. ರಾತ್ರಿ ವೇಳೆ ಕಲ್ಲಂಗಡಿ ಬೆಳೆದಿದ್ದ ಹೊಲಕ್ಕೆ ನುಗಿರುವ ದುಷ್ಕರ್ಮಿಗಳು ದೊಣ್ಣೆ ಹಾಗೂ ಮಚ್ಚನ್ನು ಬಳಸಿ ಐದು ಎಕರೆಯಲ್ಲಿದ್ದ ಬೆಳೆಯನ್ನು ನಾಶ ಮಾಡಿದ್ದಾರೆ.

ಅಂಬರೀಶ್ ಎಂಬ ರೈತ 5 ಎಕರೆ ಜಮೀನನ್ನು ಗುತ್ತಿಗೆಗೆ ಪಡೆದು ಕಲ್ಲಂಗಡಿ ಬೆಳೆದಿದ್ದರು. ಆದರೆ ದುಷ್ಕರ್ಮಿಗಳು ಕಲ್ಲಂಗಡಿ ಹಣ್ಣುಗಳನ್ನು ಮನಬಂದಂತೆ ಕತ್ತರಿಸಿದ್ದಾರೆ. ಬೆಳಿಗ್ಗೆ ಎಂದಿನಂತೆ ತೋಟಕ್ಕೆ ಬಂದ ಅಂಬರೀಶ್ ಹೊಲವನ್ನು ನೋಡಿ ಆಘಾತಕ್ಕೆ ಒಳಗಾಗಿದ್ದಾರೆ. ಫಸಲನ್ನು ಹತ್ತು ಹದಿನೈದು ದಿನಗಳಲ್ಲಿ ಕಟಾವು ಮಾಡಬೇಕಿತ್ತು. ನಿನ್ನೆ (ಫೆ.16) ರಾತ್ರಿ 9 ಗಂಟೆವರೆಗೂ ರೈತ ಹೊಲದಲ್ಲೆ ಇದ್ದರು. ಬೆಳಿಗ್ಗೆ ಬಂದು ನೋಡಿದಾಗ ಸುಮಾರು 700 ಕ್ಕೂ ಹೆಚ್ಚು ಕಲ್ಲಂಗಡಿ ಹಣ್ಣುಗಳನ್ನ ನಾಶ ಮಾಡಿದ್ದಾರೆ.

ರೈತನಿಗೆ ತಮ್ಮ ಗ್ರಾಮದ ಕೆಲವರ ಮೇಲೆ ಅನುಮಾನವಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ರೀತಿ ವೈಯಕ್ತಿಕ ದ್ವೇಷಗಳಿಂದ ಹಠ ಸಾಧಿಸಲು ರೈತರ ಹೊಟ್ಟೆ ಮೇಲೆ ಹೊಡೆಯುವ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಕಸ್ಮಿಕ ಬೆಂಕಿ ಅವಘಡ: ಆಕಸ್ಮಿಕ ಬೆಂಕಿ ತಗುಲಿ ಮನೆ ಹೊತ್ತಿ ಉರಿದಿದೆ. ಈ ಘಟನೆ ಧಾರವಾಡ ನಗರದ ಮೃತ್ಯುಂಜಯ ನಗರದ ಬಣಗಾರ ಓಣಿಯಲ್ಲಿ ನಡೆದಿದೆ. ವಿರೂಪಾಕ್ಷಪ್ಪ ಕಟಗಿ ಎಂಬುವವರಿಗೆ ಸೇರಿದ ಮನೆ ಸುಟ್ಟು ಹೋಗಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಮನೆಗೆ ಆವರಿಸಿತ್ತು. ಅಗ್ನಿಶಾಮಕ ದಳ ಸಿಬ್ಬಂದಿ ಸರಿಯಾದ ಸಮಯಕ್ಕೆ ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಇದನ್ನೂ ಓದಿ

Shanti: ಶಾಂತಿ ಶಾಂತಿ ಶಾಂತಿ ಎಂದು 3 ಸಲ ಹೇಳುವುದೇಕೆ? ಶಾಂತಿಃ ಎಂದು ಒಂದೇ ಸಲ ಹೇಳಿದರೆ ಸಾಲದೆ? ಏನಿದರ ಅರ್ಥ?

‘ಬಿಚ್ಚುಗತ್ತಿ’ ಮೂಲಕ ಗಮನ ಸೆಳೆದಿದ್ದ ರಾಜವರ್ಧನ್ ಹೊಸ ಚಿತ್ರ ಅನೌನ್ಸ್; ಇಲ್ಲಿದೆ ಹೊಸ ಸಮಾಚಾರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ