Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಕಟಾವಿಗೆ ಬಂದ 700ಕ್ಕೂ ಹೆಚ್ಚು ಕಲ್ಲಂಗಡಿ ಹಣ್ಣುಗಳನ್ನ ನಾಶಪಡಿಸಿದ ದುಷ್ಕರ್ಮಿಗಳು

ಅಂಬರೀಶ್ ಎಂಬ ರೈತ 5 ಎಕರೆ ಜಮೀನನ್ನು ಗುತ್ತಿಗೆಗೆ ಪಡೆದು ಕಲ್ಲಂಗಡಿ ಬೆಳೆದಿದ್ದರು. ಆದರೆ ದುಷ್ಕರ್ಮಿಗಳು ಕಲ್ಲಂಗಡಿ ಹಣ್ಣುಗಳನ್ನು ಮನಬಂದಂತೆ ಕತ್ತರಿಸಿದ್ದಾರೆ. ಬೆಳಿಗ್ಗೆ ಎಂದಿನಂತೆ ತೋಟಕ್ಕೆ ಬಂದ ಅಂಬರೀಶ್ ಹೊಲವನ್ನು ನೋಡಿ ಆಘಾತಕ್ಕೆ ಒಳಗಾಗಿದ್ದಾರೆ.

ಕೋಲಾರ: ಕಟಾವಿಗೆ ಬಂದ 700ಕ್ಕೂ ಹೆಚ್ಚು ಕಲ್ಲಂಗಡಿ ಹಣ್ಣುಗಳನ್ನ ನಾಶಪಡಿಸಿದ ದುಷ್ಕರ್ಮಿಗಳು
ಕಲ್ಲಂಗಡಿ ಹಣ್ಣುಗಳನ್ನ ನಾಶಪಡಿಸಿದ್ದಾರೆ
Follow us
TV9 Web
| Updated By: sandhya thejappa

Updated on: Feb 17, 2022 | 11:22 AM

ಕೋಲಾರ: ಉರಟಿ ಅಗ್ರಹಾರ ಗ್ರಾಮದ ರೈತರೊಬ್ಬರು ಬೇರೆಯವರ ಭೂಮಿಯನ್ನು ಬೋಗ್ಯಕ್ಕೆ ಪಡೆದು ಕಲ್ಲಂಗಡಿ (Water Melon) ಬೆಳೆದಿದ್ದರು. ಹಣ ಸಂಪಾದನೆ ಮಾಡುವ ಕನಸು ಕಂಡಿದ್ದರು. ಆದರೆ ಈಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ದುಷ್ಕರ್ಮಿಗಳು ರಾತ್ರೋ ರಾತ್ರಿ ಕಲ್ಲಂಗಡಿ ಬೆಳೆಯನ್ನು ನಾಶ ಮಾಡಿ, ವಿಕೃತಿ ಮೆರೆದಿದ್ದಾರೆ. ರಾತ್ರಿ ವೇಳೆ ಕಲ್ಲಂಗಡಿ ಬೆಳೆದಿದ್ದ ಹೊಲಕ್ಕೆ ನುಗಿರುವ ದುಷ್ಕರ್ಮಿಗಳು ದೊಣ್ಣೆ ಹಾಗೂ ಮಚ್ಚನ್ನು ಬಳಸಿ ಐದು ಎಕರೆಯಲ್ಲಿದ್ದ ಬೆಳೆಯನ್ನು ನಾಶ ಮಾಡಿದ್ದಾರೆ.

ಅಂಬರೀಶ್ ಎಂಬ ರೈತ 5 ಎಕರೆ ಜಮೀನನ್ನು ಗುತ್ತಿಗೆಗೆ ಪಡೆದು ಕಲ್ಲಂಗಡಿ ಬೆಳೆದಿದ್ದರು. ಆದರೆ ದುಷ್ಕರ್ಮಿಗಳು ಕಲ್ಲಂಗಡಿ ಹಣ್ಣುಗಳನ್ನು ಮನಬಂದಂತೆ ಕತ್ತರಿಸಿದ್ದಾರೆ. ಬೆಳಿಗ್ಗೆ ಎಂದಿನಂತೆ ತೋಟಕ್ಕೆ ಬಂದ ಅಂಬರೀಶ್ ಹೊಲವನ್ನು ನೋಡಿ ಆಘಾತಕ್ಕೆ ಒಳಗಾಗಿದ್ದಾರೆ. ಫಸಲನ್ನು ಹತ್ತು ಹದಿನೈದು ದಿನಗಳಲ್ಲಿ ಕಟಾವು ಮಾಡಬೇಕಿತ್ತು. ನಿನ್ನೆ (ಫೆ.16) ರಾತ್ರಿ 9 ಗಂಟೆವರೆಗೂ ರೈತ ಹೊಲದಲ್ಲೆ ಇದ್ದರು. ಬೆಳಿಗ್ಗೆ ಬಂದು ನೋಡಿದಾಗ ಸುಮಾರು 700 ಕ್ಕೂ ಹೆಚ್ಚು ಕಲ್ಲಂಗಡಿ ಹಣ್ಣುಗಳನ್ನ ನಾಶ ಮಾಡಿದ್ದಾರೆ.

ರೈತನಿಗೆ ತಮ್ಮ ಗ್ರಾಮದ ಕೆಲವರ ಮೇಲೆ ಅನುಮಾನವಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ರೀತಿ ವೈಯಕ್ತಿಕ ದ್ವೇಷಗಳಿಂದ ಹಠ ಸಾಧಿಸಲು ರೈತರ ಹೊಟ್ಟೆ ಮೇಲೆ ಹೊಡೆಯುವ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಕಸ್ಮಿಕ ಬೆಂಕಿ ಅವಘಡ: ಆಕಸ್ಮಿಕ ಬೆಂಕಿ ತಗುಲಿ ಮನೆ ಹೊತ್ತಿ ಉರಿದಿದೆ. ಈ ಘಟನೆ ಧಾರವಾಡ ನಗರದ ಮೃತ್ಯುಂಜಯ ನಗರದ ಬಣಗಾರ ಓಣಿಯಲ್ಲಿ ನಡೆದಿದೆ. ವಿರೂಪಾಕ್ಷಪ್ಪ ಕಟಗಿ ಎಂಬುವವರಿಗೆ ಸೇರಿದ ಮನೆ ಸುಟ್ಟು ಹೋಗಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಮನೆಗೆ ಆವರಿಸಿತ್ತು. ಅಗ್ನಿಶಾಮಕ ದಳ ಸಿಬ್ಬಂದಿ ಸರಿಯಾದ ಸಮಯಕ್ಕೆ ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಇದನ್ನೂ ಓದಿ

Shanti: ಶಾಂತಿ ಶಾಂತಿ ಶಾಂತಿ ಎಂದು 3 ಸಲ ಹೇಳುವುದೇಕೆ? ಶಾಂತಿಃ ಎಂದು ಒಂದೇ ಸಲ ಹೇಳಿದರೆ ಸಾಲದೆ? ಏನಿದರ ಅರ್ಥ?

‘ಬಿಚ್ಚುಗತ್ತಿ’ ಮೂಲಕ ಗಮನ ಸೆಳೆದಿದ್ದ ರಾಜವರ್ಧನ್ ಹೊಸ ಚಿತ್ರ ಅನೌನ್ಸ್; ಇಲ್ಲಿದೆ ಹೊಸ ಸಮಾಚಾರ

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ