AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Flag: ಮನ್​ ಕಿ ಬಾತ್​ನಲ್ಲಿ ಕೋಲಾರದ ಅತಿದೊಡ್ಡ ರಾಷ್ಟ್ರಧ್ವಜ ಪ್ರಯತ್ನ ಶ್ಲಾಘಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರಯತ್ನ ಶ್ಲಾಘಿಸಿದ್ದನ್ನು ತಿಳಿದ ಸಂಸದ ಮುನಿಸ್ವಾಮಿ ಹರ್ಷ ವ್ಯಕ್ತಪಡಿಸಿದರು.

National Flag: ಮನ್​ ಕಿ ಬಾತ್​ನಲ್ಲಿ ಕೋಲಾರದ ಅತಿದೊಡ್ಡ ರಾಷ್ಟ್ರಧ್ವಜ ಪ್ರಯತ್ನ ಶ್ಲಾಘಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಮತ್ತು ಕೋಲಾರದಲ್ಲಿ ಪ್ರದರ್ಶಿಸಿದ್ದ ಬೃಹತ್ ರಾಷ್ಟ್ರಧ್ವಜ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 28, 2022 | 3:16 PM

ಕೋಲಾರ: ನಗರದಲ್ಲಿ ಕಳೆದ ಆಗಸ್ಟ್ 15ರಂದು ಅತಿದೊಡ್ಡ ರಾಷ್ಟ್ರಧ್ವಜ ಅನಾವರಣಗೊಳಿಸಿದ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮನ್ ಕಿ ಬಾತ್ (Mann Ki Baat) ಕಾರ್ಯಕ್ರಮದಲ್ಲಿ ಶ್ಲಾಘಿಸಿದರು. 1.30 ಲಕ್ಷ ಚದರಡಿಯ ಬೃಹತ್ ತ್ರಿವರ್ಣ ಧ್ವಜ (National Flag) ತಯಾರಿಸಲಾಗಿತ್ತು. 204 ಅಡಿ ಉದ್ದ, 630 ಅಡಿ ಅಗಲದ ರಾಷ್ಟ್ರಧ್ವಜವನ್ನು ಕೋಲಾರ ಸಂಸದ ಮುನಿಸ್ವಾಮಿ ನೇತೃತ್ವದಲ್ಲಿ ಸಿದ್ಧಪಡಿಸಲಾಗಿತ್ತು. ಬೃಹತ್ ಧ್ವಜವು ಲಿಮ್ಕಾ ದಾಖಲೆಗೂ ಸೇರ್ಪಡೆಗೊಂಡಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರಯತ್ನ ಶ್ಲಾಘಿಸಿದ್ದನ್ನು ತಿಳಿದ ಸಂಸದ ಮುನಿಸ್ವಾಮಿ ಹರ್ಷ ವ್ಯಕ್ತಪಡಿಸಿದರು.

ಆಗಸ್ಟ್ 15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕೋಲಾರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬೃಹತ್ ತ್ರಿವರ್ಣಧ್ವಜ ಅನಾವರಣಗೊಳಿಸಲಾಗಿತ್ತು. ಧ್ವಜಕ್ಕೆ ಸೇನಾ ಹೆಲಿಕಾಪ್ಟರ್​ನಿಂದ ಪುಷ್ಪಾರ್ಚನೆ ಮಾಡಲಾಯಿತು. ಇದನ್ನು ಸಾವಿರಾರು ಜನರು ಕಣ್ತುಂಬಿಕೊಂಡರು. ದೇಶದಲ್ಲೇ ಅತಿ ದೊಡ್ಡದಾದ ಬೃಹತ್ ತ್ರಿವರ್ಣ ಧ್ವಜವು ಲಿಮ್ಕಾ ದಾಖಲೆಗೂ ಸೇರ್ಪಡೆಯಾಯಿತು.

ಕೋಲಾರ ಸಂಸದ ಮುನಿಸ್ವಾಮಿ ನೇತೃತ್ವದಲ್ಲಿ 13,000 ಮೀಟರ್ ಬಟ್ಟೆ ಬಳಸಿ 1.30 ಲಕ್ಷ ಚದರಡಿಯ ಬೃಹತ್ ಧ್ವಜ ನಿರ್ಮಿಸಲಾಯಿತು. ಈ ಧ್ವಜವು 204 ಅಡಿ ಉದ್ದ ಹಾಗೂ 630 ಅಡಿ ಅಗಲ ಇತ್ತು. 3300 ಕೆಜಿ ತೂಕವಿದ್ದ ಬೃಹತ್ ತ್ರಿವರ್ಣಧ್ವಜವನ್ನು ಸ್ವತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು. 7 ಜನರ ತಂಡ ಸತತವಾಗಿ 8 ದಿನಗಳ ಕಾಲ ಹಗಲು ರಾತ್ರಿ ಶ್ರಮಿಸಿದರ ಫಲವಾಗಿ ಈ ಬೃಹತ್ ತ್ರಿವರ್ಣ ಧ್ವಜವನ್ನು ನಿರ್ಮಾಣ ಮಾಡಲು ಸಾಧ್ಯವಾಗಿತ್ತು ಎಂದು ಕೋಲಾರ ಸಂಸದ ಮುನಿಸ್ವಾಮಿ ಸಂತಸ ವ್ಯಕ್ತಪಡಿಸಿದ್ದರು.

ಸೇನಾ ಹೆಲಿಕಾಪ್ಟರ್​ನಿಂದ ಧ್ವಜಕ್ಕೆ ಪುಷ್ಪಾರ್ಚನೆ

ಇಂಥ ಬೃಹತ್ ಧ್ವಜ ನಿರ್ಮಾಣ ಮಾಡಿರುವ ವಿಷಯ ತಿಳಿದ ರಕ್ಷಣಾ ಸಚಿವ ರಾಜನಾಥಸಿಂಗ್ ಬೃಹತ್ ಧ್ವಜಕ್ಕೆ ಪುಷ್ಪಾರ್ಚನೆ ಮಾಡಲು ಸೇನಾ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದ್ದರು. ರಕ್ಷಣಾ ಸಚಿವ ರಾಜನಾಥ್​ಸಿಂಗ್ ಅವರು ಕಳಿಸಿದ್ದ ಸೇನಾ ಹೆಲಿಕಾಪ್ಟರ್​ನಿಂದ ದೇಶದ ಬೃಹತ್ ತ್ರಿವರ್ಣ ಧ್ವಜಕ್ಕೆ ನೂರಾರು ಕೆಜಿ ಹೂವಿನ ಪುಷ್ಪಾರ್ಚನೆ ಮಾಡಲಾಯಿತು. ಈ ಅಭೂತಪೂರ್ವ ಕ್ಷಣ ನೋಡುತ್ತಿದ್ದ ಪ್ರತಿಯೊಬ್ಬ ದೇಶಭಕ್ತರಿಗೂ ಮೈ ರೋಮಾಂಚನಗೊಳ್ಳುವಂತೆ ಮಾಡಿತ್ತು. ಈ ಕ್ಷಣಗಳನ್ನು ಕಣ್ತುಂಬಿಕೊಂಡ ಪ್ರತಿಯೊಬ್ಬರ ಬಾಯಲ್ಲೂ ಭಾರತ್ ಮಾತಾಕಿ ಜೈ ಎನ್ನುವ ಘೋಷಣೆಗಳು ತಂತಾನೆ ಹೊರ ಹೊಮ್ಮುತ್ತಿದ್ದವು.

ಲಿಮ್ಕಾ ಬುಕ್ ಆಫ್ ರೆಕಾರ್ಡ್ ಸೇರಿದ ಬೃಹತ್ ಧ್ವಜದ ದಾಖಲೆ

ಇನ್ನು ಕೋಲಾರದಲ್ಲಿ ಇಂದು ಪ್ರದರ್ಶನ ಮಾಡಲಾದ ಈ ಬೃಹತ್ ಧ್ವಜ ದೇಶದಲ್ಲೇ ಅತಿದೊಡ್ಡದಾದ ಧ್ವಜ ಎಂದು ಹೇಳಲಾಗಿದೆ. ಸುಮಾರು 1.30 ಲಕ್ಷ ಚದರಡಿ ವಿಸ್ತೀರ್ಣದ, ಈ ಬೃಹತ್ ಧ್ವಜ ಲಿಮ್ಕಾ ಬುಕ್ ಆಫ್ ರೆಕಾರ್ಡ್​ಗೆ ಸೇರಿದೆ.

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ