AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಡಳಿತ ಆದೇಶ ಮೀರಿ ಕೋಲಾರಕ್ಕೆ ಆಗಮಿಸುತ್ತಿದ್ದ ಪ್ರಮೋದ್ ಮುತಾಲಿಕ್ ಪೊಲೀಸರ ವಶಕ್ಕೆ!

ಮುತಾಲಿಕ್ ಬಾರದಂತೆ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿದೆ. ಆದರೆ ಪ್ರಮೋದ್ ಮುತಾಲಿಕ್ ಜಿಲ್ಲಾಡಳಿತ ಆದೇಶವನ್ನು ಮೀರಿ ಕೋಲಾರಕ್ಕೆ ಆಗಮಿಸುತ್ತಿದ್ದರು.

ಜಿಲ್ಲಾಡಳಿತ ಆದೇಶ ಮೀರಿ ಕೋಲಾರಕ್ಕೆ ಆಗಮಿಸುತ್ತಿದ್ದ ಪ್ರಮೋದ್ ಮುತಾಲಿಕ್ ಪೊಲೀಸರ ವಶಕ್ಕೆ!
ಪ್ರಮೋದ್ ಮುತಾಲಿಕ್​ನ ಕೋಲಾರ ಗಡಿಯಲ್ಲಿ ತಡೆಹಿಡಿದಿದ್ದಾರೆ
Follow us
TV9 Web
| Updated By: sandhya thejappa

Updated on:Nov 18, 2021 | 12:49 PM

ಕೋಲಾರ: ದತ್ತಮಾಲಾಧಾರಿಗಳ ಮೇಲೆ ಹಲ್ಲೆ ಖಂಡಿಸಿ ಇಂದು (ನ.18) ಕೋಲಾರ ಬಂದ್ ಮಾಡಲಾಗಿದೆ. ಈಗಾಗಲೇ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯುತ್ತಿದ್ದು, ಬೃಹತ್ ರ್ಯಾಲಿ ಆರಂಭವಾಗಿದೆ. ಈ ಬಂದ್​ಗೆ ಬೆಂಬಲಿಸಿ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ (Pramod Muthalik) ಕೋಲಾರಕ್ಕೆ ಆಗಮಿಸುತ್ತಿದ್ದರು. ಆದರೆ ಪೊಲೀಸರು ಜಿಲ್ಲಾ ಗಡಿಯಲ್ಲೇ ಪ್ರಮೋದ್ ಮುತಾಲಿಕ್​ರನ್ನು ತಡೆದು ವಶಕ್ಕೆ ಪಡೆದಿದ್ದಾರೆ.

ಮುತಾಲಿಕ್ ಬಾರದಂತೆ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿದೆ. ಆದರೆ ಪ್ರಮೋದ್ ಮುತಾಲಿಕ್ ಜಿಲ್ಲಾಡಳಿತ ಆದೇಶವನ್ನು ಮೀರಿ ಕೋಲಾರಕ್ಕೆ ಆಗಮಿಸುತ್ತಿದ್ದರು. ಕೋಲಾರಕ್ಕೆ ಆಗಮಿಸುತ್ತಿರುವ ಮಾಹಿತಿ ತಿಳಿಸುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿಕೊಂಡಿದ್ದರು.

ಇದೇ ವೇಳೆ ಹೇಳಿಕೆ ನೀಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ನ.13 ರಂದು ನಡೆದ ಕೃತ್ಯ ಅತ್ಯಂತ‌ ಘೋರ ಮತ್ತು ಹೇಯ ಘಟನೆ. ಪೊಲೀಸರು ಸ್ವಲ್ಪ ತಡಮಾಡಿದರೂ ಅಂದು ದತ್ತಮಾಲಾಧಾರಿಗಳು ಭಸ್ಮವಾಗುತ್ತಿದ್ದರು. ಅದಕ್ಕೆ ಪೊಲೀಸರಿಗೆ ಧನ್ಯವಾದ ಹೇಳುವೆ. ಆದರೆ ಬಿಜೆಪಿ ಸರ್ಕಾರ ಇಂದು ನಡೆದುಕೊಳ್ಳುತ್ತಿರುವ ಕ್ರಮ ಸರಿಯಿಲ್ಲ. ಹಿಂದೂ ಸಮಾಜದವರು ಮೇಲೆ ದೌರ್ಜನ್ಯ ಮಾಡಿದವರ ಮೇಲೆ ಪ್ರತಿಭಟನೆ ಮಾಡಲು ಸಹ ಸರ್ಕಾರ ಅವಕಾಶ ಮಾಡಿಕೊಡದ ಬಗ್ಗೆ ನೋವು, ಸಿಟ್ಟು ಆಗುತ್ತಿದೆ ಎಂದು ಹೇಳಿದರು.

ಹಿಂದೂಗಳಿಗೆ ಧೈರ್ಯ ತುಂಬಬೇಕಾಗಿದೆ. ಅದೇ ರೀತಿ ಮುಸ್ಲಿಂ ಕೀಡಿಗೇಡಿಗಳಿಗೆ ಎಚ್ಚರಿಕೆ ಕೊಡಬೇಕಾಗಿದೆ. ಸಂವಿಧಾನ ಮತ್ತು ಕಾನೂನು ಬದ್ಧವಾಗಿ ಹೋರಾಟ ಮಾಡಲಾಗುತ್ತಿದೆ. ಇಡೀ ಹಿಂದೂ ಸಮಾಜ ಈ ಘಟನೆ ಖಂಡಿಸಬೇಕಿದೆ ಎಂದು ಕೋಲಾರ ಗಡಿ ರಾಮಸಂದ್ರದಲ್ಲಿ ಮುತಾಲಿಕ್​ ಹೇಳಿದರು.

ಇದನ್ನೂ ಓದಿ

ಮಠದ ಭೂಮಿಯನ್ನು ಶಿಕ್ಷಣ ಸಂಸ್ಥೆಗಳಿಗೆ ಭೂದಾನ ಮಾಡಿದ್ದ ರಾಚೋಟೇಶ್ವರ ಸ್ವಾಮಿ ಲಿಂಗೈಕ್ಯ, ಸಿಎಂ ಬೊಮ್ಮಾಯಿ ಸಂತಾಪ

ಅಪ್ರಾಪ್ತೆ ಬಟ್ಟೆ ಧರಿಸಿದ್ದಾಗ ಆಕೆಯ ಖಾಸಗಿ ಅಂಗ ಸ್ಪರ್ಶಿಸಿದರೂ ಪೋಕ್ಸೋ ಕಾಯ್ದೆಯಡಿಯೇ ಕೇಸ್​ ದಾಖಲಾಗಬೇಕು: ಸುಪ್ರೀಂಕೋರ್ಟ್​

Published On - 12:41 pm, Thu, 18 November 21

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ