AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಡಳಿತ ಆದೇಶ ಮೀರಿ ಕೋಲಾರಕ್ಕೆ ಆಗಮಿಸುತ್ತಿದ್ದ ಪ್ರಮೋದ್ ಮುತಾಲಿಕ್ ಪೊಲೀಸರ ವಶಕ್ಕೆ!

ಮುತಾಲಿಕ್ ಬಾರದಂತೆ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿದೆ. ಆದರೆ ಪ್ರಮೋದ್ ಮುತಾಲಿಕ್ ಜಿಲ್ಲಾಡಳಿತ ಆದೇಶವನ್ನು ಮೀರಿ ಕೋಲಾರಕ್ಕೆ ಆಗಮಿಸುತ್ತಿದ್ದರು.

ಜಿಲ್ಲಾಡಳಿತ ಆದೇಶ ಮೀರಿ ಕೋಲಾರಕ್ಕೆ ಆಗಮಿಸುತ್ತಿದ್ದ ಪ್ರಮೋದ್ ಮುತಾಲಿಕ್ ಪೊಲೀಸರ ವಶಕ್ಕೆ!
ಪ್ರಮೋದ್ ಮುತಾಲಿಕ್​ನ ಕೋಲಾರ ಗಡಿಯಲ್ಲಿ ತಡೆಹಿಡಿದಿದ್ದಾರೆ
TV9 Web
| Edited By: |

Updated on:Nov 18, 2021 | 12:49 PM

Share

ಕೋಲಾರ: ದತ್ತಮಾಲಾಧಾರಿಗಳ ಮೇಲೆ ಹಲ್ಲೆ ಖಂಡಿಸಿ ಇಂದು (ನ.18) ಕೋಲಾರ ಬಂದ್ ಮಾಡಲಾಗಿದೆ. ಈಗಾಗಲೇ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯುತ್ತಿದ್ದು, ಬೃಹತ್ ರ್ಯಾಲಿ ಆರಂಭವಾಗಿದೆ. ಈ ಬಂದ್​ಗೆ ಬೆಂಬಲಿಸಿ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ (Pramod Muthalik) ಕೋಲಾರಕ್ಕೆ ಆಗಮಿಸುತ್ತಿದ್ದರು. ಆದರೆ ಪೊಲೀಸರು ಜಿಲ್ಲಾ ಗಡಿಯಲ್ಲೇ ಪ್ರಮೋದ್ ಮುತಾಲಿಕ್​ರನ್ನು ತಡೆದು ವಶಕ್ಕೆ ಪಡೆದಿದ್ದಾರೆ.

ಮುತಾಲಿಕ್ ಬಾರದಂತೆ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿದೆ. ಆದರೆ ಪ್ರಮೋದ್ ಮುತಾಲಿಕ್ ಜಿಲ್ಲಾಡಳಿತ ಆದೇಶವನ್ನು ಮೀರಿ ಕೋಲಾರಕ್ಕೆ ಆಗಮಿಸುತ್ತಿದ್ದರು. ಕೋಲಾರಕ್ಕೆ ಆಗಮಿಸುತ್ತಿರುವ ಮಾಹಿತಿ ತಿಳಿಸುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿಕೊಂಡಿದ್ದರು.

ಇದೇ ವೇಳೆ ಹೇಳಿಕೆ ನೀಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ನ.13 ರಂದು ನಡೆದ ಕೃತ್ಯ ಅತ್ಯಂತ‌ ಘೋರ ಮತ್ತು ಹೇಯ ಘಟನೆ. ಪೊಲೀಸರು ಸ್ವಲ್ಪ ತಡಮಾಡಿದರೂ ಅಂದು ದತ್ತಮಾಲಾಧಾರಿಗಳು ಭಸ್ಮವಾಗುತ್ತಿದ್ದರು. ಅದಕ್ಕೆ ಪೊಲೀಸರಿಗೆ ಧನ್ಯವಾದ ಹೇಳುವೆ. ಆದರೆ ಬಿಜೆಪಿ ಸರ್ಕಾರ ಇಂದು ನಡೆದುಕೊಳ್ಳುತ್ತಿರುವ ಕ್ರಮ ಸರಿಯಿಲ್ಲ. ಹಿಂದೂ ಸಮಾಜದವರು ಮೇಲೆ ದೌರ್ಜನ್ಯ ಮಾಡಿದವರ ಮೇಲೆ ಪ್ರತಿಭಟನೆ ಮಾಡಲು ಸಹ ಸರ್ಕಾರ ಅವಕಾಶ ಮಾಡಿಕೊಡದ ಬಗ್ಗೆ ನೋವು, ಸಿಟ್ಟು ಆಗುತ್ತಿದೆ ಎಂದು ಹೇಳಿದರು.

ಹಿಂದೂಗಳಿಗೆ ಧೈರ್ಯ ತುಂಬಬೇಕಾಗಿದೆ. ಅದೇ ರೀತಿ ಮುಸ್ಲಿಂ ಕೀಡಿಗೇಡಿಗಳಿಗೆ ಎಚ್ಚರಿಕೆ ಕೊಡಬೇಕಾಗಿದೆ. ಸಂವಿಧಾನ ಮತ್ತು ಕಾನೂನು ಬದ್ಧವಾಗಿ ಹೋರಾಟ ಮಾಡಲಾಗುತ್ತಿದೆ. ಇಡೀ ಹಿಂದೂ ಸಮಾಜ ಈ ಘಟನೆ ಖಂಡಿಸಬೇಕಿದೆ ಎಂದು ಕೋಲಾರ ಗಡಿ ರಾಮಸಂದ್ರದಲ್ಲಿ ಮುತಾಲಿಕ್​ ಹೇಳಿದರು.

ಇದನ್ನೂ ಓದಿ

ಮಠದ ಭೂಮಿಯನ್ನು ಶಿಕ್ಷಣ ಸಂಸ್ಥೆಗಳಿಗೆ ಭೂದಾನ ಮಾಡಿದ್ದ ರಾಚೋಟೇಶ್ವರ ಸ್ವಾಮಿ ಲಿಂಗೈಕ್ಯ, ಸಿಎಂ ಬೊಮ್ಮಾಯಿ ಸಂತಾಪ

ಅಪ್ರಾಪ್ತೆ ಬಟ್ಟೆ ಧರಿಸಿದ್ದಾಗ ಆಕೆಯ ಖಾಸಗಿ ಅಂಗ ಸ್ಪರ್ಶಿಸಿದರೂ ಪೋಕ್ಸೋ ಕಾಯ್ದೆಯಡಿಯೇ ಕೇಸ್​ ದಾಖಲಾಗಬೇಕು: ಸುಪ್ರೀಂಕೋರ್ಟ್​

Published On - 12:41 pm, Thu, 18 November 21

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​