AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದಂದು ದೇಗುಲದಲ್ಲಿ ಪ್ರಸಾದ ಸೇವಿಸಿ 12 ಮಕ್ಕಳು, 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ; 10 ಮಂದಿ ಡಿಸ್ಚಾರ್ಜ್, ಪ್ರಸಾದವೇ ವಿಶವಾಯ್ತಾ?

ಸಾದ ತಿಂದು ಜನರು ಮನೆಗೆ ಹೋಗಿದ್ದರು. ಆದರೆ ಸಂಜೆ ವೇಳೆಗೆ ಪ್ರಸಾದ ತಿಂದಿದ್ದ ಕೆಲವು ಭಕ್ತರಿಗೆ ವಾಂತಿ, ಬೇದಿ ಕಾಣಿಸಿಕೊಂಡಿತ್ತು. ಒಬ್ಬರಾದ ಮೇಲೆ ಒಬ್ಬರಿಗೆ ಇದೇ ರೀತಿ ಸಮಸ್ಯೆ ಕಾಣಿಸಿಕೊಂಡಿದೆ ತಕ್ಷಣ ಅಸ್ವಸ್ಥರನ್ನು ಪಕ್ಕದ‌ ಯಲ್ದೂರು ಸೇರಿದಂತೆ ಶ್ರೀನಿವಾಸಪುರ ತಾಲೂಕು ಸರ್ಕಾರಿ ಆಸ್ಪತ್ರೆ ಹಾಗೂ ಕೆಲವು ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಹೊಸ ವರ್ಷದಂದು ದೇಗುಲದಲ್ಲಿ ಪ್ರಸಾದ ಸೇವಿಸಿ 12 ಮಕ್ಕಳು, 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ; 10 ಮಂದಿ ಡಿಸ್ಚಾರ್ಜ್, ಪ್ರಸಾದವೇ ವಿಶವಾಯ್ತಾ?
ಹೊಸ ವರ್ಷದಂದು ದೇಗುಲದಲ್ಲಿ ಪ್ರಸಾದ ಸೇವಿಸಿ 12 ಮಕ್ಕಳು, 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ; 10 ಮಂದಿ ಡಿಸ್ಚಾರ್ಜ್, ಪ್ರಸಾದವೇ ವಿಶವಾಯ್ತಾ?
TV9 Web
| Edited By: |

Updated on: Jan 02, 2022 | 11:26 AM

Share

ಕೋಲಾರ: ಹೊಸ ವರ್ಷದ ಹಿನ್ನಲೆಯಲ್ಲಿ ಅದೊಂದು ಗ್ರಾಮದ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಬಂದಿದ್ದ ನೂರಾರು ಭಕ್ತರಿಗೆ ಪೂಜೆ‌ ನಂತರ ಪ್ರಸಾದ ಕೂಡಾ ನೀಡಲಾಗಿತ್ತು. ಆದರೆ ಸಂಜೆ ವೇಳೆಗೆ ಆ ಪ್ರಸಾದ ಭಕ್ತರಿಗೆ ಆತಂಕ ಸೃಷ್ಟಿಮಾಡಿತ್ತು.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಬೈರಗಾನಹಳ್ಳಿ ಗ್ರಾಮದ ಗಂಗಮ್ಮ ದೇವಾಲಯದಲ್ಲಿ ಹೊಸ ವರ್ಷದ ಪ್ರಯುಕ್ತ ವಿಶೇಷ ಪೂಜೆ ಹೋಮ ಏರ್ಪಡಿಸಲಾಗಿತ್ತು. ಪೂಜೆಗೆ ಗ್ರಾಮಸ್ಥರು ಸೇರಿದಂತೆ ಅಕ್ಕ ಪಕ್ಕದ‌ ಗ್ರಾಮದ ನೂರಾರು ಜನರು ಬಂದಿದ್ದರು. ಪೂಜೆ ನಂತರ ಬಂದಿದ್ದ ಜನಕ್ಕೆ ಕೇಸರಿಬಾತ್ ಹಾಗೂ ಚಿತ್ರಾನ್ನವನ್ನು ಪ್ರಸಾದವಾಗಿ ನೀಡಲಾಗಿತ್ತು. ಪ್ರಸಾದ ತಿಂದು ಜನರು ಮನೆಗೆ ಹೋಗಿದ್ದರು. ಆದರೆ ಸಂಜೆ ವೇಳೆಗೆ ಪ್ರಸಾದ ತಿಂದಿದ್ದ ಕೆಲವು ಭಕ್ತರಿಗೆ ವಾಂತಿ, ಬೇದಿ ಕಾಣಿಸಿಕೊಂಡಿತ್ತು. ಒಬ್ಬರಾದ ಮೇಲೆ ಒಬ್ಬರಿಗೆ ಇದೇ ರೀತಿ ಸಮಸ್ಯೆ ಕಾಣಿಸಿಕೊಂಡಿದೆ ತಕ್ಷಣ ಅಸ್ವಸ್ಥರನ್ನು ಪಕ್ಕದ‌ ಯಲ್ದೂರು ಸೇರಿದಂತೆ ಶ್ರೀನಿವಾಸಪುರ ತಾಲೂಕು ಸರ್ಕಾರಿ ಆಸ್ಪತ್ರೆ ಹಾಗೂ ಕೆಲವು ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ದೇಗುಲದಲ್ಲಿ ಪ್ರಸಾದ ಸೇವಿಸಿ 12 ಮಕ್ಕಳು, 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಸಂಜೆ ವೇಳೆಗೆ ಬೀರಗಾನಹಳ್ಳಿ ಗ್ರಾಮದ ಗಂಗಮ್ಮ ದೇವಾಲಯಕ್ಕೆ ಹೋಗಿದ್ದ ನೂರಾರು ಭಕ್ತರ ಪೈಕಿ ಒಬ್ಬರಾದ ಮೇಲೆ‌ ಒಬ್ಬರಂತೆ ವಾಂತಿ ಬೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಯತ್ತ ಬರಲು ಶುರುಮಾಡಿದರು. ಬಂದವರಿಗೆ ಶ್ರೀನಿವಾಸಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಇನ್ನು ಸುಮಾರು 12 ಜನ ಮಕ್ಕಳು ಸೇರಿದಂತೆ ಸುಮಾರು 50 ಕ್ಕೂ ಹೆಚ್ಚು ಜನ ವಿವಿಧ ಆಸ್ಪತ್ರೆಗಳಿಗೆ ಬಂದು ದಾಖಲಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿಗಳು ಹಾಗೂ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದರು. ಅಲ್ಲದೆ ಜನರು ಗಾಬರಿಯಾಗದಂತೆ ಧೈರ್ಯಹೇಳಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ರಾತ್ರಿ ವೇಳೆಗೆ ಅಸ್ವಸ್ಥರಲ್ಲಿ ಚೇತರಿಕೆ ಕಂಡ ನಂತರ ಸುಮಾರು ಹತ್ತು ಜನರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ ಎಂದು ತಾಲೂಕು ಆಸ್ಪತ್ರೆ ವೈದ್ಯ ಶ್ರೀನಿವಾಸ್ ತಿಳಿಸಿದ್ದಾರೆ.

ಇನ್ನು ಘಟನೆ ಸಂಬಂಧ ಶ್ರೀನಿವಾಸಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ದೇವಾಲಯದ ಆಡಳಿತ ಮಂಡಳಿ‌ಯವರ ವಿರುದ್ಧ ಪ್ರಕರಣ ದಾಖಲು‌ ಮಾಡಿ ತನಿಖೆ‌ ಕೈಗೊಂಡಿದ್ದಾರೆ. ಒಟ್ಟಾರೆ ಹೊಸ ವರ್ಷದ ದಿನ ಒಳ್ಳೇದು ಮಾಡಪ್ಪಾ ದೇವರೇ ಎಂದು ದೇವಾಲಯಕ್ಕೆ‌ ಹೋದವರಿಗೆ ವರ್ಷದ ಮೊದಲ‌ ದಿನವೇ ಜೀವ ಹೋಗಿ ಬಂದಂತಾಗಿರೋದು ಮಾತ್ರ ಸುಳ್ಳಲ್ಲ.

ವರದಿ: ರಾಜೇಂದ್ರಸಿಂಹ, ಟಿವಿ9 ಕೋಲಾರ

ಇದನ್ನೂ ಓದಿ: ಕೋಲಾರ: ದೇಗುಲದಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ; ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?