AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಸಚಿವ ಚೆಲುವರಾಯಸ್ವಾಮಿ ವರ್ತನೆಗೆ ಸಾರ್ವಜನಿಕರು, ವಾಹನ ಸವಾರರು ಆಕ್ರೋಶ; ಯಾಕೆ ಗೊತ್ತಾ?

ಜಿಲ್ಲಾ ಪಂಚಾಯಿತಿ ಸಭೆ ಮುಗಿಸಿ ಐಬಿಯಲ್ಲಿ ಊಟಕ್ಕೆ ತೆರಳುವ ವೇಳೆ ಸಚಿವ ಚೆಲುವರಾಯಸ್ವಾಮಿ ಅವರಿಗೆ ಕೇವಲ ಎರಡು ಕಿ.ಮೀ ಸಂಚಾರಕ್ಕೋಸ್ಕರ  ಪ್ರತಿ ರಸ್ತೆಯನ್ನು ಬಂದ್ ಮಾಡಿ, ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಾರೆ. ಊಟ ಮಾಡಲು ಹೋಗುವುದಕ್ಕೂ ಝೀರೋ ಟ್ರಾಫಿಕ್ ಪಡೆದ ಸಚಿವರ ವಿರುದ್ದ ಆಕ್ರೋಶ ಕೇಳಿಬಂದಿದೆ.

ಕೃಷಿ ಸಚಿವ ಚೆಲುವರಾಯಸ್ವಾಮಿ ವರ್ತನೆಗೆ ಸಾರ್ವಜನಿಕರು, ವಾಹನ ಸವಾರರು ಆಕ್ರೋಶ; ಯಾಕೆ ಗೊತ್ತಾ?
ಎನ್​ ಚೆಲುವರಾಯಸ್ವಾಮಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Sep 30, 2023 | 4:09 PM

Share

ಕೋಲಾರ, ಸೆ.30: ಕೃಷಿ ಸಚಿವ ಚೆಲುವರಾಯಸ್ವಾಮಿ(N. Chaluvaraya Swamy) ವರ್ತನೆಯಿಂದ ಕೋಲಾರದಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರು ಕಿರಿಕಿರಿ ಅನುಭವಿಸಿದ್ದು, ಸಚಿವರ ವರ್ತನೆಗೆ  ಆಕ್ರೋಶ ವ್ಯಕ್ತವಾಗಿದೆ. ಹೌದು, ಜಿಲ್ಲಾ ಪಂಚಾಯಿತಿ ಕಚೇರಿಯಿಂದ ಐಬಿ ವರೆಗೂ ನಗರದಲ್ಲಿ 2 ಕಿಮೀ ದೂರದಷ್ಟು ಜೀರೋ ಟ್ರಾಫಿಕ್(Zero Traffic) ಮೂಲಕ ಸಚಿವರು ಸಂಚಾರ ಮಾಡಿದ್ದಾರೆ. ಇನ್ನು ಸಚಿವರ ಕಾರಿನ ಜೊತೆ ಅಧಿಕಾರಿಗಳ ಕಾರು ಹಾಗೂ ಕಾಂಗ್ರೆಸ್ ಬೆಂಬಲಿಗರ ಕಾರುಗಳಿಗೂ ಜಿರೋ ಟ್ರಾಫಿಕ್ ನೀಡಿದ್ದು, ಕಾಲೇಜು ವಿದ್ಯಾರ್ಥಿಗಳು, ಶಾಲಾ ಮಕ್ಕಳು ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿತ್ತು.

ಪ್ರತಿ ರಸ್ತೆಯನ್ನು ಬಂದ್ ಮಾಡಿ ಪೊಲೀಸರಿಂದ ಸಚಿವರಿಗೆ ಜೀರೋ ಟ್ರಾಫಿಕ್

ಇನ್ನು ಜಿಲ್ಲಾ ಪಂಚಾಯಿತಿ ಸಭೆ ಮುಗಿಸಿ ಐಬಿ ಯಲ್ಲಿ ಊಟಕ್ಕೆ ತೆರಳುವ ವೇಳೆ ಕೇವಲ ಎರಡು ಕಿ.ಮೀ ಸಂಚಾರಕ್ಕೋಸ್ಕರ  ಪ್ರತಿ ರಸ್ತೆಯನ್ನು ಬಂದ್ ಮಾಡಿ, ಪೊಲೀಸರು ಸಚಿವರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಾರೆ. ಒಂದೇ ಒಂದು ಖಾಸಗಿ ವಾಹನ ಸಂಚಾರ ಮಾಡದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಊಟ ಮಾಡಲು ಹೋಗುವುದಕ್ಕೂ ಝೀರೋ ಟ್ರಾಫಿಕ್ ಸಚಿವ ಚೆಲುವರಾಯಸ್ವಾಮಿ ಪಡೆದಿದ್ದಾರೆ. ಇದರಿಂದ ಸುಮಾರು 15 ನಿಮಿಷಗಳ ಕಾಲ ವಾಹನ ಸವಾರರು ಹಾಗೂ ವಿದ್ಯಾರ್ಥಿಗಳು ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದ್ದು, ಸಚಿವರ ವರ್ತನೆಗೆ ಸಾರ್ವಜನಿಕರು ಕಿಡಿಕಾರಿದ್ದಾರೆ.

ಇದನ್ನೂ ಓದಿ:Mandya: ಕಾರ್ಯಕ್ರಮವೊಂದಕ್ಕೆ ಸುಮಲತಾ ಅಬರೀಷ್ ಮತ್ತು ಚೆಲುವರಾಯಸ್ವಾಮಿ ಇಬ್ಬರೂ ಆಹ್ವಾನಿತರು ಆದರೆ ವೇದಿಕೆ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿಲ್ಲ!

ಇನ್ನು ಊಟದ ಬಳಿಕ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಕೋಲಾರ ತಾಲ್ಲೂಕಿನ ಮೇಡಿಹಾಳ ಬಳಿ ಇರುವ ಸರ್ವೋದಯ ಮತ್ತು ಸರ್ವಮಂಗಳ ಪುಡ್ಸ್ ಇಂಡಸ್ಟ್ರೀಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಸ್ಕರಣ ಘಟಕ ವೀಕ್ಷಣೆ ಮಾಡಿದರು. ಜೊತೆಗೆ ಟೊಮ್ಯಾಟೊ ಹಾಗೂ ಮಾವು ಸಂಸ್ಕರಣಾ ಘಟಕದಲ್ಲಿ ತಯಾರಾಗುವ ಉತ್ಪನ್ನಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಕೃಷಿ ಸಚಿವರಿಗೆ ಎಂಎಲ್​ಸಿ ಅನೀಲ್ ಕುಮಾರ್, ಶಾಸಕರಾದ ಕೊತ್ತೂರು ಮಂಜುನಾಥ್, ಕೆ.ವೈ ನಂಜೇಗೌಡ, ಕಾಂಗ್ರೆಸ್​ ಹಿರಿಯ ಮುಖಂಡ ವಿ.ಆರ್ ಸುದರ್ಶನ್ ಸಾಥ್ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Sat, 30 September 23

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!