AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಾನ್ ಓದುವವರು ಭಯೋತ್ಪಾದಕರು ಎಂದ ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ಕೇಸ್ ದಾಖಲು

ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ, ಕುರಾನ್ ಜನರನ್ನು ಕೊಲ್ಲಲು ಉತ್ತೇಜಿಸುತ್ತದೆ. ಕುರಾನ್ ಒಂದು ಕ್ರಿಮಿನಲ್ ಬುಕ್. ಆ ಕುರಾನ್ ಅನ್ನು ಓದುವವರು ಭಯೋತ್ಪಾದಕರು ಎಂದು ಭಾಷಣ ಮಾಡಿದ್ದರು.

ಕುರಾನ್ ಓದುವವರು ಭಯೋತ್ಪಾದಕರು ಎಂದ ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ಕೇಸ್ ದಾಖಲು
ಕೇಶವ ಮೂರ್ತಿ
TV9 Web
| Edited By: |

Updated on:Jul 08, 2022 | 8:39 AM

Share

ಕೋಲಾರ: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಹಾಗೂ ಕುರಾನ್ (Quran) ಒಂದು ಕ್ರಿಮಿನಲ್ ಬುಕ್ ಎಂದು ಹೀಗಳೆದಿದ್ದಕ್ಕೆ ಕೋಲಾರದಲ್ಲಿ ಹಿಂದೂ ಜಾಗರಣ ವೇದಿಕೆಯ (Hindu Jagarana Vedike) ರಾಜ್ಯ ಸಂಚಾಲಕ ಕೇಶವ ಮೂರ್ತಿ ಮುಂತಾದವರ ವಿರುದ್ಧ ಎಫ್ಐಆರ್​ ದಾಖಲಿಸಲಾಗಿದೆ. ಕೋಲಾರದ ಅಂಜುಮನ್-ಎ-ಇಸ್ಲಾಮಿಯಾ ಸಂಘಟನೆಯ ಅಧ್ಯಕ್ಷ ಜಮೀರ್ ಆಮದ್ ಎಂಬುವವರು ಹಿಂದೂ ಜಾಗರಣ ವೇದಿಕೆಯ ನಾಯಕನ ವಿರುದ್ಧ ದೂರು ನೀಡಿದ್ದರು.

ಪ್ರವಾದಿ ವಿರುದ್ಧ ಹೇಳಿಕೆ ನೀಡಿದ್ದ ನೂಪುರ್ ಶರ್ಮಾಗೆ ಬೆಂಬಲಿಸಿ, ಪೋಸ್ಟ್​ ಹಾಕಿಕೊಂಡಿದ್ದ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಯನ್ನು ವಿರೋಧಿಸಿ ಜುಲೈ 1ರಂದು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ, ಕುರಾನ್ ಜನರನ್ನು ಕೊಲ್ಲಲು ಉತ್ತೇಜಿಸುತ್ತದೆ. ಕುರಾನ್ ಒಂದು ಕ್ರಿಮಿನಲ್ ಬುಕ್. ಆ ಕುರಾನ್ ಅನ್ನು ಓದುವವರು ಅದನ್ನು ಅನುಸರಿಸುತ್ತಾರೆ ಎಂದು ಪ್ರತ್ಯೇಕವಾಗೇನೂ ಹೇಳಬೇಕಾಗಿಲ್ಲ. ಅಂತಹ ಕುರಾನ್ ಓದುವವರು ಭಯೋತ್ಪಾದಕರು ಎಂದು ಭಾಷಣ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಕೇಶವ ಮೂರ್ತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ(ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 ಬಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 295ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್​ ವರದಿ ಮಾಡಿದೆ.

ಇದನ್ನೂ ಓದಿ
Image
ಬ್ರಿಟನ್ನಿನ ಪ್ರಸಕ್ತ ರಾಜಕೀಯ ವಿಪ್ಲವದ ಹರಿಕಾರ ರಿಷಿ ಸುನಾಕ್ ಆ ದೇಶದ ಮುಂದಿನ ಪ್ರಧಾನ ಮಂತ್ರಿಯೇ?
Image
ಬಕ್ರೀದ್ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ: ಕಟ್ಟುನಿಟ್ಟಿನ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
Image
Viral News: ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ ಮಾಡಿ ಮಾದರಿಯಾದ ಮುಸ್ಲಿಂ ಕುಟುಂಬ

ಈ ಹಿಂದೆ ಬಿಜೆಪಿ ನಾಯಕಿ ನೂಪುರ್ ಶರ್ಮಾ ಟಿವಿ ಚರ್ಚೆಯೊಂದರಲ್ಲಿ ಮುಸ್ಲಿಂ ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದು ವಿಶ್ವಾದ್ಯಂತ ಚರ್ಚೆಯಾಗಿ, ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ, ಬಿಜೆಪಿಯಿಂದ ನೂಪುರ್ ಶರ್ಮಾ ಅವರನ್ನು ಅಮಾನತುಗೊಳಿಸಲಾಗಿತ್ತು. ಆಕೆಗೆ ಬೆಂಬಲ ನೀಡಿ ಪೋಸ್ಟ್​ ಮಾಡಿದ್ದ ಕನ್ನಯ್ಯ ಲಾಲ್ ಎಂಬ ಟೈಲರ್​ನ ಅಂಗಡಿಗೆ ಬಟ್ಟೆ ಹೊಲಿಯಲು ಕೊಡುವ ನೆಪದಲ್ಲಿ ಬಂದಿದ್ದ ಇಬ್ಬರು ಆತನ ತಲೆ ಕತ್ತರಿಸಿ ಕೊಲೆ ಮಾಡಿದ್ದರು. ಅದನ್ನು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲೂ ಹಾಕಿದ್ದರು. ಇದಾದ ಬಳಿಕ ಆ ಘಟನೆ ಕೋಮು ಗಲಭೆಗೂ ಕಾರಣವಾಗಿತ್ತು.

Published On - 8:36 am, Fri, 8 July 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್