AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಾನ್ ಓದುವವರು ಭಯೋತ್ಪಾದಕರು ಎಂದ ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ಕೇಸ್ ದಾಖಲು

ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ, ಕುರಾನ್ ಜನರನ್ನು ಕೊಲ್ಲಲು ಉತ್ತೇಜಿಸುತ್ತದೆ. ಕುರಾನ್ ಒಂದು ಕ್ರಿಮಿನಲ್ ಬುಕ್. ಆ ಕುರಾನ್ ಅನ್ನು ಓದುವವರು ಭಯೋತ್ಪಾದಕರು ಎಂದು ಭಾಷಣ ಮಾಡಿದ್ದರು.

ಕುರಾನ್ ಓದುವವರು ಭಯೋತ್ಪಾದಕರು ಎಂದ ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ಕೇಸ್ ದಾಖಲು
ಕೇಶವ ಮೂರ್ತಿ
TV9 Web
| Edited By: |

Updated on:Jul 08, 2022 | 8:39 AM

Share

ಕೋಲಾರ: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಹಾಗೂ ಕುರಾನ್ (Quran) ಒಂದು ಕ್ರಿಮಿನಲ್ ಬುಕ್ ಎಂದು ಹೀಗಳೆದಿದ್ದಕ್ಕೆ ಕೋಲಾರದಲ್ಲಿ ಹಿಂದೂ ಜಾಗರಣ ವೇದಿಕೆಯ (Hindu Jagarana Vedike) ರಾಜ್ಯ ಸಂಚಾಲಕ ಕೇಶವ ಮೂರ್ತಿ ಮುಂತಾದವರ ವಿರುದ್ಧ ಎಫ್ಐಆರ್​ ದಾಖಲಿಸಲಾಗಿದೆ. ಕೋಲಾರದ ಅಂಜುಮನ್-ಎ-ಇಸ್ಲಾಮಿಯಾ ಸಂಘಟನೆಯ ಅಧ್ಯಕ್ಷ ಜಮೀರ್ ಆಮದ್ ಎಂಬುವವರು ಹಿಂದೂ ಜಾಗರಣ ವೇದಿಕೆಯ ನಾಯಕನ ವಿರುದ್ಧ ದೂರು ನೀಡಿದ್ದರು.

ಪ್ರವಾದಿ ವಿರುದ್ಧ ಹೇಳಿಕೆ ನೀಡಿದ್ದ ನೂಪುರ್ ಶರ್ಮಾಗೆ ಬೆಂಬಲಿಸಿ, ಪೋಸ್ಟ್​ ಹಾಕಿಕೊಂಡಿದ್ದ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಯನ್ನು ವಿರೋಧಿಸಿ ಜುಲೈ 1ರಂದು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ, ಕುರಾನ್ ಜನರನ್ನು ಕೊಲ್ಲಲು ಉತ್ತೇಜಿಸುತ್ತದೆ. ಕುರಾನ್ ಒಂದು ಕ್ರಿಮಿನಲ್ ಬುಕ್. ಆ ಕುರಾನ್ ಅನ್ನು ಓದುವವರು ಅದನ್ನು ಅನುಸರಿಸುತ್ತಾರೆ ಎಂದು ಪ್ರತ್ಯೇಕವಾಗೇನೂ ಹೇಳಬೇಕಾಗಿಲ್ಲ. ಅಂತಹ ಕುರಾನ್ ಓದುವವರು ಭಯೋತ್ಪಾದಕರು ಎಂದು ಭಾಷಣ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಕೇಶವ ಮೂರ್ತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ(ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 ಬಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 295ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್​ ವರದಿ ಮಾಡಿದೆ.

ಇದನ್ನೂ ಓದಿ
Image
ಬ್ರಿಟನ್ನಿನ ಪ್ರಸಕ್ತ ರಾಜಕೀಯ ವಿಪ್ಲವದ ಹರಿಕಾರ ರಿಷಿ ಸುನಾಕ್ ಆ ದೇಶದ ಮುಂದಿನ ಪ್ರಧಾನ ಮಂತ್ರಿಯೇ?
Image
ಬಕ್ರೀದ್ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ: ಕಟ್ಟುನಿಟ್ಟಿನ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
Image
Viral News: ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ ಮಾಡಿ ಮಾದರಿಯಾದ ಮುಸ್ಲಿಂ ಕುಟುಂಬ

ಈ ಹಿಂದೆ ಬಿಜೆಪಿ ನಾಯಕಿ ನೂಪುರ್ ಶರ್ಮಾ ಟಿವಿ ಚರ್ಚೆಯೊಂದರಲ್ಲಿ ಮುಸ್ಲಿಂ ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದು ವಿಶ್ವಾದ್ಯಂತ ಚರ್ಚೆಯಾಗಿ, ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ, ಬಿಜೆಪಿಯಿಂದ ನೂಪುರ್ ಶರ್ಮಾ ಅವರನ್ನು ಅಮಾನತುಗೊಳಿಸಲಾಗಿತ್ತು. ಆಕೆಗೆ ಬೆಂಬಲ ನೀಡಿ ಪೋಸ್ಟ್​ ಮಾಡಿದ್ದ ಕನ್ನಯ್ಯ ಲಾಲ್ ಎಂಬ ಟೈಲರ್​ನ ಅಂಗಡಿಗೆ ಬಟ್ಟೆ ಹೊಲಿಯಲು ಕೊಡುವ ನೆಪದಲ್ಲಿ ಬಂದಿದ್ದ ಇಬ್ಬರು ಆತನ ತಲೆ ಕತ್ತರಿಸಿ ಕೊಲೆ ಮಾಡಿದ್ದರು. ಅದನ್ನು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲೂ ಹಾಕಿದ್ದರು. ಇದಾದ ಬಳಿಕ ಆ ಘಟನೆ ಕೋಮು ಗಲಭೆಗೂ ಕಾರಣವಾಗಿತ್ತು.

Published On - 8:36 am, Fri, 8 July 22

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!