AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಬಸ್​ ನಿಲ್ದಾಣದಲ್ಲಿ ಸೀಟಿಗಾಗಿ ಮಹಿಳೆಯರ ಕಿತ್ತಾಟ. ಪೊಲೀಸರಿಂದ ಲಾಠಿಚಾರ್ಜ್

ಬಸ್​ ಸೀಟಿಗಾಗಿ ಮಹಿಳೆಯರ ನಡುವೆ ಶುರುವಾದ ಮಾತಿನ ಚಕಮಕಿ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿದ್ದು, ಅದನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

ಕೋಲಾರ ಬಸ್​ ನಿಲ್ದಾಣದಲ್ಲಿ ಸೀಟಿಗಾಗಿ ಮಹಿಳೆಯರ ಕಿತ್ತಾಟ. ಪೊಲೀಸರಿಂದ ಲಾಠಿಚಾರ್ಜ್
ಕೋಲಾರದಲ್ಲಿ ಪೊಲೀಸರಿಂದ ಲಾಠಿಚಾರ್ಜ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Jul 04, 2023 | 11:41 AM

Share

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ(Free Bus For Women) ಕಲ್ಪಿಸುವ ಶಕ್ತಿ ಯೋಜನೆಗೆ(Shakti Yojana) ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ. ಕೆಎಸ್​​ಆರ್​ಟಿಸಿ (KSRTC), ಬಿಎಂಟಿಸಿ, ಕೆಕೆಆರ್​ಟಿಸಿ, NWRTC ನಾಲ್ಕು ನಿಗಮದ ಸಾರಿಗೆಗಳಲ್ಲಿ ಮಹಿಳೆಯರ ಸಂಚಾರ ಸಂಖೆಯಲ್ಲಿ ಹೆಚ್ಚಳವಾಗಿದೆ. ಆದ್ರೆ, ಕೆಲವೆಡೆ ಗಲಾಟೆಗಳು ನಡೆದಿರುವ ಪ್ರಸಂಗಗಳು ಬೆಳಕಿಗೆ ಬಂದಿವೆ. ಇದಕ್ಕೆ ಪೂರಕವೆಂಬಂತೆ ಕೋಲಾರ(Kolar) ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿಸೀಟ್​​ಗಾಗಿ ಮಹಿಳೆಯರ ನಡುವೆ ಕಿತ್ತಾಟ ನಡೆದಿದ್ದು, ಇದನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

ಇದನ್ನೂ ಓದಿ: Shakti Scheme: ಶಕ್ತಿ ಯೋಜನೆ ಜಾರಿ ನಂತರ ಕರ್ನಾಟಕದ ಸಾರಿಗೆ ನಿಗಮಗಳ ಸರಾಸರಿ ಆದಾಯದಲ್ಲಿ ಹೆಚ್ಚಳ

ಕೋಲಾರಿಂದ ಬೆಂಗಳೂರಿಗೆ ತೆರಳುವ ಬಸ್​​​ನಲ್ಲಿ ಸೀಟಿಗಾಗಿ ಇಬ್ಬರು ಮಹಿಳೆಯರ ಕಿತ್ತಾಡಿಕೊಂಡಿದ್ದಾರೆ. ಬಸ್​​ ಸೀಟು ಹಿಡಿಯಲು ಓರ್ವ ಮಹಿಳೆ ಕಿಟಕಿಯಿಂದ ಬ್ಯಾಗ್ ಹಾಕಿದ್ದಾಳೆ. ಬ್ಯಾಗ್​ ಹಾಕಿದ್ದ ಸೀಟ್​ನಲ್ಲಿ ಬೇರೆ ಮಹಿಳೆ ಬಂದು ಕುಳಿತ್ತಿದ್ದಕ್ಕೆ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಸಾಲದಕ್ಕೆ ಸ್ಥಳಕ್ಕೆ ತನ್ನ ಸಂಬಂಧಿಕರನ್ನು ಕರೆಸಿ ಮಹಿಳೆ ದೊಡ್ಡ ಗಲಾಟೆ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ಜನರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಅಲ್ಲದೇ ಈ ಗಲಾಟೆ ಪ್ರಕರಣರಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ ಕೆಎಸ್​​ಆರ್​ಟಿಸಿ, ಬಿಎಂಟಿಸಿ, ಕೆಕೆಆರ್​ಟಿಸಿ, NWRTC ನಾಲ್ಕು ನಿಗಮದ ಸಾರಿಗೆಗಳಲ್ಲಿ ಈವರೆಗೆ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ 10 ಕೋಟಿ ಸನಿಹದಲ್ಲಿದೆ. ಇದರಿಂದ ಸಾರಿಗೆ ನಿಗಮಗಳಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ 222 ಕೋಟಿ ರೂಪಾಯಿ ದಾಟಿದೆ.

ಯೋಜನೆ ಘೋಷಣೆ ಮಾಡದ ಆರಂಭದಲ್ಲಿ ರಾಜ್ಯದ ಹಲವೆಡೆ ಮಹಿಳಾ ಪ್ರಯಾಣಿಕರು ಹಾಗೂ ಕಂಡಕ್ಟರ್-ಚಾಲಕರ ನಡುವೆ ವಾಗ್ವಾದಗಳು, ಗಲಾಟೆಗಳು ನಡೆದಿರುವುದನ್ನು ಇಲ್ಲಿ ಸ್ಮರಿಸಬಹುದು.

Published On - 11:40 am, Tue, 4 July 23

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು