AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಆಘಾತ; ಟೊಮ್ಯಾಟೊ ಬೆಲೆಯಲ್ಲಿ ದಿಢೀರ್ ಕುಸಿತ

ಬಾಕ್ಸ್ ಟೊಮ್ಯಾಟೋಗೆ 2000 ರಿಂದ 3000 ರೂಪಾಯಿ ನಿಗದಿಯಾಗಿದೆ ಎಂದು ವಿಡಿಯೋ ಮಾಡಿ ವ್ಯಾಪಾರಿಗಳು ಹರಿಬಿಟ್ಟ ಪರಿಣಾಮ ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಆಂಧ್ರ ಪ್ರದೇಶ, ತಮಿಳುನಾಡಿನಿಂದಲೂ ಟೊಮೆಟೋ ಹೆಚ್ಚಿನ ಪ್ರಮಾಣದಲ್ಲಿ ಬಂದಿದೆ. ಇದರಿಂದಾಗಿ ಬೆಲೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ.

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಆಘಾತ; ಟೊಮ್ಯಾಟೊ ಬೆಲೆಯಲ್ಲಿ ದಿಢೀರ್ ಕುಸಿತ
ಟೊಮ್ಯಾಟೊ
TV9 Web
| Edited By: |

Updated on:Nov 26, 2021 | 2:56 PM

Share

ಕೋಲಾರ: ಜಿಲ್ಲೆಯ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಆಘಾತ ಎದುರಾಗಿದೆ. ಇಂದು (ನವೆಂಬರ್ 26) ಟೊಮೆಟೋ ಬೆಲೆಯಲ್ಲಿ ದಿಢೀರ್ ಕುಸಿತ ಉಂಟಾಗಿದ್ದು, 15 ಕೆಜಿ ಟೊಮ್ಯಾಟೋಗೆ  400 ರಿಂದ 500 ರೂಪಾಯಿ ನಿಗದಿಯಾಗಿದೆ. 15 ಕೆಜಿ ಬಾಕ್ಸ್ ಟೊಮ್ಯಾಟೋಗೆ ನಿನ್ನೆ 800 ರಿಂದ 1000 ರೂಪಾಯಿ ಇತ್ತು. ಆದರೆ ಇಂದು ಬೆಲೆ ಕುಸಿತವಾಗಿದೆ.

ಬಾಕ್ಸ್ ಟೊಮ್ಯಾಟೋಗೆ 2000 ರಿಂದ 3000 ರೂ. ಎಂದು ವಿಡಿಯೋ ಬಾಕ್ಸ್ ಟೊಮ್ಯಾಟೋಗೆ 2000 ರಿಂದ 3000 ರೂಪಾಯಿ ನಿಗದಿಯಾಗಿದೆ ಎಂದು ವಿಡಿಯೋ ಮಾಡಿ ವ್ಯಾಪಾರಿಗಳು ಹರಿಬಿಟ್ಟ ಪರಿಣಾಮ ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಆಂಧ್ರ ಪ್ರದೇಶ, ತಮಿಳುನಾಡಿನಿಂದಲೂ ಟೊಮೆಟೋ ಹೆಚ್ಚಿನ ಪ್ರಮಾಣದಲ್ಲಿ ಬಂದಿದೆ. ಇದರಿಂದಾಗಿ ಬೆಲೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ.

ಸದ್ಯ ಸ್ಥಳೀಯ ರೈತರು ಬೆಲೆ ಇಲ್ಲದೆ ಕಂಗಾಲಾಗಿದ್ದಾರೆ. ಮಳೆಯಿಂದ ಹಾನಿಗೊಳಗಾಗಿ ಅಳಿದು ಉಳಿದ ಬೆಳೆಯನ್ನು ತಂದಿದ್ದ ಜಿಲ್ಲೆಯ ರೈತರು, ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದರು. ಆದರೆ ವಿಡಿಯೋದಿಂದಾಗಿ ರೈತರಿಗೆ ನಿರಾಸೆಯಾಗಿದೆ.

ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ; ದುಪ್ಪಟ್ಟಾದ ತರಕಾರಿ ಬೆಲೆ ರಾಜ್ಯದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಒಂದು ಕಡೆ ಸಂಚಾರಕ್ಕೆ ತೊಂದರೆಯಾದರೆ ಇನ್ನೊಂದು ಕಡೆ ಕಟಾವಿಗೆ ಸಿದ್ಧವಾದ ಬೆಳೆಗಳು ನೀರು ಪಾಲಾಗಿದೆ. ಅದರಲ್ಲೂ ಬೆಳೆಯನ್ನೇ ನಂಬಿಕೊಂಡು ಜೀವನ ನಡೆಸುವ ರೈತರ ಸ್ಥಿತಿ ಹೇಳತೀರದು. ಗದ್ದೆಗಳಲ್ಲಿ, ತೋಟಗಳಲ್ಲಿ ನೀರು ತುಂಬಿಕೊಂಡಿದ್ದು, ರೈತರು ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ. ಹೀಗಿರುವಾಗಲೇ ತರಕಾರಿಗಳ ಬೆಲೆ ಏರಿಕೆಯಾಗಿದೆ. ಇದಕ್ಕೆ ಕಾರಣ ಫಸಲು ಸರಿಯಾಗಿ ಮಾರುಕಟ್ಟೆ ಸೇರದಿರುವುದು. ಅದರಲ್ಲೂ ಈ ಹಿಂದೆ ರಸ್ತೆಗೆ ಟೊಮೆಟೋಗಳನ್ನು ಸುರಿದು ಪ್ರತಿಭಟನೆ ನಡೆಸುತ್ತಿದ್ದ ಕೋಲಾರ ಜಿಲ್ಲೆಯಲ್ಲಿ ಕೆಜಿ ಟೊಮೆಟೋಗೆ 210 ರೂಪಾಯಿ ಬೆಲೆ ನಿಗದಿಯಾಗಿದೆ. ಅದರಲ್ಲೂ ಇದೇ ಮೊದಲ ಬಾರಿಕೆ 15 ಕೆಜಿಯ ಒಂದು ಬಾಕ್ಸ್​ನಲ್ಲಿ ಟೊಮೆಟೋ ಬೆಲೆ 3 ಸಾವಿರ ರೂಪಾಯಿ ಗಡಿ ದಾಟಿದೆ. ಅಂದರೆ ರೈತರು ಹೇಳುವ ಪ್ರಕಾರ ದಾಖಲೆಯ ಮೊತ್ತಕ್ಕೆ ಟೊಮೆಟೋ ಮಾರಾಟವಾಗುತ್ತಿದೆ. ಪರಿಸ್ಥಿತಿ ಕೂಡ ಹಾಗೆ ಇದೆ. ಅಲ್ಪಸ್ವಲ್ಪ ಕೆಟ್ಟ ಟೊಮೆಟೋ ಕೂಡ ಮಾರಾಟವಾಗುತ್ತಿದೆ. ಇದಕ್ಕೆ ಕಾರಣ ಮಾರುಕಟ್ಟೆಗೆ ಟೊಮೆಟೋ ಪೂರೈಕೆಯಾಗುತ್ತಿಲ್ಲ. ಇನ್ನು ಒಂದು ಅಥವಾ ಎರಡು ಟೊಮೆಟೋವಿನ ಪ್ಯಾಕೆಟ್ ಕೂಡ ಮಾರುಕಟ್ಟೆಗೆ ಬಂದಿದ್ದು, ಗಗನಕ್ಕೇರಿದ ಬೆಲೆಗೆ ಪ್ರತ್ಯಕ್ಷ ಸಾಕ್ಷಿ ಎಂಬಂತಾಗಿದೆ. ಇನ್ನಿತರ ತರಕಾರಿ ಮಾರಾಟ ಕೂಡ ಭಿನ್ನವಾಗಿಲ್ಲ ಎನ್ನುವುದು ವಿಪರ್ಯಾಸ.

ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ ಈ ಬಗ್ಗೆ ಸರ್ಕಾರ ಕೂಡ ಗಮನಹರಿಸಿದ್ದು, ಆಯಾ ಜಿಲ್ಲೆಗಳಲ್ಲಿನ ಬೆಳೆ ನಷ್ಟದ ಕುರಿತು ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಚುನಾಯಿತ ಪ್ರತಿನಿಧಿಗಳು ಸಂತ್ರಸ್ತ ಪ್ರದೇಶಗಳಿಗೆ ಇನ್ನೂ ಭೇಟಿ ನೀಡಿಲ್ಲ ಎಂಬ ದೂರು ಕೇಳಿ ಬರುತ್ತಿದ್ದಂತೆಯೇ, ನಿನ್ನೆ (ನವೆಂಬರ್​ 22) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಮಳೆಯಿಂದ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಐದು ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು, 30,114 ಹೆಕ್ಟೇರ್ ತೋಟಗಾರಿಕಾ ಬೆಳೆ ನಷ್ಟವಾಗಿದೆ.

ಇದನ್ನೂ ಓದಿ:

ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ; ದುಪ್ಪಟ್ಟಾದ ತರಕಾರಿ ಬೆಲೆ, ಪ್ಯಾಕೆಟ್ ಒಂದರಲ್ಲಿ 2 ಟೊಮೆಟೋ ಮಾರಾಟ!

ಕೊಪ್ಪಳ: ಟೊಮೆಟೋ ದರ ಕುಸಿತ; ಬೆಳೆದ ಟೊಮೆಟೋವನ್ನೆಲ್ಲಾ ಬೀದಿಗೆ ಸುರಿದು ರೈತರಿಂದ ಆಕ್ರೋಶ

Published On - 2:50 pm, Fri, 26 November 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ