AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಜನಸ್ಪಂದನ ಇಂಪ್ಯಾಕ್ಟ್: ಕೋಲಾರ ವ್ಯಕ್ತಿಯ 10 ವರ್ಷಗಳ ಹಿಂದಿನ ಸಮಸ್ಯೆಗೆ ಸಿಕ್ತು ಮುಕ್ತಿ

ವಿಧಾನಸೌಧ ಆವರಣದಲ್ಲಿ ನಿನ್ನೆ ಏರ್ಪಡಿಸಿದ್ದ ಸಿಎಂ ಜನಸ್ಪಂದನ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಬಂತಹಳ್ಳಿ ಗ್ರಾಮದ ನಾರಾಯಣಸ್ವಾಮಿ ಅವರ ಸಮಸ್ಯೆ ಬಗೆಹರಿಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಿದ್ದರಾಮಯ್ಯ ಜನಸ್ಪಂದನ ಇಂಪ್ಯಾಕ್ಟ್: ಕೋಲಾರ ವ್ಯಕ್ತಿಯ 10 ವರ್ಷಗಳ ಹಿಂದಿನ ಸಮಸ್ಯೆಗೆ ಸಿಕ್ತು ಮುಕ್ತಿ
ಸಿದ್ದರಾಮಯ್ಯ ಜನಸ್ಪಂದನ ಸಕ್ಸಸ್​​
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 09, 2024 | 6:05 PM

Share

ಕೋಲಾರ, ಫೆ.09: ನಿನ್ನೆ(ಫೆ.08) ವಿಧಾನಸೌಧ ಆವರಣದಲ್ಲಿ ಸಿಎಂ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಇದಕ್ಕೆ ಉತ್ತಮ ಪ್ರತಿಕ್ರಿಯೆ ಕೂಡ ಸಿಕ್ಕಿತ್ತು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಬಂತಹಳ್ಳಿ ಗ್ರಾಮದ ರೈತ ನಾರಾಯಣಸ್ವಾಮಿ ಎಂಬುವವರು ಸಮಸ್ಯೆ ಬಗೆಹರಿಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

10 ವರ್ಷಗಳ ಹಿಂದಿನ ಸಮಸ್ಯೆಗೆ ಸಿಕ್ತು ಮುಕ್ತಿ

ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ‘ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಬಂಟಹಳ್ಳಿ ನಿವಾಸಿ ಸುಮಾರು 50 ವರ್ಷದ ನಾರಾಯಣಸ್ವಾಮಿ ಅವರ ಖಾತೆ ಬದಲಾವಣೆ ಮಾಡುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಲಾಗಿತ್ತು. ಅದರಂತೆ ಅವರ ಹತ್ತು ವರ್ಷದ ಸಮಸ್ಯೆಯನ್ನು ಒಂದೇ ದಿನದಲ್ಲಿ ಬಗೆಹರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ಮಾಲೂರು ತಹಶೀಲ್ದಾರ್, ‘ಅವರ ಎರಡು ಖಾತೆ ಸಮಸ್ಯೆಯಲ್ಲಿ ಸರಿಯಾದ ದಾಖಲೆ ಇದ್ದ ಒಂದು ಸಮಸ್ಯೆಯನ್ನ ಇತ್ಯರ್ಥಗೊಳಿಸಿದ್ದೇವೆ. ಆದ್ರೆ, ಮತ್ತೊಂದು ಪ್ರಕರಣ ಇದ್ದು, ಅದಕ್ಕೆ ಬೇಕಾದ ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಮಾಡಲಾಗುವುದು ಎನ್ನುತ್ತಾರೆ.

ಇದನ್ನೂ ಓದಿ:ಸಿಎಂ 2ನೇ ಜನಸ್ಪಂದನಕ್ಕೆ ಬಂದ ಅರ್ಜಿಗಳು ಎಷ್ಟು? ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು..!

ಇನ್ನು ರೈತ ನಾರಾಯಣಸ್ವಾಮಿ ಮಾತನಾಡಿ, ‘ಖಾತೆ ಬದಲಾವಣೆ ಸಮಸ್ಯೆ ಅಂದರೆ, ಬಂಟಹಳ್ಳಿ ಗ್ರಾಮದ ಸರ್ವೇ ನಂ-277 ಪೌವತಿ ಖಾತೆ ಮಾಡಿಕೊಡಲು ಹಲವು ಬಾರಿ ಮನವಿ ಮಾಡಿದ್ದೇ. ಆದ್ರೆ, 10 ವರ್ಷಗಳಿಂದ ನನ್ನ ಹೆಸರಿನಲ್ಲಿದ್ದ ಖಾತೆಯನ್ನ ಬೇರೆಯವರು ಹೊಡೆಯಲು ಯತ್ನಿಸಿದ್ದರು. ಅದರಂತೆ ನನ್ನ ಹೆಸರಿನಲ್ಲಿದ್ದ ಒಂದು ಎಕರೆ ಮೂವತ್ತೆರೆಡು ಗುಂಟೆ ಜಮೀನು, ಎಸಿ ಕಚೇರಿಯ ನ್ಯಾಯಾಲಯದಲ್ಲಿದ್ದು, ನನಗೆ ಅನ್ಯಾಯವಾಗಿದೆ ಎಂದು ಮನವಿ ಮಾಡಲಾಗಿತ್ತು. ವೆಂಕಟೇಶಪ್ಪ ಎನ್ನುವವರಿಗೆ ಖಾತೆ ಮಾಡಿ ನನಗೆ ಅನ್ಯಾಯ ಮಾಡಿದ್ದರು. ಈ ಹಿನ್ನಲೆ ಸಮಸ್ಯೆಯನ್ನು ಆದಷ್ಟು ಬೇಗ ಬಗೆ ಹರಿಸಿ ನಮಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:01 pm, Fri, 9 February 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು