AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಪೈಸೆ ಲಂಚ ತೆಗೆದುಕೊಂಡಿದ್ದರೆ ತೋರಿಸಿ, ರಾಜಕೀಯ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುವೆ: ಸಿದ್ಧರಾಮಯ್ಯ ಸವಾಲು

ನನ್ನ ಅವಧಿಯಲ್ಲಿ ಒಂದು ಪೈಸೆ ಲಂಚ ಸ್ವೀಕರಿಸಿದ್ದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಂಡು ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.

ಒಂದು ಪೈಸೆ ಲಂಚ ತೆಗೆದುಕೊಂಡಿದ್ದರೆ ತೋರಿಸಿ, ರಾಜಕೀಯ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುವೆ: ಸಿದ್ಧರಾಮಯ್ಯ ಸವಾಲು
ಸಿದ್ಧರಾಮಯ್ಯ
TV9 Web
| Edited By: |

Updated on: Jan 23, 2023 | 4:17 PM

Share

ಕೋಲಾರ: ನನ್ನ ಅವಧಿಯಲ್ಲಿ ಒಂದು ಪೈಸೆ ಲಂಚ ಸ್ವೀಕರಿಸಿದ್ದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಂಡು ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸವಾಲು ಹಾಕಿದರು. ಕೋಲಾರ ಹೊರವಲಯದ ಟಮಕ ಬಳಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿ, ರಾಜ್ಯದ ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ, ನೊಂದಿದ್ದಾರೆ. ಅನೇಕ ಕಷ್ಟಗಳನ್ನು ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ. ಈಗ ಲಂಚ ಕೊಡದಿದ್ದರೆ ಯಾವುದೇ ಕೆಲಸ ಆಗಲ್ಲ. ಬಿಜೆಪಿಯಂತಹ ಭ್ರಷ್ಡ ಸರ್ಕಾರ ರಾಜ್ಯದಲ್ಲಿ ಯಾವತ್ತೂ ಬಂದಿರಲಿಲ್ಲ. ಮೋದಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪತ್ರ ಬರೆದಿದ್ದರು. 40% ಕಮಿಷನ್​​ ಬಗ್ಗೆಯೂ ಕಲಾಪದಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ. ಕಾಗೇರಿಯಂತಹ ಸ್ಪೀಕರ್​ರನ್ನು ನಾನು ಯಾವತ್ತೂ ನೋಡಿಯೇ ಇಲ್ಲ. ವಿಧಾನಸೌಧದ ಗೋಡೆಯೂ ಲಂಚ ಲಂಚ ಅಂತಾ ಪಿಸುಗುಡುತ್ತಿದೆ. ಮಸಾಲೆ ದೋಸೆ, ಉಪ್ಪಿಟ್ಟಿಗೆ ಇಷ್ಟು ಅನ್ನೋ ರೀತಿ ಬೋರ್ಡ್​ ಹಾಕಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ನಾನು ಕೋಲಾರದಲ್ಲಿ ಸ್ಪರ್ಧೆ ಮಾಡ್ತೇನೆ

ಇನ್ನು ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಾನು ಈಗಾಗಲೇ ಹೇಳಿರುವಂತೆ ಕೋಲಾರದಿಂದ ಸ್ಪರ್ಧಿಸುತ್ತೇನೆ. ಪಕ್ಷದ ಹೈಕಮಾಂಡ್​ ಸೂಚಿಸಿದರೆ ಕೋಲಾರದಿಂದ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಬರೀ ಡ್ರಾಮ ಅಷ್ಟೆ, ಸಿದ್ದು ನಡೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಬಿಎಸ್​ವೈ

ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಕಾಣ್ತಾ ಇದೆ

ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಕಾಣ್ತಾ ಇದೆ. ಅದಕ್ಕಾಗಿ ಬಿಜೆಪಿಯವರು ಹೆದರಿಕೊಂಡು ವಾರಕ್ಕೊಂದು ಸಲ ಮೋದಿಯವರನ್ನು ಕರಸ್ತಿದ್ದಾರೆ. ಮೋದಿ ಮತ್ತೆ ನಮಗೆ ಅಧಿಕಾರ ಕೊಡಸ್ತಾರೆ ಅನ್ನೋ ಭರವಸೆಯಲ್ಲಿದ್ದಾರೆ. ಅವರಿಗೆ ಬೇರೆ ಬಂಡವಾಳ ಇಲ್ಲ. ನೂರು ಸಾರಿ ಮೋದಿ ಅಮಿತ್ ಶಾ ಬಂದು ಕ್ಯಾಂಪೇನ್ ಮಾಡಿದರೂ ಕೂಡ ಸೂರ್ಯ ಇರುವುದು ಎಷ್ಟು ಸತ್ಯವೋ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ನಾವು ನಿರೀಕ್ಷೆ ಮಾಡಿದಕ್ಕಿಂತ ಹೆಚ್ಚು ರೆಸ್ಪಾನ್ಸ್ ಕಾರ್ಯಕರ್ತರಿಂದ ಬರ್ತಿದೆ. ರಾಜ್ಯದ ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ ನೊಂದಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ JDS ಅಭ್ಯರ್ಥಿ ಗೆಲ್ಲೋದು ಪಕ್ಕಾ, ಬರೆದಿಟ್ಟುಕೊಳ್ಳಿ ಎಂದ H.D.ಕುಮಾರಸ್ವಾಮಿ

ಬಿಜೆಪಿಯಷ್ಟು ಭ್ರಷ್ಟ ಸರ್ಕಾರ ಯಾವತ್ತೂ ಬಂದಿರಲಿಲ್ಲ

ಅನೇಕ ಕಷ್ಟಗಳನ್ನು ಅನುಭವಿಸಬೇಕಾದ ಸ್ಥಿತಿ ನಿರ್ಮಾಣ ಆಗಿದೆ. ಯಾವುದೇ ಕೆಲಸ ಆಗಬೇಕಾದರೂ ಲಂಚ ಕೊಡದೇ ಕೆಲಸ ಆಗಲ್ಲ. ರಾಜ್ಯದ ಇತಿಹಾಸದಲ್ಲಿ ಬಿಜೆಪಿಯಷ್ಟು ಭ್ರಷ್ಟ ಸರ್ಕಾರ ಯಾವತ್ತೂ ಬಂದಿರಲಿಲ್ಲ. ಕಾಂಟ್ರಾಕ್ಟರ್ ಅಸೋಸಿಯೇಷನ್ ನವರು ಕೆಂಪಣ್ಣ ಪತ್ರ ಬರೆದಿದ್ದಾರೆ. ಪ್ರತಿ ಪ್ರೊಜೆಕ್ಟ್​ಗಳಲ್ಲಿ ಗುತ್ತಿಗೆಯಲ್ಲಿ 40% ಕಮಿಷನ್ ಕೊಡಬೇಕಾಗಿದೆ. ಏನಾದರೂ ಮಾಡಿ ಇದನ್ನು ನಿಲ್ಲಿಸಿ ಅಂತ ಪ್ರಧಾನಿಯವರಿಗೆ ಪತ್ರ ಬರೆದು ಬೇಡಿಕೊಂಡಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು