AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನುವಾರುಗಳ ಯೋಗಕ್ಷೇಮ ಬಯಸಿ ಕಾರ್ತಿಕ ಮಾಸದಲ್ಲಿ ಮುಳಬಾಗಿಲು ಬಯಲು ಬಸವೇಶ್ವರನಿಗೆ ವಿಶೇಷ ಪೂಜೆ

Karthika Masa: ಕಡೆಯ ಕಾರ್ತಿಕ ಸೋಮವಾರ ಬಯಲು ಬಸವೇಶ್ವರ ಸ್ವಾಮಿಯ ಜಾತ್ರೆ ನಡೆಯುತ್ತದೆ. ಈ ವೇಳೆ ಸುತ್ತಮುತ್ತಲ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಇಲ್ಲಿ ‌ದೇವರಿಗೆ ಪೂಜೆ ಸಲ್ಲಿಸುತ್ತಾರೆ ಎಂದು ಇಲ್ಲಿನ ದೇವಾಲಯದ ಅರ್ಚಕರಾದ ನಾಗರಾಜ್ ಹೇಳುತ್ತಾರೆ. 

ಜಾನುವಾರುಗಳ ಯೋಗಕ್ಷೇಮ ಬಯಸಿ ಕಾರ್ತಿಕ ಮಾಸದಲ್ಲಿ ಮುಳಬಾಗಿಲು ಬಯಲು ಬಸವೇಶ್ವರನಿಗೆ ವಿಶೇಷ ಪೂಜೆ
ಮುಳಬಾಗಿಲು: ಕಾರ್ತಿಕ ಮಾಸದಲ್ಲಿ ಬಯಲು ಬಸವೇಶ್ವರನಿಗೆ ವಿಶೇಷ ಪೂಜೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Dec 08, 2023 | 2:18 PM

Share

ನೂರಾರು ಹಳ್ಳಿಗಳ ಜಾನುವಾರುಗಳನ್ನು (Cattle) ಕಾಯೋ ದೈವವಾಗಿ ಅಲ್ಲಿ ನಿಂತಿದೆ ಬಯಲು ಬಸವೇಶ್ವರ ಹಾಗೂ ಜಲಕಂಠೇಶ್ವರ ಸ್ವಾಮಿ. ಹೌದು, ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು (Mulbagal, Kolar) ಸೋಮರನಹಳ್ಳಿ ಗ್ರಾಮದ ಹೊರವಲಯದಲ್ಲಿ ಸಾವಿರಾರು ವರ್ಷಗಳ ಹಿಂದೆ ಡಂಕಣಾಚಾರಿಯಿಂದ ಕೆತ್ತಲ್ಪಟ್ಟಿರುವ ಒಂದು ಸುಂದರ ಬೃಹತ್ ಬಸವನ ಮೂರ್ತಿ ಹಾಗೂ ಜಲಕಂಠೇಶ್ವರ ಸ್ವಾಮಿಯನ್ನು ಇಲ್ಲಿ ಪ್ರತಿಷ್ಠಾಪಿಸಲಾಗಿದೆ. ಡಂಕಣಾಚಾರಿಯು ತನ್ನ ತಂದೆ ಜಕಣಾಚಾರಿಯನ್ನು ಹುಡುಕುತ್ತಾ ಬಂದಾಗ ಅದೊಂದು ರಾತ್ರಿ ಸೋಮರ್ಸನಹಳ್ಳಿ ಗ್ರಾಮದ ಬಳಿ ಬಂದು ತಂಗಿದ್ದರಂತೆ. ಈ ವೇಳೆ ಈ ಗ್ರಾಮದ ಬಳಿ ತಂಗಿದ್ದ ಡಂಕಣಾಚಾರಿಗೆ ಶಿವನ ಪ್ರೇರಣೆಯಾಗಿ ಬಸವಣ್ಣನ ಮೂರ್ತಿಯನ್ನು (Bayalu Basaveshwara) ಹಾಗೂ ಶಿವಲಿಂಗ ಕೆತ್ತನೆ ಮಾಡಿ ಪ್ರತಿಷ್ಠಾಪನೆ ಮಾಡಿದ್ದಾರೆ ಅನ್ನೋದು ಇಲ್ಲಿನ ಸ್ಥಳ ಪುರಾಣ.

ಕಲ್ಯಾಣಿ ಚಾಲುಕ್ಯರು ಹಾಗೂ ಹೊಯ್ಸಳರ ಕಾಲದ ಈ ಬಯಲು ಬಸವೇಶ್ವರ ದೇವಾಲಯ ಸಾವಿರಾರು ವರ್ಷಗಳ ಕಾಲದಿಂದಲೂ ಈ ಭಾಗದ ಸಾವಿರಾರು ಜನರ ಆರಾಧ್ಯ ದೈವವಾಗಿ ಪೂಜಿಸಿ ಕೊಳ್ಳುತ್ತಾ ಬಂದಿದೆ. ಈ ಭಾಗದ ಯಾವುದೇ ಜಾನುವಾರುಗಳಿಗೆ ಅನಾರೋಗ್ಯ ಅಂದರೆ ಮೊದಲು ಜನರು ಬಯಲು ಬಸವೇಶ್ವರನಿಗೆ ಬಂದು ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸುತ್ತಾರೆ. ಆ ತಕ್ಷಣವೇ ಜಾನುವಾರುಗಳ ಅನಾರೋಗ್ಯ ಸಮಸ್ಯೆ ಬಗೆಹರಿಯುತ್ತದೆ ಅನ್ನೋದು ಸ್ಥಳೀಯರ ಮಾತು ಹಾಗೂ ನಂಬಿಕೆ.

ಇದನ್ನೂ ಓದಿ: ಮುಳ್ಳುಗಳ ರಾಶಿ ಮೇಲೆ ಹನುಮನಂತೆ ಜಿಗಿದು ಹರಕೆ ತೀರಿಸುವ ಭಕ್ತರು, ಕೊಪ್ಪಳದಲ್ಲೊಂದು ವಿಶಿಷ್ಟ ಆಚರಣೆ

ಪ್ರತಿ ಸೋಮವಾರ ಈ ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ, ವಿಶೇಷವಾಗಿ ಕಾರ್ತಿಕ ಮಾಸದ ನಾಲ್ಕು ಸೋಮವಾರಗಳು ಇಲ್ಲಿಗೆ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ತಮ್ಮ ಜಾನುವಾರುಗಳಿಗೆ ಒಳಿತಾಗಲೆಂದು ಪೂಜೆ ಸಲ್ಲಿಸಿ ತೆರಳುತ್ತಾರೆ. ಈ ದೇವಾಲಯಕ್ಕೆ ಬರುವ ಜನರು ತಮ್ಮ ಕೈಯಲ್ಲಿ ಹಸುವಿನ ಮೇವನ್ನು ಹಿಡಿದುಕೊಂಡು ಬಂದು ಬಸವನ ವಿಗ್ರಹದ ಮೇಲಿಟ್ಟು ಪೂಜೆ ಸಲ್ಲಿಸಿ ನಂತರ ಅದನ್ನು ಪ್ರಸಾದವಾಗಿ ವಾಪಸ್ ಮನೆಗೆ ತೆಗೆದುಕೊಂಡು ಹೋಗಿ ತಮ್ಮ ಜಾನುವಾರುಗಳಿಗೆ ತಿನ್ನಿಸುತ್ತಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:13 pm, Fri, 8 December 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ