AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಮುಂಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ‘ಭಾಗ್ಯದ ಬಳೆಗಾರ ಬಾ ನನ್ನ​ ತವರಿಗೆ’ ಧಾಟಿಯಲ್ಲಿ ರಚಿಸಿ, ಸುಶ್ರಾವ್ಯವಾಗಿ ಹಾಡಿದ ಶ್ರೀನಿವಾಸಪುರ ಅಕ್ಬರ್​!

ರಾಜ್ಯ ವಿಧಾನಸಭಾ ಚುನಾವಣೆ ಮುಗಿದಿದ್ದು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿದೆ. ಈ ನಡುವೆ ಕಾಂಗ್ರೆಸ್ ಪಕ್ಷದಿಂದ ಯಾರು ಸಿಎಂ ಆಗಬೇಕು ಅನ್ನೋ ಜಟಾಪಟಿ ನಡೆಯುತ್ತಿರುವಾಗಲೇ ಸಿಎಂ ರೇಸ್‌ನಲ್ಲಿರುವ ಸಿದ್ದರಾಮಯ್ಯ ಅವರಿಗೆ ಶ್ರೀನಿವಾಸಪುರ ಮೂಲದ ಅವರ ಅಭಿಮಾನಿಯೊಬ್ಬ ಅರ್ಥಪೂರ್ಣ ಹಾಡೊಂದು ರಚಿಸಿ ಸಿದ್ದುಗೆ ಹಾಡನ್ನು ಉಡುಗೊರೆಯಾಗಿ ನೀಡಿದ್ದಾರೆ. ಸಿದ್ದರಾಮಯ್ಯ ಕುರಿತು ಅರ್ಥಪೂರ್ಣ ಹಾಡಿಗೆ ಸಾಹಿತ್ಯ ರಚನೆ ಮಾಡಿ, ಜಾನಪದ ಶೈಲಿಯ ಹಾಡೊಂದನ್ನು ಹಾಡುವ ಮೂಲಕ ಸಿದ್ದರಾಮಯ್ಯ ಅಭಿಮಾನಿಯೊಬ್ಬ ಗಮನ ಸೆಳೆದಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಯಡಗಾನಪಲ್ಲಿ ಗ್ರಾಮದ […]

ಮುಂದಿನ ಮುಂಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ‘ಭಾಗ್ಯದ ಬಳೆಗಾರ ಬಾ ನನ್ನ​ ತವರಿಗೆ’ ಧಾಟಿಯಲ್ಲಿ ರಚಿಸಿ, ಸುಶ್ರಾವ್ಯವಾಗಿ ಹಾಡಿದ ಶ್ರೀನಿವಾಸಪುರ ಅಕ್ಬರ್​!
ಸಿದ್ದರಾಮಯ್ಯ ಕುರಿತು ‘ಭಾಗ್ಯದ ಬಳೆಗಾರ ಬಾ ನನ್ನ​ ತವರಿಗೆ’ ಧಾಟಿಯಲ್ಲಿ ರಚಿಸಿ, ಸುಶ್ರಾವ್ಯವಾಗಿ ಹಾಡಿದ ಶ್ರೀನಿವಾಸಪುರ ಅಕ್ಬರ್​!
Follow us
ಸಾಧು ಶ್ರೀನಾಥ್​
|

Updated on: May 18, 2023 | 10:45 AM

ರಾಜ್ಯ ವಿಧಾನಸಭಾ ಚುನಾವಣೆ ಮುಗಿದಿದ್ದು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿದೆ. ಈ ನಡುವೆ ಕಾಂಗ್ರೆಸ್ ಪಕ್ಷದಿಂದ ಯಾರು ಸಿಎಂ ಆಗಬೇಕು ಅನ್ನೋ ಜಟಾಪಟಿ ನಡೆಯುತ್ತಿರುವಾಗಲೇ ಸಿಎಂ ರೇಸ್‌ನಲ್ಲಿರುವ ಸಿದ್ದರಾಮಯ್ಯ ಅವರಿಗೆ ಶ್ರೀನಿವಾಸಪುರ ಮೂಲದ ಅವರ ಅಭಿಮಾನಿಯೊಬ್ಬ ಅರ್ಥಪೂರ್ಣ ಹಾಡೊಂದು ರಚಿಸಿ ಸಿದ್ದುಗೆ ಹಾಡನ್ನು ಉಡುಗೊರೆಯಾಗಿ ನೀಡಿದ್ದಾರೆ. ಸಿದ್ದರಾಮಯ್ಯ ಕುರಿತು ಅರ್ಥಪೂರ್ಣ ಹಾಡಿಗೆ ಸಾಹಿತ್ಯ ರಚನೆ ಮಾಡಿ, ಜಾನಪದ ಶೈಲಿಯ ಹಾಡೊಂದನ್ನು ಹಾಡುವ ಮೂಲಕ ಸಿದ್ದರಾಮಯ್ಯ ಅಭಿಮಾನಿಯೊಬ್ಬ ಗಮನ ಸೆಳೆದಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಯಡಗಾನಪಲ್ಲಿ ಗ್ರಾಮದ ಪ್ರಖ್ಯಾತ ಹಾಡುಗಾರ ಅಕ್ಬರ್ ಅವರು ಸಿದ್ದರಾಮಯ್ಯ ಅವರ ಮೇಲೆ ಹಾಡೊಂದನ್ನು ರಚಿಸಿ, ಹಾಡಿದ್ದಾರೆ.

ಅಕ್ಬರ್ ಮೂಲತ: ಒಳ್ಳೆಯ ಹಾಡುಗಾರ. ರಾಜ್ಯದ ಹಲವು ಭಾಗಗಳಲ್ಲಿ ವಿವಿಧ ಸಂಗೀತ ಕಾರ್ಯಕ್ರಮಗಳ ಮೂಲಕ ಪ್ರಖ್ಯಾತಿ ಪಡೆದಿದ್ದಾರೆ. ಅದರಲ್ಲೂ ಹೆಚ್ಚಾಗಿ ಪೊಲೀಸ್ ಇಲಾಖೆಯ ಕಾರ್ಯಕ್ರಮಗಳಲ್ಲಿ ಅಕ್ಬರ್ ಅವರ ಹಾಡುಗಾರಿಕೆ ಇದ್ದೇ ಇರುತ್ತದೆ. ಅದೆಲ್ಲದಕ್ಕೂ ಮುಖ್ಯವಾಗಿ ಸಂಗೀತ ಲೋಕದ ದೈತ್ಯ ಹಾಡುಗಾರ ಪ್ರಪಂಚದಲ್ಲೇ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದ ಎಸ್​.ಪಿ. ಬಾಲಸುಬ್ರಮಣ್ಯಂ ಅವರ ಶಿಷ್ಯ ಅನ್ನೋದು ವಿಶೇಷ.

ಅಕ್ಬರ್ ಅವರು ತೆಲುಗು ಭಾಷೆಯ ಸೂಪರ್ ಡೂಪರ್​ ಕ್ಲಾಸಿಕಲ್​​ ಮೂವಿ ಶಂಕರಾಭರಣಂ ಇತ್ತೀಚೆಗೆ ಕನ್ನಡ ಅವತರಣಿಕೆ ರಿಲೀಸ್​ ಆಗಿದೆ. ಅದರಲ್ಲಿ ಅಕ್ಬರ್ ಅವರು ಸುಶ್ರಾವ್ಯವಾಗಿ ಹಾಡಿದ್ದಾರೆ ಅನ್ನೋದು ಕೋಲಾರ ಜಿಲ್ಲೆಯ ಮಟ್ಟಿಗೆ ಹೆಮ್ಮೆಯ ವಿಚಾರ. ಅಷ್ಟೇ ಅಲ್ಲದೆ ಕೆ ವಿಶ್ವನಾಥ್​​ ಅವರ ಅಪ್ಪ್ಟ ಅಭಿಮಾನಿಯಾದ ಅಕ್ಬರ್​​, ವಿಶ್ವನಾಥ್​​ ಅವರ ಬಹಗಳಷ್ಟು ಕನ್ನಡ ಸಿನಿಮಾ ಹಾಡುಗಳಿಗೆ ಧ್ವನಿಯಾಗಿದ್ದಾರೆ.

ಹೀಗೆ ಹಲವು ವಿಚಾರಗಳಲ್ಲಿ ತಮ್ಮದೇ ಆದ ಹೆಸರು ಮಾಡಿರುವ ಅಕ್ಬರ್ ಅವರು ಸಿದ್ದರಾಮಯ್ಯ ಅವರ ವಿಶೇಷ ಅಭಿಮಾನಿ. ಹಾಗಾಗಿ ಭಾಗ್ಯದ ಬಳೆಗಾರ ಹೋಗಿ ಬಾ ನನ್​ ತವರಿಗೆ ಅನ್ನೋ ಜಾನಪದ ಶೈಲಿಯ ಹಾಡಿಗೆ, ಸಿದ್ದರಾಮಯ್ಯ ಅವರ ಕುರಿತು ಸಾಹಿತ್ಯದ ಸಾಲುಗಳನ್ನು ಜೋಡಿಸಿ ಅದ್ಭುತವಾಗಿ, ಅರ್ಥಪೂರ್ಣವಾಗಿ ಹಾಡಿದ್ದಾರೆ ಅಕ್ಬರ್​.

ವರದಿ: ರಾಜೇಂದ್ರ ಸಿಂಹ, ಟಿವಿ9, ಕೋಲಾರ

ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ