ಕೋಲಾರ: ವಸತಿ ಶಾಲೆಯ ಶಿಕ್ಷಕನ ಬಂಧನ ಖಂಡಿಸಿ ವಿದ್ಯಾರ್ಥಿಗಳಿಂದಲೇ ಪ್ರತಿಭಟನೆ, ಉಪವಾಸದ ಎಚ್ಚರಿಕೆ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಯಲವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ ಅಮಾನವೀಯ ಕೃತ್ಯ ನಡೆದಿತ್ತು. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿತ್ತು. ಅದರಂತೆ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಾಂಶುಪಾಲೆ ಭಾರತಮ್ಮ ಮತ್ತು ಚಿತ್ರಕಲಾ ಶಿಕ್ಷಕರೊಬ್ಬರನ್ನು ಬಂಧಿಸಿದ್ದರು. ಇದೀಗ ಶಿಕ್ಷಕನ ಬಂಧನ ಖಂಡಿಸಿ ವಿದ್ಯಾರ್ಥಿಗಳೇ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೋಲಾರ: ವಸತಿ ಶಾಲೆಯ ಶಿಕ್ಷಕನ ಬಂಧನ ಖಂಡಿಸಿ ವಿದ್ಯಾರ್ಥಿಗಳಿಂದಲೇ ಪ್ರತಿಭಟನೆ, ಉಪವಾಸದ ಎಚ್ಚರಿಕೆ
ಮಲದ ಗುಂಡಿಗೆ ವಿದ್ಯಾರ್ಥಿಗಳನ್ನು ಇಳಿಸಿ ಸ್ವಚ್ಛಗೊಳಿಸುತ್ತಿರುವುದು (ಎಡ ಚಿತ್ರ) ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆ (ಎಡ ಚಿತ್ರ)
Edited By: Rakesh Nayak Manchi

Updated on: Dec 18, 2023 | 8:52 AM

ಕೋಲಾರ, ಡಿ.18: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ ಪ್ರಕರಣ ಸಂಬಂಧ ಕೋಲಾರದ (Kolar) ಮಾಲೂರು ತಾಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕನ ಬಂಧನ ಖಂಡಿಸಿ ಸ್ವತಃ ವಿದ್ಯಾರ್ಥಿಗಳೇ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆಯಿಂದಲೇ ವಸತಿ ಶಾಲೆಯಲ್ಲಿ ಮಕ್ಕಳು ಪ್ರತಿಭಟನೆ ಆರಂಭಿಸಿದ್ದು, ಶಿಕ್ಷಕ ಮುನಿಯಪ್ಪ ವಿರುದ್ಧದ ಪ್ರಕರಣವನ್ನು ವಾಪಸ್ ಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಅಲ್ಲದೆ, ಕೂಡಲೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸುವಂತೆ ಒತ್ತಾಯಿಸುತ್ತಿರುವ ವಿದ್ಯಾರ್ಥಿಗಳು, ಊಟ ತಿಂಡಿ ಬಿಟ್ಟು ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಏನಿದು ಪ್ರಕರಣ?

ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಕ್ಲೀನ್ ಮಾಡಿಸಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಇದರ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿ ಟಿವಿ9ನ ‘ಹೇಗಿದೆ ನಮ್‌ ಶಾಲೆ’ ಎಂಬ ಅಭಿಯಾನದಲ್ಲಿ ವರದಿ ಬಿತ್ತರಿಸಲಾಗಿತ್ತು.

ಇದನ್ನೂ ಓದಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಗೆ ಕಿರುಕುಳ: ಬೆತ್ತಲೆ ವಿಡಿಯೋ ಚಿತ್ರೀಕರಣ, ವಿದ್ಯಾರ್ಥಿನಿ ಆರೋಪ

ಇದರ ಬೆನ್ನಲ್ಲೇ ವಸತಿ ಶಾಲೆಗೆ ಭೇಟಿ ನೀಡಿದ್ದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್, ಪರಿಶೀಲನೆ ನಡೆಸಿದ್ದರು. ಬಳಿಕ ಮಾತನಾಡಿದ್ದ ಅವರು, ಶೌಚಾಲಯ ಕ್ಲೀನ್ ಮಾಡಿಸಿದವರನ್ನು ಅಮಾನತು ಮಾಡುತ್ತೇವೆ ಎಂದಿದ್ದರು. ಅದರಂತೆ, ವಸತಿ ಶಾಲೆಯ ನಾಲ್ವರು ಸಿಬ್ಬಂದಿಯನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಅಮಾನತು ಮಾಡಿದ್ದರು. ಬಳಿಕ ಪ್ರಾಂಶುಪಾಲೆ ಭಾರತಮ್ಮ ಮತ್ತು ಚಿತ್ರಕಲಾ ಶಿಕ್ಷಕ ಮುನಿಯಪ್ಪ ಅವರನ್ನು ಬಂಧಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow Us