AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೆ ನಿವೃತ್ತ ಎಎಸ್ಐ ಮನೆಯಲ್ಲಿ ಕಳ್ಳತನ: 30 ಸಾವಿರ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿ

ಹಾಡಹಗಲೆ ನಿವೃತ್ತ ಎಎಸ್ಐ ಮನೆಯಲ್ಲಿ ಕಳ್ಳತನ ಮಾಡಿರುವಂತಹ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಅಕ್ಕಚಕ್ಕಮ್ಮ ಕಲ್ಯಾಣ ಮಂಟಪದ ಹಿಂಭಾಗದ ಮನೆಯಲ್ಲಿ ನಡೆದಿದೆ.

ಹಾಡಹಗಲೆ ನಿವೃತ್ತ ಎಎಸ್ಐ ಮನೆಯಲ್ಲಿ ಕಳ್ಳತನ: 30 ಸಾವಿರ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿ
ನಿವೃತ್ತ ಎಎಸ್ಐ ಮನೆ
TV9 Web
| Edited By: |

Updated on: Jul 10, 2022 | 12:01 PM

Share

ಕೋಲಾರ: ಹಾಡಹಗಲೆ ನಿವೃತ್ತ ಎಎಸ್ಐ ಮನೆಯಲ್ಲಿ ಕಳ್ಳತನ (Theft) ಮಾಡಿರುವಂತಹ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಅಕ್ಕಚಕ್ಕಮ್ಮ ಕಲ್ಯಾಣ ಮಂಟಪದ ಹಿಂಭಾಗದ ಮನೆಯಲ್ಲಿ ನಡೆದಿದೆ. ಕೆಂಪು ಬಣ್ಣದ ಕಾರ್‌ನಲ್ಲಿ ಬಂದ ವ್ಯಕ್ತಿಯಿಂದ ಕೃತ್ಯ ಎಸಗಲಾಗಿದೆ. ನಿವೃತ್ತ ಮುಖ್ಯಪೇದೆ ಮಲ್ಲಿಕಾರ್ಜುನಯ್ಯ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಟೆರೇಸ್ ಮೇಲೆ ಬಟ್ಟೆ ಒಣಗಿ ಹಾಕಲು ಮಹಿಳೆ ತೆರಳಿದ್ದು, ಮನೆಯಲ್ಲಿ ಬೀರುವಿನಲ್ಲಿದ್ದ 30 ಸಾವಿರ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಅವಳು ನನ್ನವಳೆಂದು ಯುವಕರಿಬ್ಬರ ಜಗಳ, ಇಬ್ಬರಿಗೂ ಯಾಮಾರಿಸಿ ಯುವತಿ ಎಸ್ಕೇಪ್..!

ತಪಾಸನೆಗೆ ತೆರಳಿದ್ದ ಅಬಕಾರಿ ಅಧಿಕಾರಿಗಳ ಜೊತೆಗೆ ದುರ್ವರ್ತನೆ:

ವಿಜಯಪುರ: ಬಾರ್ ಸಹಿತವಿರೋ ಲಾಡ್ಜಿಂಗ್ ಹಾಗೂ ಬೋರ್ಡಿಂಗ್ ತಪಾಸನೆಗೆ ತೆರಳಿದ್ದ ಅಬಕಾರಿ ಅಧಿಕಾರಿಗಳ ಜೊತೆಗೆ ದುರ್ವರ್ತನೆ ಮಾಡಿರುವಂತಹ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದಲ್ಲಿ ನಿನ್ನೆ ನಡೆದಿದೆ. ಅಬಕಾರಿ ಇಲಾಖೆ ಇನ್ಸಪೆಕ್ಟರ್ ಬೀರಪ್ಪಾ ನಾಗಠಾಣ ಮೇಲೆ ಹಲ್ಲೆಗೆ ಯತ್ನಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ ಎನ್ನಲಾಗುತ್ತಿದೆ. ಪಲ್ಲವಿ ಲಾಡ್ಜಿಂಗ್ ಮತ್ತು ಬೋರ್ಡಿಂಗ್ ಮಾಲೀಕ ಸಂಗಮೇಶ ಕರಂಭಂಟನಾಳ ಹಾಗೂ ಸಹೋದರರಿಂದ ದುರ್ವರ್ತನೆ ಎಸಗಲಾಗಿದೆ ಎನ್ನಲಾಗುತ್ತಿದೆ. ಸಂಗಮೇಶ ಸಹೋದರರಾದ ಮಹಾಂತೇಶ ಹಾಗೂ ಬಸವರಾಜರಿಂದ ಕೃತ್ಯ ಎಸಗಲಾಗಿದ್ದು, ಈ ಮೂಲಕ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಮಾಡಲಾಗಿದೆ. ಪಲ್ಲವಿ‌ ಲಾಡ್ಜಿಂಗ್ ಹಾಗೂ ಬೋರ್ಡಿಂಗ್ ಮಾಲೀಕ ಹಾಗೂ ಸಹೋದರರ ಮೇಲೆ ಕಲಂ 353, 342, 504, 506, 34 ಅಡಿಯಲ್ಲಿ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಘಟನೆ ವಿಡಿಯೋ ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಳ್ಳನೆಂದು ತಿಳಿದು ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಿದ ಸೆಕ್ಯುರಿಟಿ ಗಾರ್ಡ್!

ಹಟ್ಟಿಚಿನ್ನದಗಣಿ ಆವರಣದಲ್ಲಿನ ಗಂಧದ ಮರ ಕಳ್ಳತನ:

ರಾಯಚೂರು: ಹಟ್ಟಿಚಿನ್ನದಗಣಿ ಆವರಣದಲ್ಲಿನ ಗಂಧದ ಮರ ಕಳ್ಳತನ ಮಾಡಿರುವಂತಹ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಕಂಪನಿಯಲ್ಲಿ ನಡೆದಿದೆ. ಕಂಪನಿಯ ವಿಲ್ಹೇಜ್ ಶಾಫ್ಟ್​ನೊಳಗೆ ನುಗ್ಗಿ ನಿನ್ನೆ ತಡರಾತ್ರಿ ಕೃತ್ಯವೆಸಗಲಾಗಿದೆ. ಅರಣ್ಯ ಇಲಾಖೆ ಹಾಗೂ ಕಂಪನಿ ಭದ್ರತಾ ಸಿಬ್ಬಂದಿ ವೈಫಲ್ಯ ಆರೋಪಿಸಿದ್ದು, ಚಿನ್ನದಗಣಿ ಆವರಣದಲ್ಲಿ ಪದೇ ಪದೇ ಗಂಧದ ಮರಗಳ ಕಳ್ಳತನ ನಡೆಯುತ್ತಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ