AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೆ ನಿವೃತ್ತ ಎಎಸ್ಐ ಮನೆಯಲ್ಲಿ ಕಳ್ಳತನ: 30 ಸಾವಿರ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿ

ಹಾಡಹಗಲೆ ನಿವೃತ್ತ ಎಎಸ್ಐ ಮನೆಯಲ್ಲಿ ಕಳ್ಳತನ ಮಾಡಿರುವಂತಹ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಅಕ್ಕಚಕ್ಕಮ್ಮ ಕಲ್ಯಾಣ ಮಂಟಪದ ಹಿಂಭಾಗದ ಮನೆಯಲ್ಲಿ ನಡೆದಿದೆ.

ಹಾಡಹಗಲೆ ನಿವೃತ್ತ ಎಎಸ್ಐ ಮನೆಯಲ್ಲಿ ಕಳ್ಳತನ: 30 ಸಾವಿರ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿ
ನಿವೃತ್ತ ಎಎಸ್ಐ ಮನೆ
TV9 Web
| Edited By: |

Updated on: Jul 10, 2022 | 12:01 PM

Share

ಕೋಲಾರ: ಹಾಡಹಗಲೆ ನಿವೃತ್ತ ಎಎಸ್ಐ ಮನೆಯಲ್ಲಿ ಕಳ್ಳತನ (Theft) ಮಾಡಿರುವಂತಹ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಅಕ್ಕಚಕ್ಕಮ್ಮ ಕಲ್ಯಾಣ ಮಂಟಪದ ಹಿಂಭಾಗದ ಮನೆಯಲ್ಲಿ ನಡೆದಿದೆ. ಕೆಂಪು ಬಣ್ಣದ ಕಾರ್‌ನಲ್ಲಿ ಬಂದ ವ್ಯಕ್ತಿಯಿಂದ ಕೃತ್ಯ ಎಸಗಲಾಗಿದೆ. ನಿವೃತ್ತ ಮುಖ್ಯಪೇದೆ ಮಲ್ಲಿಕಾರ್ಜುನಯ್ಯ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಟೆರೇಸ್ ಮೇಲೆ ಬಟ್ಟೆ ಒಣಗಿ ಹಾಕಲು ಮಹಿಳೆ ತೆರಳಿದ್ದು, ಮನೆಯಲ್ಲಿ ಬೀರುವಿನಲ್ಲಿದ್ದ 30 ಸಾವಿರ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಅವಳು ನನ್ನವಳೆಂದು ಯುವಕರಿಬ್ಬರ ಜಗಳ, ಇಬ್ಬರಿಗೂ ಯಾಮಾರಿಸಿ ಯುವತಿ ಎಸ್ಕೇಪ್..!

ತಪಾಸನೆಗೆ ತೆರಳಿದ್ದ ಅಬಕಾರಿ ಅಧಿಕಾರಿಗಳ ಜೊತೆಗೆ ದುರ್ವರ್ತನೆ:

ವಿಜಯಪುರ: ಬಾರ್ ಸಹಿತವಿರೋ ಲಾಡ್ಜಿಂಗ್ ಹಾಗೂ ಬೋರ್ಡಿಂಗ್ ತಪಾಸನೆಗೆ ತೆರಳಿದ್ದ ಅಬಕಾರಿ ಅಧಿಕಾರಿಗಳ ಜೊತೆಗೆ ದುರ್ವರ್ತನೆ ಮಾಡಿರುವಂತಹ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದಲ್ಲಿ ನಿನ್ನೆ ನಡೆದಿದೆ. ಅಬಕಾರಿ ಇಲಾಖೆ ಇನ್ಸಪೆಕ್ಟರ್ ಬೀರಪ್ಪಾ ನಾಗಠಾಣ ಮೇಲೆ ಹಲ್ಲೆಗೆ ಯತ್ನಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ ಎನ್ನಲಾಗುತ್ತಿದೆ. ಪಲ್ಲವಿ ಲಾಡ್ಜಿಂಗ್ ಮತ್ತು ಬೋರ್ಡಿಂಗ್ ಮಾಲೀಕ ಸಂಗಮೇಶ ಕರಂಭಂಟನಾಳ ಹಾಗೂ ಸಹೋದರರಿಂದ ದುರ್ವರ್ತನೆ ಎಸಗಲಾಗಿದೆ ಎನ್ನಲಾಗುತ್ತಿದೆ. ಸಂಗಮೇಶ ಸಹೋದರರಾದ ಮಹಾಂತೇಶ ಹಾಗೂ ಬಸವರಾಜರಿಂದ ಕೃತ್ಯ ಎಸಗಲಾಗಿದ್ದು, ಈ ಮೂಲಕ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಮಾಡಲಾಗಿದೆ. ಪಲ್ಲವಿ‌ ಲಾಡ್ಜಿಂಗ್ ಹಾಗೂ ಬೋರ್ಡಿಂಗ್ ಮಾಲೀಕ ಹಾಗೂ ಸಹೋದರರ ಮೇಲೆ ಕಲಂ 353, 342, 504, 506, 34 ಅಡಿಯಲ್ಲಿ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಘಟನೆ ವಿಡಿಯೋ ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಳ್ಳನೆಂದು ತಿಳಿದು ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಿದ ಸೆಕ್ಯುರಿಟಿ ಗಾರ್ಡ್!

ಹಟ್ಟಿಚಿನ್ನದಗಣಿ ಆವರಣದಲ್ಲಿನ ಗಂಧದ ಮರ ಕಳ್ಳತನ:

ರಾಯಚೂರು: ಹಟ್ಟಿಚಿನ್ನದಗಣಿ ಆವರಣದಲ್ಲಿನ ಗಂಧದ ಮರ ಕಳ್ಳತನ ಮಾಡಿರುವಂತಹ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಕಂಪನಿಯಲ್ಲಿ ನಡೆದಿದೆ. ಕಂಪನಿಯ ವಿಲ್ಹೇಜ್ ಶಾಫ್ಟ್​ನೊಳಗೆ ನುಗ್ಗಿ ನಿನ್ನೆ ತಡರಾತ್ರಿ ಕೃತ್ಯವೆಸಗಲಾಗಿದೆ. ಅರಣ್ಯ ಇಲಾಖೆ ಹಾಗೂ ಕಂಪನಿ ಭದ್ರತಾ ಸಿಬ್ಬಂದಿ ವೈಫಲ್ಯ ಆರೋಪಿಸಿದ್ದು, ಚಿನ್ನದಗಣಿ ಆವರಣದಲ್ಲಿ ಪದೇ ಪದೇ ಗಂಧದ ಮರಗಳ ಕಳ್ಳತನ ನಡೆಯುತ್ತಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!