AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಬಿಲ್​ನಲ್ಲಿ ತಿದ್ದುಪಡಿ ಮಾಡಿ ಅಕ್ರಮ; ಮೂವರು ಬೆಸ್ಕಾಂ ಸಿಬ್ಬಂದಿಯನ್ನು ಅಮಾನತುಗೊಳಿಸಿ ಸುನಿಲ್ ಕುಮಾರ್ ಆದೇಶ

ಸುಮಾರು 8 ಕಮರ್ಷಿಯಲ್ ಮಳಿಗೆಗಳಿಗೆ 5 ಲಕ್ಷದವರೆಗೂ ವಿದ್ಯುತ್ ಬಿಲ್ ಬಂದಿದ್ದರೆ, ಅಕ್ರಮವಾಗಿ ಮುಳಬಾಗಿಲು ಎಇಇ ರಮೇಶ್ ಪಾಸ್​ವರ್ಡ್​ ಬಳಸಿಕೊಂಡು ಕೇವಲ 1 ಲಕ್ಷದಷ್ಟು ಹಣವನ್ನ ಮಾತ್ರ ಕಟ್ಟಿಸಿಕೊಂಡಿದ್ದಾರೆ.

ವಿದ್ಯುತ್ ಬಿಲ್​ನಲ್ಲಿ ತಿದ್ದುಪಡಿ ಮಾಡಿ ಅಕ್ರಮ; ಮೂವರು ಬೆಸ್ಕಾಂ ಸಿಬ್ಬಂದಿಯನ್ನು ಅಮಾನತುಗೊಳಿಸಿ ಸುನಿಲ್ ಕುಮಾರ್ ಆದೇಶ
ಇಂಧನ ಸಚಿವ ಸುನಿಲ್ ಕುಮಾರ್
TV9 Web
| Updated By: sandhya thejappa|

Updated on:Sep 04, 2021 | 5:07 PM

Share

ಕೋಲಾರ: ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ನಲ್ಲಿ (Electricity Bill) ತಿದ್ದುಪಡಿ ಮಾಡಿ ಅಕ್ರಮವೆಸಗಿದ ಮೂವರು ಬೆಸ್ಕಾಂ (BESCOM) ಅಧಿಕಾರಿಗಳನ್ನ ಇಂಧನ ಸಚಿವ ಸುನಿಲ್ ಕುಮಾರ್ (Sunil Kumar) ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮುಳಬಾಗಿಲು ಬೆಸ್ಕಾಂ ಉಪವಿಭಾಗದ ಕಿರಿಯ ಸಹಾಯಕರಾದ ಮೆಹಬೂಬ್ ಪಾಷ, ಗಾಯತ್ರಮ್ಮ ಹಾಗೂ ಸುಜಾತಮ್ಮ ಅಮಾನತ್ತಾದ ಅಧಿಕಾರಿಗಳು. ವಿದ್ಯುತ್ ಬಿಲ್ಲು ಕಟ್ಟಿಸಿಕೊಳ್ಳುವ ವೇಳೆ 8 ಬಿಲ್ಲುಗಳನ್ನು ಮಾರ್ಪಾಡು ಮಾಡಿ ಅದರ ಮೊತ್ತವನ್ನು ಕಡಿಮೆ ಮಾಡಿದ್ದಾರೆ. ಅದು ಲಕ್ಷಗಟ್ಟಲೆ ಕಡಿಮೆ ಮಾಡಿದ್ದರು ಅನ್ನೋದು ಇಲಾಖೆ ತನಿಖೆಯಿಂದ ಸಾಭೀತಾಗಿದ್ದು, ಮೂವರನ್ನ ಅಮಾನತು ಮಾಡಲಾಗಿದೆ.

ಸುಮಾರು 8 ಕಮರ್ಷಿಯಲ್ ಮಳಿಗೆಗಳಿಗೆ 5 ಲಕ್ಷದವರೆಗೂ ವಿದ್ಯುತ್ ಬಿಲ್ ಬಂದಿದ್ದರೆ, ಅಕ್ರಮವಾಗಿ ಮುಳಬಾಗಿಲು ಎಇಇ ರಮೇಶ್ ಪಾಸ್​ವರ್ಡ್​ ಬಳಸಿಕೊಂಡು ಕೇವಲ 1 ಲಕ್ಷದಷ್ಟು ಹಣವನ್ನ ಮಾತ್ರ ಕಟ್ಟಿಸಿಕೊಂಡಿದ್ದಾರೆ. ಇದು ಇಲಾಖೆಗೆ ಬಹು ದೊಡ್ಡ ನಷ್ಟ ಉಂಟು ಮಾಡಿದೆ. ಅಲ್ಲದೆ ಇಂತಹ ಹಲವು ಪ್ರಕರಣಗಳಲ್ಲಿ ಆರೋಪಿತರು ಭಾಗಿಯಾಗಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.

ಕೋಲಾರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 27 ರಂದು ಮುಳಬಾಗಿಲು ಎಇಇ ರಮೇಶ್ ಅವರು ತಮ್ಮ ಕಂಪ್ಯೂಟರ್ ಪಾಸ್​ವರ್ಡ್​ ಬಳಸಿಕೊಂಡು ಲಕ್ಷಾಂತರ ರೂಪಾಯಿ ಹಣ ಗೋಲ್ ಮಾಲ್ ನಡೆದಿದೆ ಎಂದು ನೀಡಿದ ದೂರಿನ ಆಧಾರದ ಮೇಲೆ ಮೂವರು ಕಿರಿಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಇನ್ನೂ ಇಲಾಖೆ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶ ಮಾಡಿರುವ ಇಂಧನ ಸಚಿವ ಸುನೀಲ್ ಕುಮಾರ್ ಇಂದು ಮೂವರು ಕಿರಿಯ ಅಧಿಕಾರಿಗಳನ್ನ ಅಮಾನತು ಮಾಡಿದ್ದಾರೆ.

ಇದನ್ನೂ ಓದಿ

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯ; ಆಡಳಿತ ಮಂಡಳಿಯಿಂದ ಸೂಚನೆ

Opinion: ಯುವ ರಾಜಕಾರಣಿಗಳಿಗೆ ಕೊಂಚ ನಿರಾಸೆ ಮೂಡಿಸಿದ ರಾಜ್ಯ ಸರ್ಕಾರ; ಏಕೆ? ಇಲ್ಲಿದೆ ಓದಿ

(Three BESCOM officials suspended for illegally amending electricity bill)

Published On - 5:06 pm, Sat, 4 September 21

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?