AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಬಿಲ್​ನಲ್ಲಿ ತಿದ್ದುಪಡಿ ಮಾಡಿ ಅಕ್ರಮ; ಮೂವರು ಬೆಸ್ಕಾಂ ಸಿಬ್ಬಂದಿಯನ್ನು ಅಮಾನತುಗೊಳಿಸಿ ಸುನಿಲ್ ಕುಮಾರ್ ಆದೇಶ

ಸುಮಾರು 8 ಕಮರ್ಷಿಯಲ್ ಮಳಿಗೆಗಳಿಗೆ 5 ಲಕ್ಷದವರೆಗೂ ವಿದ್ಯುತ್ ಬಿಲ್ ಬಂದಿದ್ದರೆ, ಅಕ್ರಮವಾಗಿ ಮುಳಬಾಗಿಲು ಎಇಇ ರಮೇಶ್ ಪಾಸ್​ವರ್ಡ್​ ಬಳಸಿಕೊಂಡು ಕೇವಲ 1 ಲಕ್ಷದಷ್ಟು ಹಣವನ್ನ ಮಾತ್ರ ಕಟ್ಟಿಸಿಕೊಂಡಿದ್ದಾರೆ.

ವಿದ್ಯುತ್ ಬಿಲ್​ನಲ್ಲಿ ತಿದ್ದುಪಡಿ ಮಾಡಿ ಅಕ್ರಮ; ಮೂವರು ಬೆಸ್ಕಾಂ ಸಿಬ್ಬಂದಿಯನ್ನು ಅಮಾನತುಗೊಳಿಸಿ ಸುನಿಲ್ ಕುಮಾರ್ ಆದೇಶ
ಇಂಧನ ಸಚಿವ ಸುನಿಲ್ ಕುಮಾರ್
TV9 Web
| Edited By: |

Updated on:Sep 04, 2021 | 5:07 PM

Share

ಕೋಲಾರ: ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ನಲ್ಲಿ (Electricity Bill) ತಿದ್ದುಪಡಿ ಮಾಡಿ ಅಕ್ರಮವೆಸಗಿದ ಮೂವರು ಬೆಸ್ಕಾಂ (BESCOM) ಅಧಿಕಾರಿಗಳನ್ನ ಇಂಧನ ಸಚಿವ ಸುನಿಲ್ ಕುಮಾರ್ (Sunil Kumar) ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮುಳಬಾಗಿಲು ಬೆಸ್ಕಾಂ ಉಪವಿಭಾಗದ ಕಿರಿಯ ಸಹಾಯಕರಾದ ಮೆಹಬೂಬ್ ಪಾಷ, ಗಾಯತ್ರಮ್ಮ ಹಾಗೂ ಸುಜಾತಮ್ಮ ಅಮಾನತ್ತಾದ ಅಧಿಕಾರಿಗಳು. ವಿದ್ಯುತ್ ಬಿಲ್ಲು ಕಟ್ಟಿಸಿಕೊಳ್ಳುವ ವೇಳೆ 8 ಬಿಲ್ಲುಗಳನ್ನು ಮಾರ್ಪಾಡು ಮಾಡಿ ಅದರ ಮೊತ್ತವನ್ನು ಕಡಿಮೆ ಮಾಡಿದ್ದಾರೆ. ಅದು ಲಕ್ಷಗಟ್ಟಲೆ ಕಡಿಮೆ ಮಾಡಿದ್ದರು ಅನ್ನೋದು ಇಲಾಖೆ ತನಿಖೆಯಿಂದ ಸಾಭೀತಾಗಿದ್ದು, ಮೂವರನ್ನ ಅಮಾನತು ಮಾಡಲಾಗಿದೆ.

ಸುಮಾರು 8 ಕಮರ್ಷಿಯಲ್ ಮಳಿಗೆಗಳಿಗೆ 5 ಲಕ್ಷದವರೆಗೂ ವಿದ್ಯುತ್ ಬಿಲ್ ಬಂದಿದ್ದರೆ, ಅಕ್ರಮವಾಗಿ ಮುಳಬಾಗಿಲು ಎಇಇ ರಮೇಶ್ ಪಾಸ್​ವರ್ಡ್​ ಬಳಸಿಕೊಂಡು ಕೇವಲ 1 ಲಕ್ಷದಷ್ಟು ಹಣವನ್ನ ಮಾತ್ರ ಕಟ್ಟಿಸಿಕೊಂಡಿದ್ದಾರೆ. ಇದು ಇಲಾಖೆಗೆ ಬಹು ದೊಡ್ಡ ನಷ್ಟ ಉಂಟು ಮಾಡಿದೆ. ಅಲ್ಲದೆ ಇಂತಹ ಹಲವು ಪ್ರಕರಣಗಳಲ್ಲಿ ಆರೋಪಿತರು ಭಾಗಿಯಾಗಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.

ಕೋಲಾರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 27 ರಂದು ಮುಳಬಾಗಿಲು ಎಇಇ ರಮೇಶ್ ಅವರು ತಮ್ಮ ಕಂಪ್ಯೂಟರ್ ಪಾಸ್​ವರ್ಡ್​ ಬಳಸಿಕೊಂಡು ಲಕ್ಷಾಂತರ ರೂಪಾಯಿ ಹಣ ಗೋಲ್ ಮಾಲ್ ನಡೆದಿದೆ ಎಂದು ನೀಡಿದ ದೂರಿನ ಆಧಾರದ ಮೇಲೆ ಮೂವರು ಕಿರಿಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಇನ್ನೂ ಇಲಾಖೆ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶ ಮಾಡಿರುವ ಇಂಧನ ಸಚಿವ ಸುನೀಲ್ ಕುಮಾರ್ ಇಂದು ಮೂವರು ಕಿರಿಯ ಅಧಿಕಾರಿಗಳನ್ನ ಅಮಾನತು ಮಾಡಿದ್ದಾರೆ.

ಇದನ್ನೂ ಓದಿ

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯ; ಆಡಳಿತ ಮಂಡಳಿಯಿಂದ ಸೂಚನೆ

Opinion: ಯುವ ರಾಜಕಾರಣಿಗಳಿಗೆ ಕೊಂಚ ನಿರಾಸೆ ಮೂಡಿಸಿದ ರಾಜ್ಯ ಸರ್ಕಾರ; ಏಕೆ? ಇಲ್ಲಿದೆ ಓದಿ

(Three BESCOM officials suspended for illegally amending electricity bill)

Published On - 5:06 pm, Sat, 4 September 21

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!