AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಿಚಿತ ವಾಹನ ಡಿಕ್ಕಿ, ಬೆಂಗಳೂರಿಗೆ ಹೊರಟಿದ್ದ ಮೂವರು ದಾರುಣ ಸಾವು

ಕೋಲಾರ: ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯೊಡೆದು ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ರೀನಿವಾಸಪುರದ ಗಾಂಧಿನಗರ ನಿವಾಸಿಗಳಾದ ಯಶವಂತ್​ (20), ದೊಡ್ಡ ವೆಂಕಟೇಶಪ್ಪ (50) ಹಾಗೂ ಯಲ್ಲಪ್ಪ (18) ಮೃತ ದುರ್ದೈವಿಗಳು. ಶ್ರೀನಿವಾಸಪುರದಿಂದ ಬೆಂಗಳೂರಿಗೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಬೈಕ್​ನಲ್ಲಿ ಹೋಗುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿಯೊಡೆದು ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪರಿಚಿತ ವಾಹನ ಡಿಕ್ಕಿ, ಬೆಂಗಳೂರಿಗೆ ಹೊರಟಿದ್ದ ಮೂವರು ದಾರುಣ ಸಾವು
ಸಾಧು ಶ್ರೀನಾಥ್​
|

Updated on: Mar 05, 2020 | 2:13 PM

Share

ಕೋಲಾರ: ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯೊಡೆದು ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ರೀನಿವಾಸಪುರದ ಗಾಂಧಿನಗರ ನಿವಾಸಿಗಳಾದ ಯಶವಂತ್​ (20), ದೊಡ್ಡ ವೆಂಕಟೇಶಪ್ಪ (50) ಹಾಗೂ ಯಲ್ಲಪ್ಪ (18) ಮೃತ ದುರ್ದೈವಿಗಳು.

ಶ್ರೀನಿವಾಸಪುರದಿಂದ ಬೆಂಗಳೂರಿಗೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಬೈಕ್​ನಲ್ಲಿ ಹೋಗುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿಯೊಡೆದು ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More